ETV Bharat / state

ಒಂದಲ್ಲ, ಎರಡು ಸಾರಿ ಬಿಎಸ್​ವೈ ಕಾಲಿಗೆ ಬಿದ್ದ ಜೆಡಿಎಸ್ ಶಾಸಕ ಸುರೇಶ್​ಗೌಡ... ಕಾರಣ ಕೇಳಿದ್ರೆ ಹೀಗಂತಾರೆ

author img

By

Published : Dec 12, 2019, 5:26 PM IST

ನಾಗಮಂಗಲದ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಕಾಲಿಗೆ ಶಾಸಕ ಕೆ.ಸುರೇಶ್​ಗೌಡ ಅವರು ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು.

CM yadiyurappa visit the Adichunchanagiri matt
ಸಿಎಂ ಕಾಲಿಗೆ ಬಿದ್ದ ಜೆಡಿಎಸ್ ಶಾಸಕ

ಮಂಡ್ಯ: ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಸ್ವಾಗತ ಕೋರುವ ಹಾಗೂ ಅಲ್ಲಿಂದ ತೆರಳುವ ಸಂದರ್ಭದಲ್ಲಿ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಸುರೇಶ್​ಗೌಡ ಅವರು ಎರಡು ಬಾರಿ ಬಿಎಸ್​ವೈ ಕಾಲಿಗೆ ನಮಸ್ಕರಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸುರೇಶ್​​ಗೌಡ ಅವರು, ಯಡಿಯೂರಪ್ಪ ಹಿರಿಯರು, ತಂದೆ ಸಮಾನ. ಹೀಗಾಗಿ ಆಶೀರ್ವಾದ ಪಡೆದಿದ್ದೇನೆ. ಅವರ ಜಾಗದಲ್ಲಿ ಸಿದ್ದರಾಮಯ್ಯ ಬಂದಿದ್ದರೂ, ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಶಾಸಕ ಕೆ.ಸುರೇಶ್​ಗೌಡ

ನಾನು ಪಕ್ಷ ಬಿಟ್ಟು ಹೋಗುವ ಮಾತೇ ಇಲ್ಲ. ಈ ಹಿಂದೆ ಬಿಜೆಪಿಯಿಂದ ನನಗೆ ಆಫರ್ ಬಂದಿತ್ತು ಎಂದಿದ್ದೆ. ಈಗ ಅವರಿಗೆ ಯಾರ ಅವಶ್ಯಕತೆಯೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಯಕ್ತಿಕವಾಗಿ ನಾರಾಯಣಗೌಡ ನಾನು ಸ್ನೇಹಿತರು. ಉಪಚುನಾವಣೆಯಲ್ಲಿ ಅವರ ವಿರುದ್ಧ ಪ್ರಚಾರ ನಡೆಸಿದ್ದೇನೆ. ಕೆ.ಆರ್.ಪೇಟೆಯಲ್ಲಿ ಜೆಡಿಎಸ್‌ ಎರಡನೇ ಸ್ಥಾನಕ್ಕೆ ಬಂದಿದೆ. ಕಾಂಗ್ರೆಸ್ ಸ್ಥಿತಿ ಅಧೋಗತಿಯಾಗಿದೆ. ಜೆಡಿಎಸ್​​ನಲ್ಲಿ ಯಾವುದೇ ನೋವಿಲ್ಲ. ಪಕ್ಷ ಬಿಡುವ ಮಾತಿಲ್ಲ. ಅವೆಲ್ಲ ಊಹಾಪೋಹಗಳು ಎಂದು ಆರೋಪಗಳಿಗೆ ಅಲ್ಲಗಳೆದರು.

ಉಪಚುನಾವಣೆ ನಂತರ ಬಿಎಸ್​​ವೈ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವನ ಆಶೀರ್ವಾದ ಪಡೆದುಕೊಂಡರು. ಪೂಜೆ ನಂತರ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್​​​ನ ಶಿಕ್ಷಣ ಸಂಸ್ಥೆಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಅಲ್ಲದೆ, ಕ್ರೀಡಾಳುಗಳಿಗೆ ಶುಭಕೋರಿದರು. ಮಠದ ನಿರ್ಮಲಾನಂದ ಸ್ವಾಮೀಜಿ, ಕಂದಾಯ ಸಚಿವ ಅಶೋಕ್ ಇದ್ದರು.

