ETV Bharat / state

ರೋಡ್​ ಶೋಗೆ ಸಿಎಂ ಚಾಲನೆ: ಸುಮಲತಾ ವಿರುದ್ಧ ಮತ್ತೆ ಗುಡುಗಿದ ಹೆಚ್​ಡಿಕೆ

author img

By

Published : Apr 11, 2019, 2:51 PM IST

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್​ ಪರ ಮತಬೇಟೆ ಆರಂಭಿಸಿದ್ದಾರೆ. ಗೆಜ್ಜಲೆಕೆರೆಯಲ್ಲಿ ಸಿಎಂ ಕುಮಾರಸ್ವಾಮಿ ರೋಡ್ ಶೋಗೆ ಚಾಲನೆ ನೀಡಿದರು‌.

ರೋಡ್​ ಶೋಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ

ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್​ ಪರ ಮತಬೇಟೆ ಆರಂಭಿಸಿದ್ದು, ಗೆಜ್ಜಲೆಕೆರೆಯಲ್ಲಿ ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋಗೆ ಚಾಲನೆ ನೀಡಿದರು‌.

ಇನ್ನು ನಿಖಿಲ್ ಕುಮಾರಸ್ವಾಮಿ ಮಂಡ್ಯ ವಿಧಾನಸಭಾ ಕ್ಷೇತ್ರದ ಹನಕೆರೆಯಿಂದ ಪ್ರಚಾರ ಶುರು ಮಾಡಿದ್ದು, ಅವರಿಗೆ ಶಾಸಕ ಎಂ. ಶ್ರೀನಿವಾಸ್ ಸಾಥ್​ ನೀಡಿದರು. ಗ್ರಾಮಕ್ಕೆ ಬಂದ ನಿಖಿಲ್‌ಗೆ ಅಭಿಮಾನಿಗಳು ಹಾಗೂ ಕಲಾ ತಂಡಗಳು ಮೆರವಣಿಗೆಯ ಮೂಲಕ ಭವ್ಯ ಸ್ವಾಗತ ಕೋರಿದರು.


ಪ್ರಚಾರದ ವೇಳೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಸಂದೇಶ್ ನಾಗರಾಜ್ ನಮ್ಮಿಂದ ರಾಜಕೀಯ ಜನ್ಮ ಪಡೆದ್ರು. ಒಂದು ಚುನಾವಣೆ ಗೆಲ್ಲದ ಅವ್ರನ್ನ ಗೆಲ್ಲಿಸಿದ್ದು ನಾವು. ಈಗ ನಮ್ಮ ವಿರುದ್ದವೇ ತಿರುಗಿಬಿದ್ದಿದ್ದಾರೆ. ಚುನಾವಣೆ ಗೆಲ್ಲಲು ಸುಮಲತಾ ಹೊಸ ಪ್ಲಾನ್ ಮಾಡಿದ್ದಾರೆ. ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದುಕೊಂಡು ಜೆಡಿಎಸ್‌ ವಿರುದ್ದ ಗೂಬೆ ಕೂರಿಸಲು ಪ್ಲಾನ್ ಮಾಡಿದ್ದಾರೆ. ನಾವು ಇಂತಹ ಕುತಂತ್ರ ಮಾಡಲ್ಲ ಎಂದರು. ಅಷ್ಟೇ ಅಲ್ಲದೆ, ಬಿಜೆಪಿ ಜೊತೆ ಸೇರಿಕೊಂಡು ಚುನಾವಣೆಯಲ್ಲಿ ಮತ ಕೇಳಲು ಬಂದಿದ್ದಾರೆ. 200 ರೈತರು ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ನಿಮ್ಮ ಬೆಂಬಲಕ್ಕೆ ಯಾರು ಬಂದ್ರು ಅಂತ ನೀವೇ ನೋಡಿ ಎಂದು ಹೇಳಿದರು.

ರೋಡ್​ ಶೋಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ

ಇದಕ್ಕೂ ಮೊದಲು ನಗರದ ಖಾಸಗಿ ಹೋಟೆಲ್‌ನಲ್ಲಿ ಗ್ರಾಮಾಂತರ ವಿದ್ಯುತ್ ನಿರ್ವಾಹಕರ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕುಮಾರಸ್ವಾಮಿ, ಚುನಾವಣೆ ಇರುವ ಕಾರಣ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಈಡೇರಿಸುವ ಭರವಸೆ ನೀಡಿದ್ರು.

ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್​ ಪರ ಮತಬೇಟೆ ಆರಂಭಿಸಿದ್ದು, ಗೆಜ್ಜಲೆಕೆರೆಯಲ್ಲಿ ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋಗೆ ಚಾಲನೆ ನೀಡಿದರು‌.

ಇನ್ನು ನಿಖಿಲ್ ಕುಮಾರಸ್ವಾಮಿ ಮಂಡ್ಯ ವಿಧಾನಸಭಾ ಕ್ಷೇತ್ರದ ಹನಕೆರೆಯಿಂದ ಪ್ರಚಾರ ಶುರು ಮಾಡಿದ್ದು, ಅವರಿಗೆ ಶಾಸಕ ಎಂ. ಶ್ರೀನಿವಾಸ್ ಸಾಥ್​ ನೀಡಿದರು. ಗ್ರಾಮಕ್ಕೆ ಬಂದ ನಿಖಿಲ್‌ಗೆ ಅಭಿಮಾನಿಗಳು ಹಾಗೂ ಕಲಾ ತಂಡಗಳು ಮೆರವಣಿಗೆಯ ಮೂಲಕ ಭವ್ಯ ಸ್ವಾಗತ ಕೋರಿದರು.


ಪ್ರಚಾರದ ವೇಳೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಸಂದೇಶ್ ನಾಗರಾಜ್ ನಮ್ಮಿಂದ ರಾಜಕೀಯ ಜನ್ಮ ಪಡೆದ್ರು. ಒಂದು ಚುನಾವಣೆ ಗೆಲ್ಲದ ಅವ್ರನ್ನ ಗೆಲ್ಲಿಸಿದ್ದು ನಾವು. ಈಗ ನಮ್ಮ ವಿರುದ್ದವೇ ತಿರುಗಿಬಿದ್ದಿದ್ದಾರೆ. ಚುನಾವಣೆ ಗೆಲ್ಲಲು ಸುಮಲತಾ ಹೊಸ ಪ್ಲಾನ್ ಮಾಡಿದ್ದಾರೆ. ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದುಕೊಂಡು ಜೆಡಿಎಸ್‌ ವಿರುದ್ದ ಗೂಬೆ ಕೂರಿಸಲು ಪ್ಲಾನ್ ಮಾಡಿದ್ದಾರೆ. ನಾವು ಇಂತಹ ಕುತಂತ್ರ ಮಾಡಲ್ಲ ಎಂದರು. ಅಷ್ಟೇ ಅಲ್ಲದೆ, ಬಿಜೆಪಿ ಜೊತೆ ಸೇರಿಕೊಂಡು ಚುನಾವಣೆಯಲ್ಲಿ ಮತ ಕೇಳಲು ಬಂದಿದ್ದಾರೆ. 200 ರೈತರು ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ನಿಮ್ಮ ಬೆಂಬಲಕ್ಕೆ ಯಾರು ಬಂದ್ರು ಅಂತ ನೀವೇ ನೋಡಿ ಎಂದು ಹೇಳಿದರು.

ರೋಡ್​ ಶೋಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ

ಇದಕ್ಕೂ ಮೊದಲು ನಗರದ ಖಾಸಗಿ ಹೋಟೆಲ್‌ನಲ್ಲಿ ಗ್ರಾಮಾಂತರ ವಿದ್ಯುತ್ ನಿರ್ವಾಹಕರ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕುಮಾರಸ್ವಾಮಿ, ಚುನಾವಣೆ ಇರುವ ಕಾರಣ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ಈಡೇರಿಸುವ ಭರವಸೆ ನೀಡಿದ್ರು.

