ETV Bharat / state

ಹಾಡಹಗಲೇ ಸಿನಿಮಾ ಸ್ಟೈಲ್​​​ನಲ್ಲಿ ಮರ್ಡರ್​​​... ಆತಂಕದಲ್ಲಿ ಮಂಡ್ಯ ಜನ

ಹಾಡ ಹಗಲೇ ಲಾಂಗ್ ಹಿಡಿದು ಫೀಲ್ಡ್​​ಗಿಳಿದ ರೌಡಿಗಳು, ಸಿನಿಮಾ ಶೈಲಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ರೌಡಿ ಚಟುವಟಿಕೆಯಿಂದ ಜನರು ಆತಂಕಕ್ಕೊಳಗಾಗಿದ್ದಾರೆ.

author img

By

Published : Oct 19, 2019, 2:56 PM IST

Updated : Oct 19, 2019, 9:59 PM IST

ಮಂಡ್ಯದಲ್ಲಿ ಯವಕನ ಬರ್ಬರ ಹತ್ಯೆ

ಮಂಡ್ಯ : ಹಾಡಹಗಲೇ ಲಾಂಗ್ ಹಿಡಿದು ಫೀಲ್ಡ್​​ಗಿಳಿದ ರೌಡಿಗಳು, ಸಿನಿಮಾ ಶೈಲಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ರೌಡಿ ಚಟುವಟಿಕೆಯಿಂದ ಜನರು ಆತಂಕಕ್ಕೊಳಗಾಗಿದ್ದಾರೆ.

ಮಂಡ್ಯದಲ್ಲಿ ಯವಕನ ಬರ್ಬರ ಹತ್ಯೆ

ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಸಾರ್ವಜನಿಕರ ಎದುರೇ ನವೀನ್ ಅಲಿಯಾಸ್ ಕುಟ್ಟಿ (32) ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ. ಮೂವರು ಯುವಕ‌ರು ನಡುರಸ್ತೆಯಲ್ಲಿ ನವೀನ್‌ನನ್ನು ಬೆನ್ನಟ್ಟಿಕೊಂಡು ಹೋಗಿ ಲಾಂಗ್‌ನಿಂದ ಹಲ್ಲೆ ಮಾಡಿ, ಚಾಕುವಿನಿಂದ ಚುಚ್ಚಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ನವೀನ್​ನನ್ನು ಕೆ.ಎಂ.ದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನವೀನ್​ ಸಾವನ್ನಪ್ಪಿದ್ದಾನೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮಂಡ್ಯ : ಹಾಡಹಗಲೇ ಲಾಂಗ್ ಹಿಡಿದು ಫೀಲ್ಡ್​​ಗಿಳಿದ ರೌಡಿಗಳು, ಸಿನಿಮಾ ಶೈಲಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ರೌಡಿ ಚಟುವಟಿಕೆಯಿಂದ ಜನರು ಆತಂಕಕ್ಕೊಳಗಾಗಿದ್ದಾರೆ.

ಮಂಡ್ಯದಲ್ಲಿ ಯವಕನ ಬರ್ಬರ ಹತ್ಯೆ

ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಸಾರ್ವಜನಿಕರ ಎದುರೇ ನವೀನ್ ಅಲಿಯಾಸ್ ಕುಟ್ಟಿ (32) ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ. ಮೂವರು ಯುವಕ‌ರು ನಡುರಸ್ತೆಯಲ್ಲಿ ನವೀನ್‌ನನ್ನು ಬೆನ್ನಟ್ಟಿಕೊಂಡು ಹೋಗಿ ಲಾಂಗ್‌ನಿಂದ ಹಲ್ಲೆ ಮಾಡಿ, ಚಾಕುವಿನಿಂದ ಚುಚ್ಚಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ನವೀನ್​ನನ್ನು ಕೆ.ಎಂ.ದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನವೀನ್​ ಸಾವನ್ನಪ್ಪಿದ್ದಾನೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Intro:ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ರೌಡಿ ಚಟುವಟಿಕೆ ಸಕ್ರಿಯಗೊಂಡಿದೆ. ಹಾಡು ಹಗಲೇ ಲಾಂಗ್ ಹಿಡಿದು ಯುವಕನ್ನು ಅಟ್ಟಾಡಿಸಿ ಕೊಲೆ ಮಾಡಿದ ಘಟನೆ ನಡೆದಿದೆ.
ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಸಾರ್ವಜನಿಕರ ಎದುರೇ ನವೀನ್ ಅಲಿಯಾಸ್ ಕುಟ್ಟಿ (32) ಎಂಬಾತನನ್ನು ಕೊಲೆ ಮಾಡಲಾಗಿದ್ದು, ಮೂವರು ಯುವಕ‌ರು ಅಟ್ಟಾಡಿಸಿ ಚುಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಮಂಡ್ಯ ರಸ್ತೆಯಲ್ಲಿ ಸಿನಿಮಾ ಶೈಲಿಯಲ್ಲಿ ನವೀನ್‌ನನ್ನು ಅಟ್ಟಾಡಿಸಿ ಲಾಂಗ್‌ನಿಂದ ಹಲ್ಲೆ ಮಾಡಿ, ಚಾಕುವಿನಿಂದ ಚುಚ್ಚಿದ್ದಾರೆ. ತೀರ್ವವಾಗಿ ಹಲ್ಲೆಗೆ ಒಳಗಾಗಿದಗದ ನವೀನ್ ಗೆ ಕೆ.ಎಂ. ದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ.
ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.Body:ಯತೀಶ್ ಬಾಬುConclusion:
Last Updated : Oct 19, 2019, 9:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.