ETV Bharat / state

ಪಂಚಭೂತಗಳಲ್ಲಿ ಕಾವೇರಮ್ಮನ ಪುತ್ರರತ್ನ ಲೀನ.. ಮಾದೇಗೌಡರು ಮಂಡ್ಯ ಜನರಲ್ಲಿ ಅಜರಾಮರ.. - ಮಾದೇಗೌಡ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು

ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ ಜಿ. ಮಾದೇಗೌಡ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದರು. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದರು.

ಪಂಚಭೂತಗಳಲ್ಲಿ ಲೀನವಾದ ಕಾವೇರಿ ಹೋರಾಟಗಾರ ಮಾದೇಗೌಡ
Former MP Madegowda funeral completed in Mandya
author img

By

Published : Jul 18, 2021, 8:18 PM IST

Updated : Jul 18, 2021, 11:02 PM IST

ಮಂಡ್ಯ: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಕಾಂಗ್ರೆಸ್​ ಮುಖಂಡ, ಮಾಜಿ ಸಂಸದ ಜಿ. ಮಾದೇಗೌಡ ನಿನ್ನೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಜಿಲ್ಲೆ ಮದ್ದೂರು ತಾಲೂಕಿನ ಹನುಮಂತನಗರದಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಮಾದೇಗೌಡರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಾದೇಗೌಡರ ಚಿತೆಗೆ ಪುತ್ರ ಡಾ. ಪ್ರಕಾಶ್ ಅಗ್ನಿಸ್ಪರ್ಶ ಮಾಡಿದರು. ಇದೇ ವೇಳೆ ಜಿಲ್ಲಾಡಳಿತದಿಂದ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಮಾದೇಗೌಡರ ಪತ್ನಿ ಪದ್ಮಾ ಅವರಿಗೆ ತ್ರಿವರ್ಣಧ್ವಜ ಹಸ್ತಾಂತರಿಸಲಾಯಿತು.

ಅಂತ್ಯಕ್ರಿಯೆಗೂ ಮೊದಲು ಸಾರ್ವಜನಿಕ ದರ್ಶನ:

ಮಾದೇಗೌಡ ಪಾರ್ಥಿವ ಶರೀರವನ್ನು ಕೆ.ಎಂ.ದೊಡ್ಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಜಿ.ಮಾದೇಗೌಡರ ಕುಟುಂಬಸ್ಥರು ಪೂಜೆ, ಅಂತಿಮ ನಮನ ಸಲ್ಲಿಸಿ ಆತ್ಮಲಿಂಗೇಶ್ವರ ದೇವಸ್ಥಾನದ ಸಮೀಪ ಅಂತ್ಯಕ್ರಿಯೆ ನೆರವೇರಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ, ಜಿಲ್ಲಾಧಿಕಾರಿ ಅಶ್ವತಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

Former MP Madegowda funeral completed in Mandya
ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಂಸದ ಜಿ.ಮಾದೇಗೌಡ ಶನಿವಾರ ವಿಧಿವಶರಾಗಿದ್ದರು.

ಓದಿ: ಮಾಜಿ ಸಂಸದ ಮಾದೇಗೌಡ ವಿಧಿವಶ: ಇಂದು ನಡೆಯಲಿರುವ ಅಂತ್ಯಕ್ರಿಯೆ

ಮರೆಯಾದ 'ಕಾವೇರಿ ಪುತ್ರ' : ಮಾದೇಗೌಡರ ಜೀವನ, ಹೋರಾಟದ ಹಾದಿ

ರೈತಪರ ಹೋರಾಟಗಾರ ಮಾದೇಗೌಡ ನಿಧನ : ಬಿಎಸ್​ವೈ, ದೇವೇಗೌಡ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಮಂಡ್ಯ: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಕಾಂಗ್ರೆಸ್​ ಮುಖಂಡ, ಮಾಜಿ ಸಂಸದ ಜಿ. ಮಾದೇಗೌಡ ನಿನ್ನೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಜಿಲ್ಲೆ ಮದ್ದೂರು ತಾಲೂಕಿನ ಹನುಮಂತನಗರದಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಮಾದೇಗೌಡರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಾದೇಗೌಡರ ಚಿತೆಗೆ ಪುತ್ರ ಡಾ. ಪ್ರಕಾಶ್ ಅಗ್ನಿಸ್ಪರ್ಶ ಮಾಡಿದರು. ಇದೇ ವೇಳೆ ಜಿಲ್ಲಾಡಳಿತದಿಂದ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಮಾದೇಗೌಡರ ಪತ್ನಿ ಪದ್ಮಾ ಅವರಿಗೆ ತ್ರಿವರ್ಣಧ್ವಜ ಹಸ್ತಾಂತರಿಸಲಾಯಿತು.

ಅಂತ್ಯಕ್ರಿಯೆಗೂ ಮೊದಲು ಸಾರ್ವಜನಿಕ ದರ್ಶನ:

ಮಾದೇಗೌಡ ಪಾರ್ಥಿವ ಶರೀರವನ್ನು ಕೆ.ಎಂ.ದೊಡ್ಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಜಿ.ಮಾದೇಗೌಡರ ಕುಟುಂಬಸ್ಥರು ಪೂಜೆ, ಅಂತಿಮ ನಮನ ಸಲ್ಲಿಸಿ ಆತ್ಮಲಿಂಗೇಶ್ವರ ದೇವಸ್ಥಾನದ ಸಮೀಪ ಅಂತ್ಯಕ್ರಿಯೆ ನೆರವೇರಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ, ಜಿಲ್ಲಾಧಿಕಾರಿ ಅಶ್ವತಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

Former MP Madegowda funeral completed in Mandya
ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಂಸದ ಜಿ.ಮಾದೇಗೌಡ ಶನಿವಾರ ವಿಧಿವಶರಾಗಿದ್ದರು.

ಓದಿ: ಮಾಜಿ ಸಂಸದ ಮಾದೇಗೌಡ ವಿಧಿವಶ: ಇಂದು ನಡೆಯಲಿರುವ ಅಂತ್ಯಕ್ರಿಯೆ

ಮರೆಯಾದ 'ಕಾವೇರಿ ಪುತ್ರ' : ಮಾದೇಗೌಡರ ಜೀವನ, ಹೋರಾಟದ ಹಾದಿ

ರೈತಪರ ಹೋರಾಟಗಾರ ಮಾದೇಗೌಡ ನಿಧನ : ಬಿಎಸ್​ವೈ, ದೇವೇಗೌಡ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Last Updated : Jul 18, 2021, 11:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.