ETV Bharat / state

ಮಂಡ್ಯ: ರಸ್ತೆ ಅಪಘಾತ.. ಮಗನನ್ನು ರಕ್ಷಿಸಿ ಪ್ರಾಣಬಿಟ್ಟ ತಂದೆ

author img

By

Published : Jul 21, 2022, 5:51 PM IST

Updated : Jul 21, 2022, 7:41 PM IST

ತರಕಾರಿ ತರಲೆಂದು ತಂದೆ ಮತ್ತು ಮಗ ತಮ್ಮ ಆಪೆ ಆಟೋದಲ್ಲಿ ಮೈಸೂರಿಗೆ ತೆರಳಿದ್ದರು. ಕೆಲಸ ಮುಗಿಸಿ ಊರಿಗೆ ವಾಪಸಾಗುತ್ತಿದ್ದ ವೇಳೆ ನ್ಯಾಮನಹಳ್ಳಿಯ ಸಮೀಪ ಲಾರಿಯೊಂದು ಅಡ್ಡಾದಿಡ್ಡಿಯಾಗಿ ಬಂದಿದೆ. ಇದನ್ನು ಗಮನಿಸಿದ ಶ್ರೀನಿವಾಸ್ ಅವರು ಮಗ ವಿಶ್ವಾಸ್‌ನನ್ನು ಆಟೋದಿಂದ ಕೆಳಗೆ ತಳ್ಳಿದ್ದಾರೆ. ಕ್ಷಣಾರ್ಧದಲ್ಲಿಯೇ ಆಟೋಗೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.

ಶ್ರೀನಿವಾಸ್
ಶ್ರೀನಿವಾಸ್

ಮಂಡ್ಯ: ಪಾಂಡವಪುರ ತಾಲೂಕು ನ್ಯಾಮನಹಳ್ಳಿ ಸಮೀಪ ಲಾರಿ ಡಿಕ್ಕಿ ಹೊಡೆಯುವುದನ್ನು ಗಮನಿಸಿ ಆಟೋದಲ್ಲಿದ್ದ ತಂದೆ ತನ್ನ ಮಗನನ್ನು ಕೆಳಗೆ ತಳ್ಳಿ ಅಪಘಾತಕ್ಕೆ ಬಲಿಯಾಗಿದ್ದಾರೆ. ತಾಲೂಕಿನ ಮುದಗಂದೂರು ಗ್ರಾಮದ ಶ್ರೀನಿವಾಸ್ (43) ಮೃತ ವ್ಯಕ್ತಿ. ಇವರ ಮಗ ವಿಶ್ವಾಸ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿರುವ ಹಿನ್ನೆಲೆ ಪಾಂಡವಪುರ ಪಟ್ಟಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆಪೆ ಆಟೋ
ಆಪೆ ಆಟೋ

ಶ್ರೀನಿವಾಸ್ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ತರಕಾರಿ ತರಲೆಂದು ತಂದೆ ಮತ್ತು ಮಗ ತಮ್ಮ ಆಪೆ ಆಟೋದಲ್ಲಿ ಮೈಸೂರಿಗೆ ತೆರಳಿದ್ದರು. ಕೆಲಸ ಮುಗಿಸಿ ಊರಿಗೆ ವಾಪಸಾಗುತ್ತಿದ್ದರು. ಈ ವೇಳೆ ನ್ಯಾಮನಹಳ್ಳಿಯ ಸಮೀಪ ಲಾರಿಯೊಂದು ಅಡ್ಡಾದಿಡ್ಡಿಯಾಗಿ ಬಂದಿದೆ. ಇದನ್ನು ಗಮನಿಸಿದ ಶ್ರೀನಿವಾಸ್, ವಿಶ್ವಾಸ್‌ನನ್ನು ಆಟೋದಿಂದ ಕೆಳಗೆ ತಳ್ಳಿದ್ದಾರೆ. ಕ್ಷಣಾರ್ಧದಲ್ಲಿಯೇ ಆಟೋ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ವಿಶ್ವಾಸ್‌
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ವಿಶ್ವಾಸ್‌

