ಮಂಡ್ಯ: ಚಿರತೆಗಳ ಕಾದಾಟದಲ್ಲಿ ಹೆಣ್ಣು ಚಿರತೆ ಸಾವಿಗೀಡಾದ ಘಟನೆ ಮದ್ದೂರು ತಾಲೂಕಿನ ಕಿರಂಗೂರು ಬಳಿಯ ಕಬ್ಬಿನ ಗದ್ದೆಯಲ್ಲಿ ನಡೆದಿದೆ.
ಕಳೆದ ರಾತ್ರಿ ಚಿರತೆಗಳು ಕಾದಾಟ ನಡೆಸಿದ್ದು, ಘಟನೆಯಲ್ಲಿ ಸುಮಾರು 6 ವರ್ಷದ ಹೆಣ್ಣು ಚಿರತೆ ಸಾವಿಗೀಡಾಗಿದೆ. ಬೆಳಗ್ಗೆ ಜಮೀನಿನ ಬಳಿ ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆಯ ಕಳೆಬರಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಪ್ಪ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.