ETV Bharat / state

ನೀರಿಗಾಗಿ ಭುಗಿಲೆದ್ದ ಮಂಡ್ಯ ರೈತರ ಹೋರಾಟ: ಹೆದ್ದಾರಿಯಲ್ಲೇ ಪ್ರತಿಭಟನೆ

ಮಂಡ್ಯದ ವಿ.ಸಿ ಫಾರಂ ಗೇಟ್ ಬಳಿ ರೈತ ಸಂಘದ ಕಾರ್ಯಕರ್ತರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ನಾಲೆಗಳಿಗೆ ಕಾವೇರಿ ನೀರು ಹರಿಸಬೇಕೆಂದು ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಿದರು.

author img

By

Published : Jul 3, 2019, 1:19 PM IST

ಕಾವೇರಿ ನೀರಿಗಾಗಿ ರೈತರ ಹೋರಾಟ

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದ ರೈತರು ಸರಣಿ ಹೋರಾಟ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ನಗರದ ಹೊರ ವಲಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ಹಾಗೂ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ರೈತರಿಂದ ರಸ್ತೆ ತಡೆದು ಪ್ರತಿಭಟನೆ

ನಗರದ ವಿ.ಸಿ ಫಾರಂ ಗೇಟ್ ಬಳಿ ರೈತ ಸಂಘದ ಕಾರ್ಯಕರ್ತರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಜಿಲ್ಲೆಯ ನಾಲೆಗಳಿಗೆ ಕಾವೇರಿ ನೀರು ಹರಿಸುವಂತೆ ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು.

ಕೂಡಲೇ ಕಾವೇರಿ ನೀರು ಬಿಡುಗಡೆ ಮಾಡಿ, ಬೆಳೆ ರಕ್ಷಿಸಬೇಕು. ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಹೆದ್ದಾರಿ ತಡೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದ ರೈತರು ಸರಣಿ ಹೋರಾಟ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ನಗರದ ಹೊರ ವಲಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ಹಾಗೂ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ರೈತರಿಂದ ರಸ್ತೆ ತಡೆದು ಪ್ರತಿಭಟನೆ

ನಗರದ ವಿ.ಸಿ ಫಾರಂ ಗೇಟ್ ಬಳಿ ರೈತ ಸಂಘದ ಕಾರ್ಯಕರ್ತರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಜಿಲ್ಲೆಯ ನಾಲೆಗಳಿಗೆ ಕಾವೇರಿ ನೀರು ಹರಿಸುವಂತೆ ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು.

ಕೂಡಲೇ ಕಾವೇರಿ ನೀರು ಬಿಡುಗಡೆ ಮಾಡಿ, ಬೆಳೆ ರಕ್ಷಿಸಬೇಕು. ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಹೆದ್ದಾರಿ ತಡೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Intro:ಮಂಡ್ಯ: ಕಾವೇರಿ ನೀರಿಗಾಗಿ ರೈತರು ಸರಣಿ ಹೋರಾಟ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಹೋರಾಟ ಮಾಡಲಾಗುತ್ತಿದೆ. ಇಂದು ನಗರದ ಹೊರ ವಲಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ಹಾಗೂ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಿದರು.


Body:ನಗರದ ವಿ.ಸಿ ಫಾರಂ ಗೇಟ್ ಬಳಿ ರೈತ ಸಂಘದ ಕಾರ್ಯಕರ್ತರು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಕಾವೇರಿ ನೀರಿಗಾಗಿ ಹೋರಾಟ ಮಾಡಿದರು. ಸುಮಾರು ಅರ್ಧ ಗಂಟೆಗಳ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು.
ಕೂಡಲೇ ಕಾವೇರಿ ನೀರು ಬಿಡುಗಡೆ ಮಾಡಬೇಕು. ಬೆಳೆದು ನಿಂತಿರುವ ಬೆಳೆ ರಕ್ಷಣೆ ಮಾಡಬೇಕು. ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಹೆದ್ದಾರಿ ತಡೆಯಿಂದ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.