ಮಂಡ್ಯ: ರೇಷ್ಮೆ ಕೃಷಿ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ರೈತರ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮದ್ದೂರು ತಾಲೂಕಿನ ಮುಡೇನಹಳ್ಳಿ ಬಳಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ 40ಕ್ಕೂ ಹೆಚ್ಚು ರೈತರು ರೇಷ್ಮೆ ಇಲಾಖೆ ವತಿಯಿಂದ ಖಾಸಗಿ ಬಸ್ನಲ್ಲಿ ಕೃಷಿ ಅಧ್ಯಯನ ಪ್ರವಾಸಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ರೈತರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೆ.ಎಂ.ದೊಡ್ಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.