ETV Bharat / state

ಯಡಿಯೂರಪ್ಪ ರಾಜೀನಾಮೆ: ಹುಟ್ಟೂರು ಬೂಕನಕೆರೆ ಜನರು ಹೇಳುವುದೇನು ನೋಡಿ..

author img

By

Published : Jul 26, 2021, 7:57 PM IST

ಸಿಎಂ ಸ್ಥಾನಕ್ಕೆ ಯಡಿಯೂ ರಾಜೀನಾಮೆ ವಿಚಾರವಾಗಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಅವರ ಅಭಿಮಾನಿಗಳು ಕಣ್ಣೀರಿಟ್ಟು ಬೇಸರ ವ್ಯಕ್ತಪಡಿಸಿದರು.

ಹುಟ್ಟೂರು ಬೂಕನಕೆರೆಯಲ್ಲಿ ನೀರವ ಮೌನ
ಹುಟ್ಟೂರು ಬೂಕನಕೆರೆಯಲ್ಲಿ ನೀರವ ಮೌನ

ಮಂಡ್ಯ: ಬರೋಬ್ಬರಿ ನಾಲ್ಕು ಬಾರಿ ಕರ್ನಾಟಕದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ವ್ಯಕ್ತಿ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ. ಇಂದು ಸಿಎಂ ಸ್ಥಾನಕ್ಕೆ ಅವಧಿ ಪೂರ್ವವೇ ಅವರು ರಾಜೀನಾಮೆ ನೀಡಿದ್ದಾರೆ. ಈ ವಿಷಯ ತಿಳಿದು ಮಂಡ್ಯ ಜಿಲ್ಲೆಯ ತಮ್ಮ ಸ್ವಗ್ರಾಮ ಬೂಕನಕೆರೆಯಲ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.

ಹುಟ್ಟೂರು ಬೂಕನಕೆರೆಯಲ್ಲಿ ನೀರವ ಮೌನ

ಜಿಲ್ಲೆಯ ಬೂಕನಕೆರೆಯಲ್ಲಿ ಬಡ ಕುಟುಂಬದಲ್ಲಿ ಸಿದ್ಧಲಿಂಗಪ್ಪ ಮತ್ತು ಪುಟ್ಟತಾಯಮ್ಮ ಅವರ ಮಗನಾಗಿ ಜನಿಸಿದ ಬಿ.ಎಸ್.ಯಡಿಯೂರಪ್ಪ ತಮ್ಮ ಕಾಲೇಜು ದಿನಗಳಲ್ಲಿಯೇ ಆರ್​ಎಸ್​ಎಸ್​ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ ಕೆಲಸಕ್ಕಾಗಿ ಮಂಡ್ಯದಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ವಲಸೆ ಹೋಗಿ, 1965ರಲ್ಲಿ ಅಲ್ಲಿನ ರೈಸ್ ಮಿಲ್​ನಲ್ಲಿ ಕೆಲಸಕ್ಕೆ ಸೇರಿದರು. ಅಲ್ಲಿಂದ ಯಡಿಯೂರಪ್ಪನವರ ಅದೃಷ್ಟವೇ ಬದಲಾಯಿತು ಎನ್ನುತ್ತಾರೆ ಅಲ್ಲಿನ ಗ್ರಾಮಸ್ಥರು.

ರಾಜ್ಯದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತ ಬಿಎಸ್‌ವೈ. ಇವರು 2018ರ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ ಕಾರಣದಿಂದ 104 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲ ವಜುಭಾಯಿ ವಾಲಾ ಆಹ್ವಾನದಂತೆ 2018ರ ಮೇ 17ರಂದು 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆದ್ರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿದ್ದರಿಂದ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಾರದೆ ಮೇ 23ರಂದು ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದು ಕೂಡ ತಮ್ಮ ಸ್ವಗ್ರಾಮ ಬೂಕನಕೆರೆಯಲ್ಲಿ ಮೌನ ಆವರಿಸಿತ್ತು.

ಬಳಿಕ 2019ರಲ್ಲಿ ಆಪರೇಷನ್ ಕಮಲ ನಡೆಸಿ, ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಅವರು, 2019ರ ಜುಲೈ 26 ರಂದು 4ನೇ ಬಾರಿಗೆ ಬಿ.ಎಸ್.ವೈ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ಎಲ್ಲಿಲ್ಲದ ಖುಷಿ ಸಕ್ಕರೆ ನಾಡಿನ‌ ಜನರದ್ದಾಗಿತ್ತು. ಆದ್ರೆ ಈಗಾಗಲೇ 79 ವರ್ಷವಾಗಿರುವ ಯಡಿಯೂರಪ್ಪನವರಿಗೆ ಇನ್ನೊಮ್ಮೆ ಮುಖ್ಯಮಂತ್ರಿಯಾಗುವ ಅವಕಾಶ ಇಲ್ಲದ ಕಾರಣ ಕರ್ನಾಟಕದಲ್ಲಿ ಬಿ.ಎಸ್.ವೈ ಯುಗ ಮುಗಿದ ಕಾರಣ ಸ್ವಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.

