ETV Bharat / state

ಚುನಾವಣೆ ಮುಗೀತು, ಗಲಾಟೆ ಶುರುವಾಯ್ತು... ಮದ್ದೂರಲ್ಲಿ ಸುಮಲತಾ ಬೆಂಬಲಿಗರ ಮೇಲೆ ಹಲ್ಲೆ!

author img

By

Published : May 24, 2019, 10:47 AM IST

ಲೋಕಸಭಾ ಚುನಾವಣೆಯ ಫಲಿತಾಂಶವೇನೋ ಹೊರಬಿದ್ದಿದೆ. ಬಿಜೆಪಿ ಕೂಡಾ ಗೆದ್ದು ಬೀಗಿದೆ. ಆದ್ರೀಗ ಕಾರ್ಯಕರ್ತರ ನಡುವೆ ಜಗಳ ಶುರುವಾಗಿದೆ. ಮದ್ದೂರಿನಲ್ಲಿ ಸುಮಲತಾ ಅಭಿಮಾನಿ ಮತ್ತು ಜೆಡಿಎಸ್​ ಕಾರ್ಯಕರ್ತರು ಮಧ್ಯೆ ನಡೆದ ಗಲಾಟೆಯಲ್ಲು ಇಬ್ಬರು ಗಾಯಗೊಂಡಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು

ಮಂಡ್ಯ: ಸುಮಲತಾ ಗೆಲುವಿನ ಬೆನ್ನಲ್ಲೇ ಕಾರ್ಯಕರ್ತರ ವಾರ್ ಆರಂಭವಾಗಿದೆ. ಜೆಡಿಎಸ್ ಹಾಗೂ ಸುಮಲತಾ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಕೂಳಗೆರೆ ಗೇಟ್ ಬಳಿ ನಡೆದಿದೆ.

ಸುಮಲತಾ ಬೆಂಬಲಿಗರಾದ ಶಶಿಧರ್ ಮತ್ತು ಕುಮಾರ್ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದ್ದು, ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು

ನಿನ್ನೆ ಜೆಡಿಎಸ್ ಹಾಗೂ ಸುಮಲತಾ ಬೆಂಬಲಿಗರ ನಡುವೆ ಈ ಗಲಾಟೆ ಆಗಿದೆ ಎಂದು ತಿಳಿದುಬಂದಿದೆ. ಸುಮಲತಾ ಬೆಂಬಲಿಗರ ಮೇಲೆ ಹಲ್ಲೆ ಮಾಡಿದ ಆರೋಪ ಮೇಲೆ ಜೆಡಿಎಸ್ ಕಾರ್ಯಕರ್ತರಾದ ಕುಲ್​ದೀಪ್, ಅಭಿಷೇಕ್, ಪ್ರಮೋದ್ ಹಾಗೂ ವರುಣ ಎಂಬುವರ ವಿರುದ್ಧ ಮದ್ದೂರು ಠಾಣೆಯಲ್ಲಿ ದೂರು ನೀಡಲಾಗಿದೆ.

ಸುಮಲತಾ ಗೆಲುವಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಮಧ್ಯೆ ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದೆ. ಇದರ ವಿಡಿಯೋ ಕೂಡಾ ವೈರಲ್​ ಆಗಿದ್ದು, ಇದರಲ್ಲಿ ಜೆಡಿಎಸ್​ ಕಾರ್ಯಕರ್ತನೋರ್ವ ಸುಮಲತಾ ಬೆಂಬಲಿಗನಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಅಲ್ಲದೆ ತಮ್ಮ ಮೇಲೆ ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ಮಾಡಲಾಗಿದೆ ಎಂದು ಗಾಯಗೊಂಡಿರುವ ಸುಮಲತಾ ಬೆಂಬಲಿಗರು ದೂರು ನೀಡಿದ್ದಾರೆ.

ಮಂಡ್ಯ: ಸುಮಲತಾ ಗೆಲುವಿನ ಬೆನ್ನಲ್ಲೇ ಕಾರ್ಯಕರ್ತರ ವಾರ್ ಆರಂಭವಾಗಿದೆ. ಜೆಡಿಎಸ್ ಹಾಗೂ ಸುಮಲತಾ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಕೂಳಗೆರೆ ಗೇಟ್ ಬಳಿ ನಡೆದಿದೆ.

