ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದ ಕುದುರೆಮಾಳದ ಬಳಿ ಜಿಂಕೆ ಬೇಟೆಯಾಡಿದ್ದ ಇಬ್ಬರು ಕಿರಾತಕರನ್ನು ಬಂಧಿಸಲಾಗಿದೆ.
ಬಸವರಾಜು ಮತ್ತು ಮುನಿಶಿವ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಹಲಗೂರು ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬೇಟೆ ನಾಯಿಗಳ ಸಹಾಯದಿಂದ ಬೇಟೆಯಾಡಿದ್ದ ಕಿರಾತಕರಿಂದ ಒಂದು ಗಂಡು ಜಿಂಕೆಯ ಕಳೆಬರ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.