ಅಪಘಾತದಲ್ಲಿ ಶ್ರೀನಿವಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಚಿಕಿತ್ಸೆ ಪಡೆಯುತ್ತಿರುವ ವಿಶ್ವಾಸ್‌ಗೆ ತಂದೆ ಮೃತಪಟ್ಟಿರುವ ಮಾಹಿತಿ ನೀಡಲು ಕುಟುಂಬದವರು ಹಿಂದೇಟು ಹಾಕುತ್ತಿದ್ದಾರೆ. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಕಾಯಿಲೆಯಿಂದ ಜೀವನ್ಮರಣದ ಹೋರಾಟ.. ಬಾಲಕರ ಇಚ್ಛೆಗೆ ಸ್ಪಂದನೆ, ಒಂದು ದಿನದ ಪೊಲೀಸ್ ಗೌರವ

ಮಂಡ್ಯ: ಪಾಂಡವಪುರ ತಾಲೂಕು ನ್ಯಾಮನಹಳ್ಳಿ ಸಮೀಪ ಲಾರಿ ಡಿಕ್ಕಿ ಹೊಡೆಯುವುದನ್ನು ಗಮನಿಸಿ ಆಟೋದಲ್ಲಿದ್ದ ತಂದೆ ತನ್ನ ಮಗನನ್ನು ಕೆಳಗೆ ತಳ್ಳಿ ಅಪಘಾತಕ್ಕೆ ಬಲಿಯಾಗಿದ್ದಾರೆ. ತಾಲೂಕಿನ ಮುದಗಂದೂರು ಗ್ರಾಮದ ಶ್ರೀನಿವಾಸ್ (43) ಮೃತ ವ್ಯಕ್ತಿ. ಇವರ ಮಗ ವಿಶ್ವಾಸ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿರುವ ಹಿನ್ನೆಲೆ ಪಾಂಡವಪುರ ಪಟ್ಟಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆಪೆ ಆಟೋ
ಆಪೆ ಆಟೋ

ಶ್ರೀನಿವಾಸ್ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ತರಕಾರಿ ತರಲೆಂದು ತಂದೆ ಮತ್ತು ಮಗ ತಮ್ಮ ಆಪೆ ಆಟೋದಲ್ಲಿ ಮೈಸೂರಿಗೆ ತೆರಳಿದ್ದರು. ಕೆಲಸ ಮುಗಿಸಿ ಊರಿಗೆ ವಾಪಸಾಗುತ್ತಿದ್ದರು. ಈ ವೇಳೆ ನ್ಯಾಮನಹಳ್ಳಿಯ ಸಮೀಪ ಲಾರಿಯೊಂದು ಅಡ್ಡಾದಿಡ್ಡಿಯಾಗಿ ಬಂದಿದೆ. ಇದನ್ನು ಗಮನಿಸಿದ ಶ್ರೀನಿವಾಸ್, ವಿಶ್ವಾಸ್‌ನನ್ನು ಆಟೋದಿಂದ ಕೆಳಗೆ ತಳ್ಳಿದ್ದಾರೆ. ಕ್ಷಣಾರ್ಧದಲ್ಲಿಯೇ ಆಟೋ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ವಿಶ್ವಾಸ್‌
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ವಿಶ್ವಾಸ್‌

ಅಪಘಾತದಲ್ಲಿ ಶ್ರೀನಿವಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಚಿಕಿತ್ಸೆ ಪಡೆಯುತ್ತಿರುವ ವಿಶ್ವಾಸ್‌ಗೆ ತಂದೆ ಮೃತಪಟ್ಟಿರುವ ಮಾಹಿತಿ ನೀಡಲು ಕುಟುಂಬದವರು ಹಿಂದೇಟು ಹಾಕುತ್ತಿದ್ದಾರೆ. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಕಾಯಿಲೆಯಿಂದ ಜೀವನ್ಮರಣದ ಹೋರಾಟ.. ಬಾಲಕರ ಇಚ್ಛೆಗೆ ಸ್ಪಂದನೆ, ಒಂದು ದಿನದ ಪೊಲೀಸ್ ಗೌರವ

Last Updated : Jul 21, 2022, 7:41 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.