ರಾಜೀನಾಮೆ ಹಿನ್ನೆಲೆಯಲ್ಲಿ ಬೂಕನಕೆರೆಯ ಗ್ರಾಮ ಗೂಗುಲಮ್ಮ ದೇವಿ‌ ದೇವತೆ ದೇವಾಲಯದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಮುಂಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ನೆಲಕಚ್ಚಲಿದೆ ಎಂದು ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ ಅಭಿಮಾನಿ ಮಧು, 'ಬಿ.ಎಸ್. ಯಡಿಯೂರಪ್ಪ ಇಲ್ಲದ ಬಿಜೆಪಿ ಕರ್ನಾಟಕದಲ್ಲಿ ನಿರ್ನಾಮವಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು. ಯುವಕರನ್ನು ಆಯ್ಕೆ ಮಾಡೋದಾದರೆ ಬಿಎಸ್​​ವೈ ಪುತ್ರರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಯಡಿಯೂರಪ್ಪರನ್ನ ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ಉಳಿಯಲ್ಲ' ಎಂಬ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯ ಯಡಿಯೂರಪ್ಪ ಅವರ ಅಪ್ಪಟ್ಟ ಅಭಿಮಾನಿಯಾಗಿದ್ದು, 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುವವರೆಗೆ ಚಪ್ಪಲಿ ಮೆಟ್ಟುವುದಿಲ್ಲ ಎಂದು ಶಪಥ ಮಾಡಿದ್ದರಂತೆ. ನಂತರ ಸಿಎಂ ಗದ್ದುಗೆ ಏರಿದ ಮೇಲೆ ಬಿಎಸ್​ವೈ ಅಭಿಮಾನಿಯ ಅಭಿಮಾನಕ್ಕೆ ಮೆಚ್ಚಿ ಚಪ್ಪಲಿ ಕೊಡಿಸಿ ಸನ್ಮಾನ ಮಾಡಿದ್ದರು.

ಇದನ್ನೂ ಓದಿ: ರಾಜ್ಯಪಾಲರಿಂದ ಬಿಎಸ್​ವೈ ರಾಜೀನಾಮೆ ಅಂಗೀಕಾರ, ಸಚಿವ ಸಂಪುಟ ವಿಸರ್ಜನೆ

ಮಂಡ್ಯ: ಬರೋಬ್ಬರಿ ನಾಲ್ಕು ಬಾರಿ ಕರ್ನಾಟಕದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ವ್ಯಕ್ತಿ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ. ಇಂದು ಸಿಎಂ ಸ್ಥಾನಕ್ಕೆ ಅವಧಿ ಪೂರ್ವವೇ ಅವರು ರಾಜೀನಾಮೆ ನೀಡಿದ್ದಾರೆ. ಈ ವಿಷಯ ತಿಳಿದು ಮಂಡ್ಯ ಜಿಲ್ಲೆಯ ತಮ್ಮ ಸ್ವಗ್ರಾಮ ಬೂಕನಕೆರೆಯಲ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.

ಹುಟ್ಟೂರು ಬೂಕನಕೆರೆಯಲ್ಲಿ ನೀರವ ಮೌನ

ಜಿಲ್ಲೆಯ ಬೂಕನಕೆರೆಯಲ್ಲಿ ಬಡ ಕುಟುಂಬದಲ್ಲಿ ಸಿದ್ಧಲಿಂಗಪ್ಪ ಮತ್ತು ಪುಟ್ಟತಾಯಮ್ಮ ಅವರ ಮಗನಾಗಿ ಜನಿಸಿದ ಬಿ.ಎಸ್.ಯಡಿಯೂರಪ್ಪ ತಮ್ಮ ಕಾಲೇಜು ದಿನಗಳಲ್ಲಿಯೇ ಆರ್​ಎಸ್​ಎಸ್​ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ ಕೆಲಸಕ್ಕಾಗಿ ಮಂಡ್ಯದಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ವಲಸೆ ಹೋಗಿ, 1965ರಲ್ಲಿ ಅಲ್ಲಿನ ರೈಸ್ ಮಿಲ್​ನಲ್ಲಿ ಕೆಲಸಕ್ಕೆ ಸೇರಿದರು. ಅಲ್ಲಿಂದ ಯಡಿಯೂರಪ್ಪನವರ ಅದೃಷ್ಟವೇ ಬದಲಾಯಿತು ಎನ್ನುತ್ತಾರೆ ಅಲ್ಲಿನ ಗ್ರಾಮಸ್ಥರು.