ಸುಮಲತಾ ಬೆಂಬಲಿಗರಾದ ಶಶಿಧರ್ ಮತ್ತು ಕುಮಾರ್ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದ್ದು, ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು

ನಿನ್ನೆ ಜೆಡಿಎಸ್ ಹಾಗೂ ಸುಮಲತಾ ಬೆಂಬಲಿಗರ ನಡುವೆ ಈ ಗಲಾಟೆ ಆಗಿದೆ ಎಂದು ತಿಳಿದುಬಂದಿದೆ. ಸುಮಲತಾ ಬೆಂಬಲಿಗರ ಮೇಲೆ ಹಲ್ಲೆ ಮಾಡಿದ ಆರೋಪ ಮೇಲೆ ಜೆಡಿಎಸ್ ಕಾರ್ಯಕರ್ತರಾದ ಕುಲ್​ದೀಪ್, ಅಭಿಷೇಕ್, ಪ್ರಮೋದ್ ಹಾಗೂ ವರುಣ ಎಂಬುವರ ವಿರುದ್ಧ ಮದ್ದೂರು ಠಾಣೆಯಲ್ಲಿ ದೂರು ನೀಡಲಾಗಿದೆ.

ಸುಮಲತಾ ಗೆಲುವಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಮಧ್ಯೆ ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದೆ. ಇದರ ವಿಡಿಯೋ ಕೂಡಾ ವೈರಲ್​ ಆಗಿದ್ದು, ಇದರಲ್ಲಿ ಜೆಡಿಎಸ್​ ಕಾರ್ಯಕರ್ತನೋರ್ವ ಸುಮಲತಾ ಬೆಂಬಲಿಗನಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಅಲ್ಲದೆ ತಮ್ಮ ಮೇಲೆ ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ಮಾಡಲಾಗಿದೆ ಎಂದು ಗಾಯಗೊಂಡಿರುವ ಸುಮಲತಾ ಬೆಂಬಲಿಗರು ದೂರು ನೀಡಿದ್ದಾರೆ.

Intro:ಮಂಡ್ಯ: ಸುಮಲತಾ ಗೆಲುವಿನ ಬೆನ್ನಲ್ಲೇ ಕಾರ್ಯಕರ್ತರ ವಾರ್ ಆರಂಭವಾಗಿದೆ. ಜೆಡಿಎಸ್ ಹಾಗೂ ಸುಮಲತಾ ಬೆಂಬಲಿಗರ ನಡುವೆ ಹೊಡೆದಾಟ ನಡೆದು, ಓರ್ವ ಗಾಯಗೊಂಡ ಘಟನೆ ಮದ್ದೂರು ತಾಲ್ಲೂಕಿನ ಕೂಳಗೆರೆ ಗೇಟ್ ಬಳಿ ನಡೆದಿದೆ.
ಸುಮಲತಾ ಬೆಂಬಲಿಗರಾದ ಶಶಿಧರ್ ಮತ್ತು ಕುಮಾರ್ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಲಾಗಿದ್ದು, ಗಾಯಾಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನೆನ್ನೆ ಜೆಡಿಎಸ್ ಹಾಗೂ ಸುಮಲತಾ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಸುಮಲತಾ ಬೆಂಬಲಿಗರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರಾದ ಕುಲ್ ದೀಪ್,ಅಭಿಷೇಕ್, ಪ್ರಮೋದ್, ವರುಣ ಮೇಲೆ ದೂರು ನೀಡಲಾಗಿದೆ.
ಸುಮಲತಾ ಗೆಲುವಿನ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡದಿದೆ ಎನ್ನಲಾಗಿದೆ.ಬಿಯರ್ ಬಾಟಲಿ ಹಾಗೂ ಚಾಕುವಿಬಿಂದ ಹಲ್ಲೆ ಮಾಡಿದ್ದಾರೆ ಎಂದು ಗಾಯಾಳುಗಳು ದೂರು ನೀಡಿದ್ದಾರೆ.
ಗಾಯಾಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.