ETV Bharat / state

ಕೆಆರ್​ಎಸ್​ಗೆ ಮುತ್ತಿಗೆ ಹಾಕಲು ಯತ್ನ... ರೈತರನ್ನು ವಶಕ್ಕೆ ಪಡೆದ ಪೊಲೀಸರು - undefined

ಕಬ್ಬು ಬೆಳೆಗೆ ನೀರು ಬಿಡುವಂತೆ ಆಗ್ರಹಿಸಿ ಮಂಡ್ಯ ಜಿಲ್ಲೆ ರೈತರು ಕೆಆರ್​ಎಸ್​ ಅಣೆಕಟ್ಟಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಬ್ಬು ಬೆಳೆಗೆ ನೀರು ಬಿಡುವಂತೆ ಆಗ್ರಹ
author img

By

Published : Jun 28, 2019, 4:05 PM IST

Updated : Jun 28, 2019, 4:33 PM IST

ಮಂಡ್ಯ : ಒಂದು ವಾರದಿಂದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಅಹೋರಾತ್ರಿ ಧರಣಿ ಮಾಡಲಾಗುತ್ತಿತ್ತು. ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

ಕಬ್ಬಿನ ಬೆಳೆ ರಕ್ಷಣೆಗಾಗಿ ನೀರು ಬಿಡುವಂತೆ ಒತ್ತಾಯಿಸಿ ಜಿಲ್ಲೆಯ ರೈತರು ಕೆಆರ್​ಎಸ್‌ ಬಳಿ ಪ್ರತಿಭಟನೆ ನಡೆಸಿದರು. ಅಣೆಕಟ್ಟೆಯ ದಕ್ಷಿಣ ದ್ವಾರದಲ್ಲಿ ಧರಣಿ ಮಾಡಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಮಂಡ್ಯದಿಂದ ಕೆಆರ್​ಎಸ್​ವರೆಗೂ ಬೈಕ್​ ರ‍್ಯಾಲಿ ಮಾಡಿದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ರೈತರನ್ನು ವಶಕ್ಕೆ ಪಡೆದ ಪೊಲೀಸರು

ಧರಣಿ ಮಾಡುತ್ತಿದ್ದ ಸ್ಥಳಕ್ಕೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಎಂಜಿನಿಯರ್ ರಾಮಕೃಷ್ಣ, ನೀರು ಬಿಡದಿರುವ ನಿರ್ಧಾರ ತಿಳಿಸಿದರು. ಇದರಿಂದ ಆಕ್ರೋಶಗೊಂಡ ರೈತ ಸಂಘದ ಮುಖಂಡರು ಬ್ಯಾರಿಕೇಡ್ ಬೇಧಿಸಿ ಒಳ ನುಗ್ಗಲು ಯತ್ನಿಸುತ್ತಿದ್ದಂತೆ ವಶಕ್ಕೆ ಪಡೆಯಲಾಯಿತು.

ಮಂಡ್ಯ : ಒಂದು ವಾರದಿಂದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಅಹೋರಾತ್ರಿ ಧರಣಿ ಮಾಡಲಾಗುತ್ತಿತ್ತು. ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

ಕಬ್ಬಿನ ಬೆಳೆ ರಕ್ಷಣೆಗಾಗಿ ನೀರು ಬಿಡುವಂತೆ ಒತ್ತಾಯಿಸಿ ಜಿಲ್ಲೆಯ ರೈತರು ಕೆಆರ್​ಎಸ್‌ ಬಳಿ ಪ್ರತಿಭಟನೆ ನಡೆಸಿದರು. ಅಣೆಕಟ್ಟೆಯ ದಕ್ಷಿಣ ದ್ವಾರದಲ್ಲಿ ಧರಣಿ ಮಾಡಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಮಂಡ್ಯದಿಂದ ಕೆಆರ್​ಎಸ್​ವರೆಗೂ ಬೈಕ್​ ರ‍್ಯಾಲಿ ಮಾಡಿದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ರೈತರನ್ನು ವಶಕ್ಕೆ ಪಡೆದ ಪೊಲೀಸರು

ಧರಣಿ ಮಾಡುತ್ತಿದ್ದ ಸ್ಥಳಕ್ಕೆ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಎಂಜಿನಿಯರ್ ರಾಮಕೃಷ್ಣ, ನೀರು ಬಿಡದಿರುವ ನಿರ್ಧಾರ ತಿಳಿಸಿದರು. ಇದರಿಂದ ಆಕ್ರೋಶಗೊಂಡ ರೈತ ಸಂಘದ ಮುಖಂಡರು ಬ್ಯಾರಿಕೇಡ್ ಬೇಧಿಸಿ ಒಳ ನುಗ್ಗಲು ಯತ್ನಿಸುತ್ತಿದ್ದಂತೆ ವಶಕ್ಕೆ ಪಡೆಯಲಾಯಿತು.

Intro:ಮಂಡ್ಯ : ಕಬ್ಬಿನ ಬೆಳೆ ರಕ್ಷಣೆಗಾಗಿ ಜಿಲ್ಲೆಯ ರೈತರು ಕೆ.ಆರ್.ಎಸ್‌ಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ಒಂದು ವಾರದಿಂದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಆಹೋ ರಾತ್ರಿ ಧರಣಿ ಮಾಡಲಾಗುತ್ತಿತ್ತು. ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡದ ಹಿನ್ನಲೆಯಲ್ಲಿ ಅಣೆಕಟ್ಟೆಗೆ ಮುತ್ತಿಗೆ ಹಾಕಲಾಗಿದೆ.


Body:ಅಣೆಕಟ್ಟೆಯ ದಕ್ಷಿಣ ದ್ವಾರದಲ್ಲಿ ಧರಣಿ ಮಾಡಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹೋರಾಟ ಮಾಡಲಾಯಿತು.
ಮಂಡ್ಯದಿಂದ ಕೆ.ಆರ್.ಎಸ್ ವರೆಗೂ ಬೈಕ್ ರ‌್ಯಾಲಿ ಮಾಡಿದ ರೈತರು, ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ರೈತರ ಹೋರಾಟದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.


Conclusion:
Last Updated : Jun 28, 2019, 4:33 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.