ETV Bharat / state

ಚೆಕ್ ಪೋಸ್ಟ್ ತಪಾಸಣೆಗೆ ಬಂದ ಮಂಡ್ಯ ಡಿಸಿ... 7 ಲಕ್ಷ ನಗದು ವಶ - ಚೆಕ್ ಪೋಸ್ಟ್ ತಪಾಸಣೆ ಸುದ್ದಿ

ಉಪ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಅವರು ಚೆಕ್ ಪೋಸ್ಟ್​ ಬಳಿ ತೆರಳಿ ವಾಹನ ಸವಾರರನ್ನು ಖುದ್ದಾಗಿ ತಾವೇ ತಪಾಸಣೆ ನಡೆಸಿದರು.

ಚೆಕ್ ಪೋಸ್ಟ್ ತಪಾಸಣೆಗೆ ನಿಂತ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್
author img

By

Published : Nov 16, 2019, 9:28 PM IST

ಮಂಡ್ಯ: ಉಪ ಚುನಾವಣೆಯಲ್ಲಿ ಕಾಳಧನದ್ದೇ ಕಾರುಬಾರು ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಚೆಕ್ ಪೋಸ್ಟ್ ಗಳ ಪರಿಶೀಲನೆಗೆ ನಿಂತು, ಖುದ್ದು ವಾಹನ ಸವಾರರ ತಪಾಸಣೆ ನಡೆಸಿದರು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಬಲ್ಲೇನಹಳ್ಳಿ, ಕಳಸ್ತವಾಡಿ ಚೆಕ್ ಪೋಸ್ಟ್​ಗಳಿಗೆ ಭೇಟಿ ನೀಡಿ ಡಿಸಿ ಪರಿಶೀಲನೆ ಮಾಡಿದರು. ಚೆಕ್ ಪೋಸ್ಟ್​ಗಳ ನಂತರ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ, ತಯಾರಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

7 ಲಕ್ಷ ನಗದು ವಶ: ಕೆ.ಆರ್.ಪೇಟೆ ತಾಲೂಕಿನ ಬಲ್ಲೇನಹಳ್ಳಿ ಚೆಕ್ ಪೋಸ್ಟ್​ನಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂಪಾಯಿ ನಗದನ್ನು ಚೆಕ್ ಪೋಸ್ಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಅರೇನಹಳ್ಳಿ ಗ್ರಾಮದಲ್ಲಿ 2.25 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದು ಕಾರಿನ ಮಾಲೀಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಎರಡೂ ಪ್ರಕರಣ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿವೆ.

ಮಂಡ್ಯ: ಉಪ ಚುನಾವಣೆಯಲ್ಲಿ ಕಾಳಧನದ್ದೇ ಕಾರುಬಾರು ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಚೆಕ್ ಪೋಸ್ಟ್ ಗಳ ಪರಿಶೀಲನೆಗೆ ನಿಂತು, ಖುದ್ದು ವಾಹನ ಸವಾರರ ತಪಾಸಣೆ ನಡೆಸಿದರು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಬಲ್ಲೇನಹಳ್ಳಿ, ಕಳಸ್ತವಾಡಿ ಚೆಕ್ ಪೋಸ್ಟ್​ಗಳಿಗೆ ಭೇಟಿ ನೀಡಿ ಡಿಸಿ ಪರಿಶೀಲನೆ ಮಾಡಿದರು. ಚೆಕ್ ಪೋಸ್ಟ್​ಗಳ ನಂತರ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ, ತಯಾರಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

7 ಲಕ್ಷ ನಗದು ವಶ: ಕೆ.ಆರ್.ಪೇಟೆ ತಾಲೂಕಿನ ಬಲ್ಲೇನಹಳ್ಳಿ ಚೆಕ್ ಪೋಸ್ಟ್​ನಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂಪಾಯಿ ನಗದನ್ನು ಚೆಕ್ ಪೋಸ್ಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ತಾಲೂಕಿನ ಅರೇನಹಳ್ಳಿ ಗ್ರಾಮದಲ್ಲಿ 2.25 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದು ಕಾರಿನ ಮಾಲೀಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಎರಡೂ ಪ್ರಕರಣ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿವೆ.

Intro:ಮಂಡ್ಯ: ಉಪ ಚುನಾವಣೆಯಲ್ಲಿ ಕಾಳಧನದ್ದೇ ಕಾರು ಬಾರು ಎಂಬ ಮಾತುಗಳು ಕೇಳಿ ಬಂದಿವೆ. ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿಯೇ ಅಖಾಡಕ್ಕೆ ಧುಮುಕಿದ್ದು, ಚೆಕ್ ಪೋಸ್ಟ್ ಗಳ ಪರಿಶೀಲನೆ ಜೊತೆಗೆ, ವಾಹನ ಸವಾರರ ತಪಾಸಣೆಯನ್ನು ಖುದ್ದು ಪರೀಶಿಲನೆ ಮಾಡುತ್ತಿದ್ದಾರೆ.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಬಲ್ಲೇನಹಳ್ಳಿ, ಕಳಸ್ತವಾಡಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಜೊತೆಗೆ ಖುದ್ದು ವಾಹನಗಳು ಹಾಗೂ ವಾಹನ ಸವಾರರ ತಪಾಸಣೆ ನಡೆಸಿ ಹದ್ದಿನ ಕಣ್ಣು ನೆಟ್ಟಿದ್ದಾರೆ.
ಚೆಕ್ ಪೋಸ್ಟ್ ಗಳ ನಂತರ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ತಯಾರಿ ಬಗ್ಗೆಯೂ ಮಾಹಿತಿ ಪಡೆದುಕೊಂಡರು.
7 ಲಕ್ಷ ನಗದು ವಶ: ಕೆ.ಆರ್.ಪೇಟೆ ತಾಲ್ಲೂಕಿನ ಬಲ್ಲೇನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂಪಾಯಿ ನಗದನ್ನು ಚೆಕ್ ಪೋಸ್ಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ 2.25 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದು ಕಾರಿನ ಮಾಲೀಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಎರಡೂ ಪ್ರಕರಣ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿವೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.