ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಹೆತ್ತಗೋನಹಳ್ಳಿ ಗ್ರಾಮದಲ್ಲಿ ಸಾಲ ತೀರಿಸಲಾಗದೇ ರೈತನೊಬ್ಬ ಜಮೀನಿನ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹನುಮಂತಯ್ಯ (50) ಮೃತಪಟ್ಟ ರೈತರಾಗಿದ್ದಾರೆ. 4 ಎಕರೆ ಜಮೀನು ಹೊಂದಿದ್ದ ಹನುಮಂತಯ್ಯ ಟ್ರ್ಯಾಕ್ಟರ್ ಮತ್ತು ಕೃಷಿಗಾಗಿ 20 ಲಕ್ಷ ಸಾಲ ಮಾಡಿಕೊಂಡಿದ್ದು, ಬ್ಯಾಂಕ್ ಸೇರಿದಂತೆ ಮಹಿಳಾ ಸಂಘಗಳಿಂದ ಹಾಗೂ ಕೈ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಬಗ್ಗೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.