Intro:ಮಂಡ್ಯ: ಒಂದು ಕಡೆ ಅಪ್ಪನ ಪ್ರಚಾರ. ಮತ್ತೊಂದು ಕಡೆ ಪುತ್ರನ ಮತ ಶಿಕಾರಿ. ಇದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಇಂದು ಅಪ-ಮಗನ ಪ್ರಚಾರದ ವೈಖರಿ.
ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನ ಪರವಾಗಿ ಮತ ಬೇಟೆ ಆರಂಭ ಮಾಡಿದ್ದಾರೆ. ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಿಂದ ಪ್ರಚಾರವನ್ನು ಠರಂಭ ಮಾಡಿದರು.
ಸಾವಿರಾರೂ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋ ಗೆ ಚಾಲನೆ ನೀಡಿದರು‌. ಇದು ಎರಡನೇ ದಿನದ ರೋಡ್ ಶೋ ಆಗಿದೆ.
ಇನ್ನು ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ವಿಧಾನಸಭಾ ಕ್ಷೇತ್ರದ ಹನಕೆರೆಯಿಂದ ಪ್ರಚಾರ ಆರಂಭ ಮಾಡಿದ್ದಾರೆ. ಶಾಸಕ ಎಂ. ಶ್ರೀನಿವಾಸ್ ಜೊತೆ ಗೂಡಿ ಪ್ರಚಾರ ಮಾಡುತ್ತಿದ್ದಾರೆ.
ಗ್ರಾಮಕ್ಕೆ ಬಂದ ನಿಖಿಲ್‌ಗೆ ಭವ್ಯ ಸ್ವಾಗತ ಕೋರಿದ ಅಭಿಮಾನಿಗಳು, ಕಲಾ ತಂಡಗಳ ಮೆರವಣಿಗೆ ಮೂಲಕ ಪ್ರಚಾರ ನಡೆಸುತ್ತಿದ್ದಾರೆ.

ಗೆಜ್ಜಲಗೆರೆ ಗ್ರಾಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂದೇಶ್ ನಾಗರಾಜ್ ನಮ್ಮಿಂದ ರಾಜಕೀಯ ಜನ್ಮ ಪಡೆದ್ರು. ಒಂದು ಚುನಾವಣೆ ಗೆಲ್ಲದ ಅವ್ರನ್ನ ಗೆಲ್ಸಿದ್ದು ನಾವು. ಈಗ ನಮ್ಮ ವಿರುದ್ದವೇ ನಿಂತಿದ್ದಾರೆ ಎಂದರು.
ಚುನಾವಣೆ ಗೆಲ್ಲಲು ಸುಮಲತಾ
ಹೊಸ ಪ್ಲಾನ್ ಮಾಡಿದ್ದಾರೆ. ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದುಕೊಂಡು ಜೆಡಿಎಸ್‌ ವಿರುದ್ದ ಗೂಬೆ ಕೂರಿಸಲು ಪ್ಲಾನ್ ಮಾಡಿದ್ದಾರೆ. ನಾವು ಇಂತಹ ಕುತಂತ್ರ ಮಾಡಲ್ಲ ಎಂದರು.
ಮಂಡ್ಯ ಬಜೆಟ್ ಎಂದ ಬಿಜೆಪಿ ಜೊತೆ ಸೇರಿ ಚುನಾವಣೆ ಯಲ್ಲಿ ಮತ ಕೇಳಲು ಬಂದವ್ರೆ. 200 ರೈತರು ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ನಿಮ್ಮ ಬೆಂಬಲಕ್ಕೆ ಯಾರು ಬಂದ್ರು ಅಂತ ತೀರ್ಮಾನಿಸಿ ಎಂದು ಮನವಿ ಮಾಡಿದರು.Body:ಇದಕ್ಕೂ ಮೊದಲು ನಗರದ ಖಾಸಗಿ ಹೋಟೆಲ್‌ನಲ್ಲಿ ಗ್ರಾಮಾಂತರ ವಿದ್ಯುತ್ ನಿರ್ವಾಹಕರ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ, ಚುನಾವಣೆ ಇರುವ ಕಾರಣ ಬೇಡಿಕೆಯನ್ನು ಮುಂದೆ ಇಡೇರಿಸುವ ಭರವಸೆ ನೀಡಿದರು.
ಕಾರ್ಯಕ್ರಮಕ್ಕೆ ಆಗಮನಕ್ಕೂ ಮೊದಲೇ ಸಮಯದ ಅಭಾವದ ಕಾರಣವೊಡ್ಡಿ, ಆಯೋಜಕರ ವಿರುದ್ಧ ಗರಂ ಆಗಿದ್ದರು. ಆದರೆ ಒತ್ತಡದ ಮೇರೆಗೆ ಸಮಾರಂಭಕ್ಕೆ ಆಗಮಿಸಿ ಭಟಷಣ ಮಾಡಿ ತೆರಳಿದರು.
ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.