ETV Bharat / state

ವೆಚ್ಚಕ್ಕೆ ಹಣ ಬೇಡಿಕೆಯಿಟ್ಟ ಆಡಿಯೋ ವಿಚಾರ- ಸಚಿವ ಪುಟ್ಟರಾಜು, ಮಾಜಿ ಸಂಸದ ಮಾದೇಗೌಡರ ಮೇಲೆ ಎಫ್‌ಐಆರ್..

author img

By

Published : Apr 10, 2019, 8:33 PM IST

ಚುನಾವಣಾ ವೆಚ್ಚಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟ ರಾಜಕಾರಣಿಗಳ ಕುರಿತಾದ ಆಡಿಯೋವೊಂದು ಇತ್ತೀಚೆಗೆ ವೈರಲ್​ ಆಗಿತ್ತು. ಈ ಕುರಿತು ಮಾಜಿ ಸಂಸದ ಜಿ.ಮಾದೇಗೌಡ ಹಾಗೂ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಚಿವ ಸಿ.ಎಸ್.ಪುಟ್ಟರಾಜು

ಮಂಡ್ಯ: ಚುನಾವಣಾ ವೆಚ್ಚಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮಾಜಿ ಸಂಸದ ಜಿ.ಮಾದೇಗೌಡ ಹಾಗೂ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಪ್ರಕರಣ ದಾಖಲಾಗಿದೆ. ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಎಫ್‌ಐಆರ್ ದಾಖಲು ಮಾಡಿದ್ದಾರೆ.

ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಐಪಿಸಿ ಸೆಕ್ಷನ್ 171(E)ರ ಅಡಿಯಲ್ಲಿ ಕೇಸ್ ಹಾಕಲಾಗಿದೆ. ಎಫ್​ಐಆರ್​ ದಾಖಲಿಸಿ, ಚುನಾವಣಾ ಆಯೋಗಕ್ಕೆ ಪೊಲೀಸರು ಪ್ರಕರಣ ವರ್ಗಾಯಿಸಿದ್ದಾರೆ.

ಡಾ.ಜಿ.ಮಾದೇಗೌಡ, ಮಂಡ್ಯದ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಕಾವೇರಿ ಹೋರಾಟದಲ್ಲಿ ಮುಂದಾಳತ್ವವಹಿಸಿದ್ದರು. ಈ ನಡುವೆ ಸಚಿವ ಪುಟ್ಟರಾಜು ಜೊತೆ ಮಾದೇಗೌಡರು ನಡೆಸಿರುವ ಆಡಿಯೋ ವೈರಲ್ ಆಗಿತ್ತು. ಸಚಿವರಿಗೆ ಕರೆ ಮಾಡಿ, ಹಣದ ಬೇಡಿಕೆ ಇಟ್ಟಿದ್ದ ಮಾದೇಗೌಡರ ಬೇಡಿಕೆಗೆ ಒಪ್ಪಿ ಹಣ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದರು. ಈ ಘಟನೆ ಕುರಿತಾಗಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಡ್ಯ: ಚುನಾವಣಾ ವೆಚ್ಚಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮಾಜಿ ಸಂಸದ ಜಿ.ಮಾದೇಗೌಡ ಹಾಗೂ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಪ್ರಕರಣ ದಾಖಲಾಗಿದೆ. ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಎಫ್‌ಐಆರ್ ದಾಖಲು ಮಾಡಿದ್ದಾರೆ.

ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಐಪಿಸಿ ಸೆಕ್ಷನ್ 171(E)ರ ಅಡಿಯಲ್ಲಿ ಕೇಸ್ ಹಾಕಲಾಗಿದೆ. ಎಫ್​ಐಆರ್​ ದಾಖಲಿಸಿ, ಚುನಾವಣಾ ಆಯೋಗಕ್ಕೆ ಪೊಲೀಸರು ಪ್ರಕರಣ ವರ್ಗಾಯಿಸಿದ್ದಾರೆ.

ಡಾ.ಜಿ.ಮಾದೇಗೌಡ, ಮಂಡ್ಯದ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಕಾವೇರಿ ಹೋರಾಟದಲ್ಲಿ ಮುಂದಾಳತ್ವವಹಿಸಿದ್ದರು. ಈ ನಡುವೆ ಸಚಿವ ಪುಟ್ಟರಾಜು ಜೊತೆ ಮಾದೇಗೌಡರು ನಡೆಸಿರುವ ಆಡಿಯೋ ವೈರಲ್ ಆಗಿತ್ತು. ಸಚಿವರಿಗೆ ಕರೆ ಮಾಡಿ, ಹಣದ ಬೇಡಿಕೆ ಇಟ್ಟಿದ್ದ ಮಾದೇಗೌಡರ ಬೇಡಿಕೆಗೆ ಒಪ್ಪಿ ಹಣ ಕೊಡುವ ಭರವಸೆಯನ್ನೂ ಸಚಿವರು ನೀಡಿದ್ದರು. ಈ ಘಟನೆ ಕುರಿತಾಗಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ಚುನಾವಣಾ ವೆಚ್ಚಕ್ಕಾಗಿ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆಯಲ್ಲಿ ಮಾಜಿ ಸಂಸದ ಜಿ.ಮಾದೇಗೌಡ ಹಾಗೂ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಪ್ರಕರಣ ದಾಖಲಾಗಿದೆ. ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಎಫ್‌ಐಆರ್ ದಾಖಲು ಮಾಡಿದ್ದಾರೆ.
ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, IPC ಸೆಕ್ಷನ್ 171(E)ರ ಅಡಿಯಲ್ಲಿ ಕೇಸ್ ಹಾಕಲಾಗಿದೆ. FIR ದಾಖಲಿಸಿ, ಚುನಾವಣಾ ಆಯೋಗಕ್ಕೆ ಪೊಲೀಸರು ಪ್ರಕರಣ ವರ್ಗಾಯಿಸಿದ್ದಾರೆ.
ಡಾ.ಜಿ.ಮಾದೇಗೌಡ, ಮಂಡ್ಯದ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಕಾವೇರಿ ಹೋರಾಟದಲ್ಲಿ ಮುಂಚೂಣಿ ವಹಿಸಿದ್ದರು. ಸಚಿವ ಪುಟ್ಟರಾಜು ಜೊತೆ ಮಾದೇಗೌಡರು ನಡೆಸಿರುವ ಆಡಿಯೋ ವೈರಲ್ ಆಗಿತ್ತು.
ಸಚಿವರಿಗೆ ಕರೆ ಮಾಡಿ, ಹಣದ ಬೇಡಿಕೆ ಇಟ್ಟಿದ್ದ ಮಾದೇಗೌಡರ ಬೇಡಿಕೆಗೆ ಒಪ್ಪಿ ಹಣ ಕೊಡುವ ಭರವಸೆಯನ್ನು ಸಚಿವರು ನೀಡಿದ್ದರು.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.