ETV Bharat / state

ನಿಖಿಲ್​ ಬೆಂಬಲಿಸಲು ಕಾಂಗ್ರೆಸಿಗರ ವಿರೋಧ: ಶಿಸ್ತುಕ್ರಮದ ಎಚ್ಚರಿಕೆಗೂ ಬಗ್ಗದ ಕೈ ಕಾರ್ಯಕರ್ತರು

author img

By

Published : Apr 10, 2019, 4:57 AM IST

ಮಂಡ್ಯ ಲೋಕಸಭೆಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೆಂಬಲಿಸಲ್ಲ ಎಂದು ಕಾಂಗ್ರೆಸ್​ ಸಭೆಯಿಂದ ಕಾರ್ಯಕರ್ತರು ಹೊರನಡೆದ ಘಟನೆ ನಡೆದಿದೆ.

ಮೈತ್ರಿ ಅಭ್ಯರ್ಥಿ ನಿಖಿಲ್ ಬೆಂಬಲಿಸಲ್ಲ ಎಂದ ಕಾಂಗ್ರೆಸ್​ ಕಾರ್ಯಕರ್ತರು

ಮಂಡ್ಯ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಒಪ್ಪದ ಕಾಂಗ್ರೆಸ್ಸಿಗರು ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಇದೀಗ ಮಾಜಿ ಕೇಂದ್ರ ಸಚಿವರ ಎದುರೇ ಕಾಂಗ್ರೆಸ್​ ಕಾರ್ಯಕರ್ತರು ನಿಖಿಲ್ ಬೆಂಬಲಿಸಲು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ. ‌

ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್‌ರ ಮನೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ನಿಖಿಲ್​ರನ್ನು ಬೆಂಬಲಿಸುವ ಕುರಿತು ಕಾಂಗ್ರೆಸ್​ ಕಾರ್ಯಕರ್ತರು ಗದ್ದಲ ಆರಂಭಿಸಿದರು. ಈ ವೇಳೆ ನಾಯಕರ ಮೇಲೆ ಹರಿಹಾಯ್ದರು.

ಪುರಸಭೆ ಮಾಜಿ ಅಧ್ಯಕ್ಷ ಹೊಸಹೊಳಲು ಕೃಷ್ಣೇಗೌಡ, ಶೀಳನೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರಕಾಶ್, ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಚೇತನ್ ಕುಮಾರ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಡಿ.ಪ್ರೇಮಕುಮಾರ್ ಕಾಂಗ್ರೆಸ್​ ನಾಯಕರೊಂದಿಗೆ ವಾಗ್ವಾದಕ್ಕಿಳಿದರು.

ಮೈತ್ರಿ ಅಭ್ಯರ್ಥಿ ನಿಖಿಲ್ ಬೆಂಬಲಿಸಲ್ಲ ಎಂದ ಕಾಂಗ್ರೆಸ್​ ಕಾರ್ಯಕರ್ತರು

ಗಲಾಟೆ ನಿಯಂತ್ರಿಸಲು ವಿಫಲರಾದ ರೆಹಮಾನ್ ಖಾನ್​ ಸೇರಿ ಹಲವು ಮುಖಂಡರು ಮೂಕ ಪ್ರೇಕ್ಷಕರಂತೆ ಸುಮ್ಮನೆ ಕೂರುವಂತಾಯಿತು.

ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕೆಯುಐಡಿಎಫ್​​ಸಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿಖಾನ್, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಯೂನಸ್ ಖಾನ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡ, ಮುಖಂಡ ಶೀಳನೆರೆ ರಮೇಶ್ ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಹಾಜರಿದ್ದರೂ ಗಲಾಟೆ ನಿಯಂತ್ರಿಸಲಾಗಲಿಲ್ಲ.

ಭಿನ್ನಾಭಿಪ್ರಾಯ ಮರೆತು ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು. ಮೈತ್ರಿಧರ್ಮದ ವಿರುದ್ಧವಾಗಿ ಕೆಲಸ ಮಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರೂ, ಕಾರ್ಯಕರ್ತರು ಮುಖಂಡರ ಮಾತಿಗೆ ಕವಡೆಕಾಸಿನ ಬೆಲೆ ನೀಡದೆ ಹೊರ ನಡೆದರು.

ಮಂಡ್ಯ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಒಪ್ಪದ ಕಾಂಗ್ರೆಸ್ಸಿಗರು ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಇದೀಗ ಮಾಜಿ ಕೇಂದ್ರ ಸಚಿವರ ಎದುರೇ ಕಾಂಗ್ರೆಸ್​ ಕಾರ್ಯಕರ್ತರು ನಿಖಿಲ್ ಬೆಂಬಲಿಸಲು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ. ‌

ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್‌ರ ಮನೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ನಿಖಿಲ್​ರನ್ನು ಬೆಂಬಲಿಸುವ ಕುರಿತು ಕಾಂಗ್ರೆಸ್​ ಕಾರ್ಯಕರ್ತರು ಗದ್ದಲ ಆರಂಭಿಸಿದರು. ಈ ವೇಳೆ ನಾಯಕರ ಮೇಲೆ ಹರಿಹಾಯ್ದರು.