ರಾಜ್ಯದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತ ಬಿಎಸ್‌ವೈ. ಇವರು 2018ರ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ ಕಾರಣದಿಂದ 104 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲ ವಜುಭಾಯಿ ವಾಲಾ ಆಹ್ವಾನದಂತೆ 2018ರ ಮೇ 17ರಂದು 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆದ್ರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿದ್ದರಿಂದ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಾರದೆ ಮೇ 23ರಂದು ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದು ಕೂಡ ತಮ್ಮ ಸ್ವಗ್ರಾಮ ಬೂಕನಕೆರೆಯಲ್ಲಿ ಮೌನ ಆವರಿಸಿತ್ತು.

ಬಳಿಕ 2019ರಲ್ಲಿ ಆಪರೇಷನ್ ಕಮಲ ನಡೆಸಿ, ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಅವರು, 2019ರ ಜುಲೈ 26 ರಂದು 4ನೇ ಬಾರಿಗೆ ಬಿ.ಎಸ್.ವೈ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ಎಲ್ಲಿಲ್ಲದ ಖುಷಿ ಸಕ್ಕರೆ ನಾಡಿನ‌ ಜನರದ್ದಾಗಿತ್ತು. ಆದ್ರೆ ಈಗಾಗಲೇ 79 ವರ್ಷವಾಗಿರುವ ಯಡಿಯೂರಪ್ಪನವರಿಗೆ ಇನ್ನೊಮ್ಮೆ ಮುಖ್ಯಮಂತ್ರಿಯಾಗುವ ಅವಕಾಶ ಇಲ್ಲದ ಕಾರಣ ಕರ್ನಾಟಕದಲ್ಲಿ ಬಿ.ಎಸ್.ವೈ ಯುಗ ಮುಗಿದ ಕಾರಣ ಸ್ವಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.

ರಾಜೀನಾಮೆ ಹಿನ್ನೆಲೆಯಲ್ಲಿ ಬೂಕನಕೆರೆಯ ಗ್ರಾಮ ಗೂಗುಲಮ್ಮ ದೇವಿ‌ ದೇವತೆ ದೇವಾಲಯದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಮುಂಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ನೆಲಕಚ್ಚಲಿದೆ ಎಂದು ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ ಅಭಿಮಾನಿ ಮಧು, 'ಬಿ.ಎಸ್. ಯಡಿಯೂರಪ್ಪ ಇಲ್ಲದ ಬಿಜೆಪಿ ಕರ್ನಾಟಕದಲ್ಲಿ ನಿರ್ನಾಮವಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು. ಯುವಕರನ್ನು ಆಯ್ಕೆ ಮಾಡೋದಾದರೆ ಬಿಎಸ್​​ವೈ ಪುತ್ರರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಯಡಿಯೂರಪ್ಪರನ್ನ ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ಉಳಿಯಲ್ಲ' ಎಂಬ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯ ಯಡಿಯೂರಪ್ಪ ಅವರ ಅಪ್ಪಟ್ಟ ಅಭಿಮಾನಿಯಾಗಿದ್ದು, 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುವವರೆಗೆ ಚಪ್ಪಲಿ ಮೆಟ್ಟುವುದಿಲ್ಲ ಎಂದು ಶಪಥ ಮಾಡಿದ್ದರಂತೆ. ನಂತರ ಸಿಎಂ ಗದ್ದುಗೆ ಏರಿದ ಮೇಲೆ ಬಿಎಸ್​ವೈ ಅಭಿಮಾನಿಯ ಅಭಿಮಾನಕ್ಕೆ ಮೆಚ್ಚಿ ಚಪ್ಪಲಿ ಕೊಡಿಸಿ ಸನ್ಮಾನ ಮಾಡಿದ್ದರು.

ಇದನ್ನೂ ಓದಿ: ರಾಜ್ಯಪಾಲರಿಂದ ಬಿಎಸ್​ವೈ ರಾಜೀನಾಮೆ ಅಂಗೀಕಾರ, ಸಚಿವ ಸಂಪುಟ ವಿಸರ್ಜನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.