ETV Bharat / state

9 ವರ್ಷಗಳ ಹಿಂದೆ ಮದುವೆ, 7 ವರ್ಷದ ಮಗ.. ಚಾಕುವಿನಿಂದ ಪತ್ನಿ ಕತ್ತು ಕೂಯ್ದು ಪತಿ ಪರಾರಿ

author img

By

Published : Jul 31, 2023, 7:50 PM IST

ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಪರಾರಿಯಾಗಿದ್ದು, ಈ ದೃಶ್ಯ ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

Brutal murder of wife  Brutal murder of wife by husband  Brutal murder of wife by husband in Mandya  9 ವರ್ಷಗಳ ಹಿಂದೆ ಮದುವೆ  7 ವರ್ಷದ ಮಗ  ಚಾಕುವಿನಿಂದ ಪತ್ನಿ ಕತ್ತು ಕೂಯ್ದು ಪತಿ ಪರಾರಿ  ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಪರಾರಿ  ದೃಶ್ಯಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿರುವ ಘಟನೆ  ಜಿಲ್ಲೆಯಲ್ಲಿ ದಾರುಣ ಘಟನೆ  ಚಾಕುವಿನಿಂದ ಕತ್ತು ಕೊಯ್ದು ಕೊಲೆ  ಪಾಂಡವಪುರ ತಾಲೂಕಿನ ಹುಲಿಕೆರೆ ಗ್ರಾಮ  ಪತ್ನಿ ಕತ್ತು ಕೂಯ್ದು ಗಣೇಶ್ ಪರಾರಿ  ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಎಸ್​ಪಿ ಯತೀಶ್​ ಹೇಳಿಕೆ
ಎಸ್​ಪಿ ಯತೀಶ್​ ಹೇಳಿಕೆ

ಮಂಡ್ಯ: ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪತ್ನಿಯನ್ನ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಸೌಮ್ಯ (28) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಗಣೇಶ್ (33) ಎಂಬಾತ ಪತ್ನಿಯನ್ನು ಕೊಂದು ಪರಾರಿ ಆಗಿರುವ ಆರೋಪಿ. ಕಳೆದ 8 ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಜೊತೆ ಗಣೇಶ್ ಮದುವೆ ಆಗಿತ್ತು. ಈ ದಂಪತಿಗೆ ಏಳು ವರ್ಷದ ಗಂಡು ಮಗ ಇದ್ದಾನೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪತ್ನಿ ಕತ್ತು ಕೂಯ್ದು ಗಣೇಶ್ ಪರಾರಿ ಆಗಿದ್ದು, ನೆರೆಹೊರೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರಾರಿ ಆಗಿರುವ ಗಣೇಶ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಎಸ್​ಪಿ ಹೇಳಿದ್ದು ಹೀಗೆ: ಈ ಕೊಲೆ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್​ಪಿ ಯತೀಶ್​ ಅವರು, ಹುಲಿಕೆರೆ ಗ್ರಾಮದಲ್ಲಿ ಸುಮಾರು 26 ವರ್ಷದ ಮಹಿಳೆಯ ಕೊಲೆ ಆಗಿರುವುದರ ಬಗ್ಗೆ ಮಾಹಿತಿ ಬಂದಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಲಾಗಿದೆ. ಕೊಲೆಗೂ ಮುನ್ನ ಗಂಡ-ಹೆಂಡತಿ ಮಧ್ಯೆ ಜಗಳ ನಡೆದಿದ್ದು, ನಂತರ ಆರೋಪಿ ಪತಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಅಷ್ಟೇ ಅಲ್ಲ ಈ ಕೊಲೆ ಸಂಬಂಧ ಗಂಡನ ಕುಟುಂಬಸ್ಥರು ಸಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆ ನಾವು ದೂರನ್ನು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸುತ್ತೇವೆ ಎಂದು ಹೇಳಿದರು.