ಮಂಡ್ಯ: ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಸ್ವಾಗತ ಕೋರುವ ಹಾಗೂ ಅಲ್ಲಿಂದ ತೆರಳುವ ಸಂದರ್ಭದಲ್ಲಿ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಸುರೇಶ್​ಗೌಡ ಅವರು ಎರಡು ಬಾರಿ ಬಿಎಸ್​ವೈ ಕಾಲಿಗೆ ನಮಸ್ಕರಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸುರೇಶ್​​ಗೌಡ ಅವರು, ಯಡಿಯೂರಪ್ಪ ಹಿರಿಯರು, ತಂದೆ ಸಮಾನ. ಹೀಗಾಗಿ ಆಶೀರ್ವಾದ ಪಡೆದಿದ್ದೇನೆ. ಅವರ ಜಾಗದಲ್ಲಿ ಸಿದ್ದರಾಮಯ್ಯ ಬಂದಿದ್ದರೂ, ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಶಾಸಕ ಕೆ.ಸುರೇಶ್​ಗೌಡ

ನಾನು ಪಕ್ಷ ಬಿಟ್ಟು ಹೋಗುವ ಮಾತೇ ಇಲ್ಲ. ಈ ಹಿಂದೆ ಬಿಜೆಪಿಯಿಂದ ನನಗೆ ಆಫರ್ ಬಂದಿತ್ತು ಎಂದಿದ್ದೆ. ಈಗ ಅವರಿಗೆ ಯಾರ ಅವಶ್ಯಕತೆಯೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಯಕ್ತಿಕವಾಗಿ ನಾರಾಯಣಗೌಡ ನಾನು ಸ್ನೇಹಿತರು. ಉಪಚುನಾವಣೆಯಲ್ಲಿ ಅವರ ವಿರುದ್ಧ ಪ್ರಚಾರ ನಡೆಸಿದ್ದೇನೆ. ಕೆ.ಆರ್.ಪೇಟೆಯಲ್ಲಿ ಜೆಡಿಎಸ್‌ ಎರಡನೇ ಸ್ಥಾನಕ್ಕೆ ಬಂದಿದೆ. ಕಾಂಗ್ರೆಸ್ ಸ್ಥಿತಿ ಅಧೋಗತಿಯಾಗಿದೆ. ಜೆಡಿಎಸ್​​ನಲ್ಲಿ ಯಾವುದೇ ನೋವಿಲ್ಲ. ಪಕ್ಷ ಬಿಡುವ ಮಾತಿಲ್ಲ. ಅವೆಲ್ಲ ಊಹಾಪೋಹಗಳು ಎಂದು ಆರೋಪಗಳಿಗೆ ಅಲ್ಲಗಳೆದರು.

ಉಪಚುನಾವಣೆ ನಂತರ ಬಿಎಸ್​​ವೈ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವನ ಆಶೀರ್ವಾದ ಪಡೆದುಕೊಂಡರು. ಪೂಜೆ ನಂತರ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್​​​ನ ಶಿಕ್ಷಣ ಸಂಸ್ಥೆಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಅಲ್ಲದೆ, ಕ್ರೀಡಾಳುಗಳಿಗೆ ಶುಭಕೋರಿದರು. ಮಠದ ನಿರ್ಮಲಾನಂದ ಸ್ವಾಮೀಜಿ, ಕಂದಾಯ ಸಚಿವ ಅಶೋಕ್ ಇದ್ದರು.

