ETV Bharat / state

ಕೆ.ಆರ್. ಪೇಟೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಮತಬೇಟೆ

ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ.

author img

By

Published : Nov 21, 2019, 4:46 PM IST

Updated : Nov 21, 2019, 8:07 PM IST

ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಪ್ರಚಾರ

ಮಂಡ್ಯ: ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಯೊಂದು ಗ್ರಾಮಗಳಲ್ಲೂ ಆರತಿ ಮಾಡಿ ಸ್ವಾಗತ ಕೋರುತ್ತಿರುವುದು ವಿಶೇಷವಾಗಿದೆ.

ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಪ್ರಚಾರ

ಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಗರೂರಿನ ಮರಡಿ ಲಿಂಗೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿದರು. ಪೂಜೆ ನಂತರ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದರು. ಇನ್ನು ಕಿಕ್ಕೇರಿಗೆ ಹೋದ ಸಿದ್ದರಾಮಯ್ಯಗೆ ಬೃಹತ್ ಸೇಬಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತಿಸಲಾಯಿತು. ದಾರಿಯುದ್ದಕ್ಕೂ ಕಾರಿನಲ್ಲೇ ನಿಂತು ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಸೇಬಿಗಾಗಿ ಪ್ರಚಾರ ಕಾರ್ಯಕ್ಕೆ ಬಂದ ಜನತೆ ಕಿತ್ತಾಡಿದ ಘಟನೆ ನಡೆಯಿತು.

ಕ್ಷೇತ್ರದ 4 ಹೋಬಳಿ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲಾಗುತ್ತಿದ್ದು, ಸಿದ್ದರಾಮಯ್ಯಗೆ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸಾಥ್ ನೀಡಿದ್ದಾರೆ.

ಮಂಡ್ಯ: ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಯೊಂದು ಗ್ರಾಮಗಳಲ್ಲೂ ಆರತಿ ಮಾಡಿ ಸ್ವಾಗತ ಕೋರುತ್ತಿರುವುದು ವಿಶೇಷವಾಗಿದೆ.

ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಪ್ರಚಾರ

ಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಗರೂರಿನ ಮರಡಿ ಲಿಂಗೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿದರು. ಪೂಜೆ ನಂತರ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದರು. ಇನ್ನು ಕಿಕ್ಕೇರಿಗೆ ಹೋದ ಸಿದ್ದರಾಮಯ್ಯಗೆ ಬೃಹತ್ ಸೇಬಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತಿಸಲಾಯಿತು. ದಾರಿಯುದ್ದಕ್ಕೂ ಕಾರಿನಲ್ಲೇ ನಿಂತು ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಸೇಬಿಗಾಗಿ ಪ್ರಚಾರ ಕಾರ್ಯಕ್ಕೆ ಬಂದ ಜನತೆ ಕಿತ್ತಾಡಿದ ಘಟನೆ ನಡೆಯಿತು.

ಕ್ಷೇತ್ರದ 4 ಹೋಬಳಿ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲಾಗುತ್ತಿದ್ದು, ಸಿದ್ದರಾಮಯ್ಯಗೆ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸಾಥ್ ನೀಡಿದ್ದಾರೆ.

Intro:ಮಂಡ್ಯ: ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಯೊಂದು ಗ್ರಾಮಗಳಲ್ಲೂ ಆರತಿ ಮಾಡಿ ಸ್ವಾಗತ ಕೋರುತ್ತಿರುವುದು ವಿಶೇಷವಾಗಿದೆ.
ಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ, ಮೊದಲು ನಗರೂರಿನ ಮರಡಿ ಲಿಂಗೇಶ್ವರ ದೇವಾಲಯದಲ್ಲಿ ಮೊದಲ ಪೂಜೆ ನೆರವೇರಿಸಿದರು. ಪೂಜೆ ನಂತರ ಬಿರುಸಿನ ಪ್ರಚಾರ ಶುರು ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚನೆ ಮಾಡಿದರು‌. ಕೆಲವು ಗ್ರಾಮಗಳಲ್ಲಿ ಸಿದ್ದರಾಮಯ್ಯ ಗೆ ಆರತಿ ಮಾಡಿ ಸ್ವಾಗತ ಮಾಡಿ ಭರ್ಜರಿಯಾಗಿ ಅಭಿನಂದಿಸಿದರು.
ಇದೇ ವೇಳೆ ಅಣೆಗೆ ತಿಲಕ ಇಡಲು ಬಂದ ಮಹಿಳೆಗೆ ತಿಲಕ ಬೇಡ ಎಂದು ಹೇಳಿ, ಆಶೀರ್ವಾದ ಮಾಡಿದ ಘಟನೆಯೂ ನಡೆಯಿತು. ಸಿದ್ದರಾಮಯ್ಯ ರ ನಿರ್ಧಾರದಿಂದ ಮಹಿಳೆ ಗೊಂದಲಕ್ಕೆ ಒಳಗಾದರೂ ಆಶೀರ್ವಾದ ಪಡೆದು ತೆರಳಿದರು.
ಇನ್ನು ಕಿಕ್ಕೇರಿಗೆ ಹೋದ ಸಿದ್ದರಾಮಯ್ಯಗೆ ಬೃಹತ್ ಸೇಬಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತ ಕೋರಲಾಯಿತು. ದಾರಿಯುದ್ದಕ್ಕೂ ಕಾರಿನಲ್ಲೇ ನಿಂತು ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಸೇಬಿಗಾಗಿ ಪ್ರಚಾರ ಕಾರ್ಯಕ್ಕೆ ಬಂದ ಜನತೆ ಕಿತ್ತಾಡಿದ ಘಟನೆಯೂ ನಡೆಯಿತು.
ಕ್ಷೇತ್ರದ ನಾಲ್ಕು ಹೋಬಳಿ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲಾಗುತ್ತಿದೆ. ಸಿದ್ದರಾಮಯ್ಯಗೆ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸಾಥ್ ನೀಡಿದ್ದು, ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.Body:ಯತೀಶ್ ಬಾಬು, ಮಂಡ್ಯConclusion:
Last Updated : Nov 21, 2019, 8:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.