9 ವರ್ಷಗಳ ಹಿಂದೆ ಗಣೇಶ್​ನನ್ನು ಮದುವೆಯಾಗಿದ್ದಾರೆ. ಆರೋಪಿ ಗಣೇಶ ಸ್ವಗ್ರಾಮದಲ್ಲಿ ಲಾರಿ ಡ್ರೈವರ್​ ಆಗಿ ಕೆಸಲ ಮಾಡುತ್ತಿದ್ದ. 2021ರಲ್ಲಿ ಮಹಿಳೆ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದರು. ಆ ಪ್ರಕರಣದಲ್ಲಿ ಗಂಡನನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ಈಗ ಆಕೆಯ ಗಂಡ ನಾಪತ್ತೆ ಆಗಿದ್ದಾನೆ. ಆತನಿಗಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಸೌಮ್ಯಳ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಈ ಘಟನೆ ಕುರಿತು ಪಾಂಡವಪುರ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಓದಿ: ವೈದ್ಯೆ ಆಗಲು ಕನಸು ಕಂಡಿದ್ದ ಬಾಲಕಿ 17ನೇ ವಯಸ್ಸಿಗೆ ಗರ್ಭಿಣಿ.. ಅಪ್ರಾಪ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್​

ಎಸ್​ಪಿ ಯತೀಶ್​ ಹೇಳಿಕೆ

ಮಂಡ್ಯ: ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪತ್ನಿಯನ್ನ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಸೌಮ್ಯ (28) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಗಣೇಶ್ (33) ಎಂಬಾತ ಪತ್ನಿಯನ್ನು ಕೊಂದು ಪರಾರಿ ಆಗಿರುವ ಆರೋಪಿ. ಕಳೆದ 8 ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಜೊತೆ ಗಣೇಶ್ ಮದುವೆ ಆಗಿತ್ತು. ಈ ದಂಪತಿಗೆ ಏಳು ವರ್ಷದ ಗಂಡು ಮಗ ಇದ್ದಾನೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪತ್ನಿ ಕತ್ತು ಕೂಯ್ದು ಗಣೇಶ್ ಪರಾರಿ ಆಗಿದ್ದು, ನೆರೆಹೊರೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರಾರಿ ಆಗಿರುವ ಗಣೇಶ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಎಸ್​ಪಿ ಹೇಳಿದ್ದು ಹೀಗೆ: ಈ ಕೊಲೆ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್​ಪಿ ಯತೀಶ್​ ಅವರು, ಹುಲಿಕೆರೆ ಗ್ರಾಮದಲ್ಲಿ ಸುಮಾರು 26 ವರ್ಷದ ಮಹಿಳೆಯ ಕೊಲೆ ಆಗಿರುವುದರ ಬಗ್ಗೆ ಮಾಹಿತಿ ಬಂದಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಲಾಗಿದೆ. ಕೊಲೆಗೂ ಮುನ್ನ ಗಂಡ-ಹೆಂಡತಿ ಮಧ್ಯೆ ಜಗಳ ನಡೆದಿದ್ದು, ನಂತರ ಆರೋಪಿ ಪತಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಅಷ್ಟೇ ಅಲ್ಲ ಈ ಕೊಲೆ ಸಂಬಂಧ ಗಂಡನ ಕುಟುಂಬಸ್ಥರು ಸಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆ ನಾವು ದೂರನ್ನು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸುತ್ತೇವೆ ಎಂದು ಹೇಳಿದರು.

9 ವರ್ಷಗಳ ಹಿಂದೆ ಗಣೇಶ್​ನನ್ನು ಮದುವೆಯಾಗಿದ್ದಾರೆ. ಆರೋಪಿ ಗಣೇಶ ಸ್ವಗ್ರಾಮದಲ್ಲಿ ಲಾರಿ ಡ್ರೈವರ್​ ಆಗಿ ಕೆಸಲ ಮಾಡುತ್ತಿದ್ದ. 2021ರಲ್ಲಿ ಮಹಿಳೆ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದರು. ಆ ಪ್ರಕರಣದಲ್ಲಿ ಗಂಡನನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ಈಗ ಆಕೆಯ ಗಂಡ ನಾಪತ್ತೆ ಆಗಿದ್ದಾನೆ. ಆತನಿಗಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಸೌಮ್ಯಳ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಈ ಘಟನೆ ಕುರಿತು ಪಾಂಡವಪುರ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಓದಿ: ವೈದ್ಯೆ ಆಗಲು ಕನಸು ಕಂಡಿದ್ದ ಬಾಲಕಿ 17ನೇ ವಯಸ್ಸಿಗೆ ಗರ್ಭಿಣಿ.. ಅಪ್ರಾಪ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.