Intro:ಮಂಡ್ಯ: ಅನುದಾನಕ್ಕಾಗಿ ಜೆಡಿಎಸ್ ಶಾಸಕ ಸಿಎಂ ಕಾಲಿಗೆ ಎರಗಿದ್ದಾರೆ. ಕಾರ್ಯಕ್ರಮ ನಿಮಿತ್ತ ಕ್ಷೇತ್ರಕ್ಕೆ ಆಗಮಿಸಿದ್ದ ಯಡಿಯೂರಪ್ಪ ಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದವರು ಯಾರು ಅಂತ ನಿಮಗೆ ತಿಳಿಬೇಕಾ. ಹಾಗಾದರೆ ಇಲ್ಲಿದೆ ನೋಡಿ.
ನಾಗಮಂಗಲ ತಾಲ್ಲೂಕಿನ ಚುಂಚನಗಿರಿ ಮಠಕ್ಕೆ ಆಗಮಿಸಿದ್ದ ಯಡಿಯೂರಪ್ಪಗೆ ಸ್ವಾಗತ ಕೋರಿದ ಜೆಡಿಎಸ್ ಶಾಸಕ ಎರಡು ಬಾರೀ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಸಿಎಂ ಸ್ವಾಗತಿಸುವ ವೇಳೆ, ವಾಪಸ್ಸಾಗುವ ವೇಳೆಯೂ ಆಶೀರ್ವಾದದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕಾಲಭೈರವೇಶ್ವರ ದೇವಾಲಯದ ಬಳಿ ಸ್ವಾಗತಿಸಿ, ಕಾಲಿಗೆ ಬಿದ್ದು ನಮಸ್ಕರಿಸಿದ್ದ ಶಾಸಕ. ಸಿಎಂ ವಾಪಸ್ಸಾಗುವ ವೇಳೆ, ವೇದಿಕೆ ಮೇಲೆಯೂ ಕಾಲಿಗೆ ಬಿದ್ದು ನಮಸ್ಕಾರ ಮಾಡಿದರು.
ಸಿಎಂ‌ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವಿಚಾರವಾಗಿ ಶಾಸಕ‌ ಕೆ.ಸುರೇಶ್ ಗೌಡ ಹೇಳಿಕೆ ನೀಡಿ, ಯಡಿಯೂರಪ್ಪ ಹಿರಿಯರು, ತಂದೆ ಸಮಾನ
ಹೀಗಾಗಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದೇನೆ. ಅವ್ರ ಜಾಗದಲ್ಲಿ ಸಿದ್ದರಾಮಯ್ಯ ಬಂದಿದ್ರು ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದೆ ಎಂದರು.
ನಾನು ಪಕ್ಷ ಬಿಟ್ಟು ಹೋಗುವ ಮಾತೇ ಇಲ್ಲ. ಹಿಂದೆ ಬಿಜೆಪಿಯಿಂದ ನನಗೆ ಆಫರ್ ಬಂದಿತ್ತು ಎಂದಿದ್ದೆ. ಈಗ ಅವ್ರಿಗೆ ಯಾರ ಅವಶ್ಯಕತೆಯು ಇಲ್ಲ. ನಾರಾಯಣಗೌಡ ನಾನು ಸ್ನೇಹಿತರು. ಚುನಾವಣೆಯಲ್ಲಿ ಅವರ ವಿರುದ್ಧ ಪ್ರಚಾರ ನಡೆಸಿದ್ದೇನೆ. ವೈಯಕ್ತಿಕವಾಗಿ ನಾವಿಬ್ರು ಸ್ನೇಹಿತರು. ಕೆ.ಆರ್. ಪೇಟೆಯಲ್ಲಿ ಜೆಡಿಎಸ್‌ ಎರಡನೇ ಸ್ಥಾನಕ್ಕೆ ಬಂದಿದೆ. ಕಾಂಗ್ರೆಸ್ ಸ್ಥಿತಿ ಅದೋಗತಿಯಾಗಿದೆ. ಜೆಡಿಎಸ್‌ ಪಕ್ಷದಲ್ಲಿ ನನಗೆ ಯಾವುದೇ ನೋವಿಲ್ಲ. ನಾನು ಪಕ್ಷ ಬಿಡುವ ಮಾತೇ ಇಲ್ಲ ಎಂದರು.

ಬೈಟ್: ಸುರೇಶ್ ಗೌಡ, ಶಾಸಕBody:Yathish babu k hConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.