ETV Bharat / state

ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ನಾನೇ ಕಾನೂನು ಹೋರಾಟ ಮಾಡ್ತೇನೆ: ಸಿಎಂ ಇಬ್ರಾಹಿಂ ವಾರ್ನಿಂಗ್​

ಇಂದು ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ, ಮಂಡ್ಯದ ಗುತ್ತಲು ಬಡಾವಣೆಯಲ್ಲಿರುವ ವಿದ್ಯಾರ್ಥಿನಿ ಮುಸ್ಕಾನ್ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್​ ಈಶ್ವರಪ್ಪ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Feb 11, 2022, 5:53 PM IST

CM Ibrahim outrage against minister Eshwarappa at Mandya
ಸಚಿವ ಈಶ್ವರಪ್ಪ ವಿರುದ್ಧ ಸಿಎಂ ಇಬ್ರಾಹಿಂ ಆಕ್ರೋಶ

ಮಂಡ್ಯ: ಸಂವಿಧಾನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವ ಸಚಿವ ಈಶ್ವರಪ್ಪ ದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಆರಿಸುತ್ತೇನೆ ಎಂದು ಹೇಳಿದ ದಿನವೇ ಸಂಪುಟದಿಂದ ಕೈ ಬಿಡಬೇಕಿತ್ತು. ಕೂಡಲೇ ಅವರನ್ನು ಬಂಧಿಸಬೇಕು. ಇಲ್ಲವಾದರೆ ನಾನು ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ.

ಸಚಿವ ಈಶ್ವರಪ್ಪ ವಿರುದ್ಧ ಸಿಎಂ ಇಬ್ರಾಹಿಂ ಆಕ್ರೋಶ

ಜಿಲ್ಲೆಯ ಹೊಳಲು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜವನ್ನು ಹಾರಿಸುತ್ತೇನೆ ಎಂದರೆ ಏನು ಅರ್ಥ, ಈಶ್ವರಪ್ಪ ಸಂವಿಧಾನದ ಶಪತವನ್ನು ಮುರಿದಿದ್ದಾರೆ. ಕೂಡಲೇ ಅವರನ್ನು ಬಂಧಿಸಿ, ಮಂತ್ರಿ ಮಂಡಲದಿಂದ ಹೊರ ಹಾಕಬೇಕು. ಅವರ ಮೇಲೆ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಗುಡುಗಿದರು.

ಹಿಜಾಬ್ ವಿವಾದ ವಿಚಾರವಾಗಿ ಪ್ರತಿಕ್ರಿಯಿಸಿ, ತಲೆ ಮೇಲೆ ಸೆರಗು ಹಾಕ್ತೇನೆ ಅಂದ್ರೆ ಬೇಡ ಅಂತಾರೇ ಯಾವ ಸಂಸ್ಕೃತಿ ಇದು. ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾವ ತಾಯಿ ತಲೆಯ ಮೇಲೆ ಸೆರಗು ಹಾಕದೇ ಇರ್ತಾರೆ‌. ಪ್ರತಿಭಾ ಪಾಟೀಲ್ ಕೂಡ ಸೆರಗು ಹಾಕುತ್ತಿದ್ದರು. ಕೊರೊನಾ ಬಂದು ಪ್ರಾಣ ಹೋಗುತ್ತೆ ಎಂದಿದ್ದಾಕ್ಕೆ ಮೂಗಿಗೆ ಬಟ್ಟೆ ಕಟ್ಟಿಕೊಳ್ಲುತ್ತೀರಾ, ಅದೇ ತಲೆ ಮೇಲೆ ಸೆರಗು ಹಾಕೋದು ಬೇಡ ಎನ್ನುತ್ತಿರುವುದು ನೋಡಿದ್ರೆ ನಾಚಿಕೆ ಆಗುತ್ತೆ ಎಂದರು.

ರಾಮಮಂದಿರ, ಗೋ ಹತ್ಯೆ ಎಲ್ಲ ಮುಗಿತು, ಯಾವುದೇ ಸಮಸ್ಯೆ ಇಲ್ಲ. ಅದಕ್ಕೆ ಬಿಜೆಪಿಯವರು ಚುನಾವಣೆ ಹತ್ತಿರ ಇರುವ ಕಾರಣ ಹೊಸ ಕ್ಯಾತೆ ತೆಗೆದಿದ್ದಾರೆ. ಅಚ್ಚೆ ದಿನ್ ಆಯೇಂಗೆ ಎಂದೇಳಿ ನೂರು ರೂಪಾಯಿ ಪೆಟ್ರೋಲ್ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಮುಸ್ಕಾನ್ ಧೈರ್ಯವಂತ ವಿದ್ಯಾರ್ಥಿ, ಅಷ್ಟು ಜನ ವಿದ್ಯಾರ್ಥಿಗಳ ನಡುವೆ ಎಲ್ಲರನ್ನೂ ಎದುರಿಸುವ ಧೈರ್ಯ ತೋರಿದ್ದಾಳೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸಲು ನಾನು ಅವರ ಮನೆಗೆ ಭೇಟಿ ನೀಡಿದ್ದೇನೆ. ಅದರಲ್ಲಿ ತಪ್ಪೇನೂ ಇಲ್ಲ. ನನ್ನಂತೆಯೇ ಇನ್ನೂ ಹಲವಾರು ಜನ ಭೇಟಿ ನೀಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದರು.

ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿ ಮನೆಗೆ 'ಮಹಾ' ಕೈ ಶಾಸಕ ಭೇಟಿ: ಘೋಷಣೆ ಕೂಗಿದ್ದಕ್ಕೆ ಐಫೋನ್‌, ಸ್ಮಾರ್ಟ್‌ವಾಚ್‌ ಗಿಫ್ಟ್‌!

ಮಂಡ್ಯ: ಸಂವಿಧಾನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವ ಸಚಿವ ಈಶ್ವರಪ್ಪ ದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಆರಿಸುತ್ತೇನೆ ಎಂದು ಹೇಳಿದ ದಿನವೇ ಸಂಪುಟದಿಂದ ಕೈ ಬಿಡಬೇಕಿತ್ತು. ಕೂಡಲೇ ಅವರನ್ನು ಬಂಧಿಸಬೇಕು. ಇಲ್ಲವಾದರೆ ನಾನು ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ.

ಸಚಿವ ಈಶ್ವರಪ್ಪ ವಿರುದ್ಧ ಸಿಎಂ ಇಬ್ರಾಹಿಂ ಆಕ್ರೋಶ

ಜಿಲ್ಲೆಯ ಹೊಳಲು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜವನ್ನು ಹಾರಿಸುತ್ತೇನೆ ಎಂದರೆ ಏನು ಅರ್ಥ, ಈಶ್ವರಪ್ಪ ಸಂವಿಧಾನದ ಶಪತವನ್ನು ಮುರಿದಿದ್ದಾರೆ. ಕೂಡಲೇ ಅವರನ್ನು ಬಂಧಿಸಿ, ಮಂತ್ರಿ ಮಂಡಲದಿಂದ ಹೊರ ಹಾಕಬೇಕು. ಅವರ ಮೇಲೆ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಗುಡುಗಿದರು.

ಹಿಜಾಬ್ ವಿವಾದ ವಿಚಾರವಾಗಿ ಪ್ರತಿಕ್ರಿಯಿಸಿ, ತಲೆ ಮೇಲೆ ಸೆರಗು ಹಾಕ್ತೇನೆ ಅಂದ್ರೆ ಬೇಡ ಅಂತಾರೇ ಯಾವ ಸಂಸ್ಕೃತಿ ಇದು. ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾವ ತಾಯಿ ತಲೆಯ ಮೇಲೆ ಸೆರಗು ಹಾಕದೇ ಇರ್ತಾರೆ‌. ಪ್ರತಿಭಾ ಪಾಟೀಲ್ ಕೂಡ ಸೆರಗು ಹಾಕುತ್ತಿದ್ದರು. ಕೊರೊನಾ ಬಂದು ಪ್ರಾಣ ಹೋಗುತ್ತೆ ಎಂದಿದ್ದಾಕ್ಕೆ ಮೂಗಿಗೆ ಬಟ್ಟೆ ಕಟ್ಟಿಕೊಳ್ಲುತ್ತೀರಾ, ಅದೇ ತಲೆ ಮೇಲೆ ಸೆರಗು ಹಾಕೋದು ಬೇಡ ಎನ್ನುತ್ತಿರುವುದು ನೋಡಿದ್ರೆ ನಾಚಿಕೆ ಆಗುತ್ತೆ ಎಂದರು.

ರಾಮಮಂದಿರ, ಗೋ ಹತ್ಯೆ ಎಲ್ಲ ಮುಗಿತು, ಯಾವುದೇ ಸಮಸ್ಯೆ ಇಲ್ಲ. ಅದಕ್ಕೆ ಬಿಜೆಪಿಯವರು ಚುನಾವಣೆ ಹತ್ತಿರ ಇರುವ ಕಾರಣ ಹೊಸ ಕ್ಯಾತೆ ತೆಗೆದಿದ್ದಾರೆ. ಅಚ್ಚೆ ದಿನ್ ಆಯೇಂಗೆ ಎಂದೇಳಿ ನೂರು ರೂಪಾಯಿ ಪೆಟ್ರೋಲ್ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಮುಸ್ಕಾನ್ ಧೈರ್ಯವಂತ ವಿದ್ಯಾರ್ಥಿ, ಅಷ್ಟು ಜನ ವಿದ್ಯಾರ್ಥಿಗಳ ನಡುವೆ ಎಲ್ಲರನ್ನೂ ಎದುರಿಸುವ ಧೈರ್ಯ ತೋರಿದ್ದಾಳೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸಲು ನಾನು ಅವರ ಮನೆಗೆ ಭೇಟಿ ನೀಡಿದ್ದೇನೆ. ಅದರಲ್ಲಿ ತಪ್ಪೇನೂ ಇಲ್ಲ. ನನ್ನಂತೆಯೇ ಇನ್ನೂ ಹಲವಾರು ಜನ ಭೇಟಿ ನೀಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದರು.

ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿ ಮನೆಗೆ 'ಮಹಾ' ಕೈ ಶಾಸಕ ಭೇಟಿ: ಘೋಷಣೆ ಕೂಗಿದ್ದಕ್ಕೆ ಐಫೋನ್‌, ಸ್ಮಾರ್ಟ್‌ವಾಚ್‌ ಗಿಫ್ಟ್‌!

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.