ಪುರಸಭೆ ಮಾಜಿ ಅಧ್ಯಕ್ಷ ಹೊಸಹೊಳಲು ಕೃಷ್ಣೇಗೌಡ, ಶೀಳನೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರಕಾಶ್, ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಚೇತನ್ ಕುಮಾರ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಡಿ.ಪ್ರೇಮಕುಮಾರ್ ಕಾಂಗ್ರೆಸ್​ ನಾಯಕರೊಂದಿಗೆ ವಾಗ್ವಾದಕ್ಕಿಳಿದರು.

ಮೈತ್ರಿ ಅಭ್ಯರ್ಥಿ ನಿಖಿಲ್ ಬೆಂಬಲಿಸಲ್ಲ ಎಂದ ಕಾಂಗ್ರೆಸ್​ ಕಾರ್ಯಕರ್ತರು

ಗಲಾಟೆ ನಿಯಂತ್ರಿಸಲು ವಿಫಲರಾದ ರೆಹಮಾನ್ ಖಾನ್​ ಸೇರಿ ಹಲವು ಮುಖಂಡರು ಮೂಕ ಪ್ರೇಕ್ಷಕರಂತೆ ಸುಮ್ಮನೆ ಕೂರುವಂತಾಯಿತು.

ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕೆಯುಐಡಿಎಫ್​​ಸಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿಖಾನ್, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಯೂನಸ್ ಖಾನ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡ, ಮುಖಂಡ ಶೀಳನೆರೆ ರಮೇಶ್ ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಹಾಜರಿದ್ದರೂ ಗಲಾಟೆ ನಿಯಂತ್ರಿಸಲಾಗಲಿಲ್ಲ.

ಭಿನ್ನಾಭಿಪ್ರಾಯ ಮರೆತು ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು. ಮೈತ್ರಿಧರ್ಮದ ವಿರುದ್ಧವಾಗಿ ಕೆಲಸ ಮಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರೂ, ಕಾರ್ಯಕರ್ತರು ಮುಖಂಡರ ಮಾತಿಗೆ ಕವಡೆಕಾಸಿನ ಬೆಲೆ ನೀಡದೆ ಹೊರ ನಡೆದರು.

Intro:ಮಂಡ್ಯ: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರಮಾಡಲು ಕಾಂಗ್ರೆಸ್ ನಲ್ಲಿ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರದ ಮಾಜಿ ಸಚಿವರ ಮುಂದೆಯೇ ಕಾರ್ಯಕರ್ತರು ನಿಖಿಲ್ ಬೆಂಬಲಿಸಲು ವಿರೋಧ ವ್ಯಕ್ತಪಡಿಸಿ ವಾಗ್ವಾದ ಮಾಡಿದ ಘಟನೆ ನಡೆದಿದೆ‌
ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್‌ರ ಮನೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ನಿಖಿಲ್ ಗೆ ಬೆಂಬಲ ಕುರಿತು ಕಾರ್ಯಕರ್ತರು ಗದ್ದಲ ಆರಂಭಿಸಿದರು. ಮಂಡ್ಯ ಲೋಕಸಭಾ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಬೆಂಬಲಿಸಲು ಕಾಂಗ್ರೆಸ್ ಕಾರ್ಯಕರ್ತರ ಅಸಹಕಾರ ವ್ಯಕ್ತಪಡಿಸಿ, ನಾಯಕರ ಮೇಲೆ ಹರಿಹಾಯ್ದು ಗದ್ದಲ ಎಬ್ಬಿಸಿದರು.
ಪುರಸಭೆ ಮಾಜಿಅಧ್ಯಕ್ಷ ಹೊಸಹೊಳಲು ಕೃಷ್ಣೇಗೌಡ, ಶೀಳನೆರೆ ಗ್ರಾ.ಪಂ ಉಪಾಧ್ಯಕ್ಷ ಪ್ರಕಾಶ್, ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಚೇತನ್ ಕುಮಾರ್, ಪುರಸಭೆ ಸ್ಥಾಯಿಸಮಿತಿ ಮಾಜಿಅಧ್ಯಕ್ಷ ಡಿ.ಪ್ರೇಮಕುಮಾರ್ ಅವರಿಂದ ಗದ್ದಲ, ವಾಗ್ಯುದ್ಧ ನಡೆಯಿತು. ಗಲಾಟೆ ನಿಯಂತ್ರಿಸಲು ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಸೇರಿದಂತೆ ಹಲವು ಮುಖಂಡರು ಗಲಾಟೆಯನ್ನು ನಿಯಂತ್ರಿಸಲು ವಿಫಲರಾಗಿ ಮೂಕ ಪ್ರೇಕ್ಷಕರಂತೆ ಕುಳಿತಿದ್ದರು.
ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕೆಯುಐಡಿಎಫ್ ಸಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿಖಾನ್, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಯೂನಸ್ ಖಾನ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡ, ಮುಖಂಡ ಶೀಳನೆರೆ ರಮೇಶ್ ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರ ಉಪಸ್ಥಿತಿಯಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯ ಮರೆತು ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು. ಮೈತ್ರಿಧರ್ಮದ ವಿರುದ್ಧವಾಗಿ ಕೆಲಸ ಮಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರೂ, ಕಾರ್ಯಕರ್ತರು ಮುಖಂಡರ ಮಾತಿಗೆ ಬೆಲೆ ನೀಡದೆ ಹೊರ ನಡೆದರು.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.