ETV Bharat / state

ಗೂಂಡಾ ರಾಜಕಾರಣ ಇಲ್ಲಿ ನಡೆಯಲ್ಲ: ರೇವಣ್ಣಗೆ ನಾರಾಯಣಗೌಡ ಎಚ್ಚರಿಕೆ - ಕೆ.ಆರ್​ ಪೇಟೆಯ ಬಿಜೆಪಿ ಶಾಸಕ ನಾರಾಯಣ ಗೌಡ

ಅನರ್ಹಗೊಂಡು ಬಳಿಕ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಬೀಗುತ್ತಿರುವ ಕೆ.ಆರ್​ ಪೇಟೆಯ ಬಿಜೆಪಿ ಶಾಸಕ ನಾರಾಯಣ ಗೌಡ ಜೆಡಿಎಸ್​ ಹಾಗೂ ಹೆಚ್​ಡಿ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Narayanagowda
ನಾರಾಯಣಗೌಡ
author img

By

Published : Dec 14, 2019, 8:00 PM IST

ಮಂಡ್ಯ: ಜಿಲ್ಲೆಯಲ್ಲಿ ಗೂಂಡಾ ರಾಜಕಾರಣ ನಡೆಯಲ್ಲ. ಹೊರ ಜಿಲ್ಲೆಯವರು ಮಂಡ್ಯ ಜಿಲ್ಲೆಗೆ ಬಂದು ಗುಂಪುಗಾರಿಕೆ ಮಾಡಿ, ಗೂಂಡಾ ರಾಜಕಾರಣ ಮಾಡಿದರೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಬಿಜೆಪಿಯ ನೂತನ ಶಾಸಕ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಶಾಸಕ ನಾರಾಯಣಗೌಡ

ಅಭಿಮಾನಿಗಳಿಂದ ತಮ್ಮ ನಿವಾಸದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಗೂಂಡಾ ರಾಜಕಾರಣ ನಡೆಯೋದಿಲ್ಲ ಎಂಬುದನ್ನು ಜನ ತೋರಿಸಿಕೊಟ್ಟಿದ್ದಾರೆ. ಮಾಜಿ ಸಚಿವ ಹೆಚ್.ಡಿ. ರೇವಣ್ಣರ ಬಗ್ಗೆ ನನಗೆ ಅಪಾರ ಗೌರವವಿದೆ. ಅದನ್ನು ಅವರು ಉಳಿಸಿಕೊಳ್ಳಬೇಕು ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪನವರಿಗೆ ನನಗೆ ಇಂತಹದ್ದೇ ಖಾತೆ ಕೊಡಿ ಎಂದು ಬೇಡಿಕೆ ಇಟ್ಟಿಲ್ಲ. ಉತ್ತಮ ಖಾತೆ ಕೊಡುತ್ತಾರೆ ಎಂಬ ನಿರೀಕ್ಷೆ ಇದೆ. ಸೋತ ಅನರ್ಹರಿಗೂ ಅವಕಾಶ ಸಿಗುವ ಸಾಧ್ಯತೆ ಇದೆ ಎಂದರು.

ಇಡೀ ಜಿಲ್ಲೆಗೆ ತಾಲೂಕನ್ನು ಮಾದರಿಯನ್ನಾಗಿ ಮಾಡುವೆ. ಅಭಿವೃದ್ಧಿಗೆ ಮತ್ತೊಂದು ಹೆಸರೇ ನಾರಾಯಣಗೌಡ. ಅಭಿವೃದ್ಧಿ ಮೂಲಕ ನನ್ನ ಮಾತು ಉಳಿಸಿಕೊಳ್ಳುವೆ. ತಾಲೂಕಿನ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದರು.

ಮಂಡ್ಯ: ಜಿಲ್ಲೆಯಲ್ಲಿ ಗೂಂಡಾ ರಾಜಕಾರಣ ನಡೆಯಲ್ಲ. ಹೊರ ಜಿಲ್ಲೆಯವರು ಮಂಡ್ಯ ಜಿಲ್ಲೆಗೆ ಬಂದು ಗುಂಪುಗಾರಿಕೆ ಮಾಡಿ, ಗೂಂಡಾ ರಾಜಕಾರಣ ಮಾಡಿದರೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಬಿಜೆಪಿಯ ನೂತನ ಶಾಸಕ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಶಾಸಕ ನಾರಾಯಣಗೌಡ

ಅಭಿಮಾನಿಗಳಿಂದ ತಮ್ಮ ನಿವಾಸದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಗೂಂಡಾ ರಾಜಕಾರಣ ನಡೆಯೋದಿಲ್ಲ ಎಂಬುದನ್ನು ಜನ ತೋರಿಸಿಕೊಟ್ಟಿದ್ದಾರೆ. ಮಾಜಿ ಸಚಿವ ಹೆಚ್.ಡಿ. ರೇವಣ್ಣರ ಬಗ್ಗೆ ನನಗೆ ಅಪಾರ ಗೌರವವಿದೆ. ಅದನ್ನು ಅವರು ಉಳಿಸಿಕೊಳ್ಳಬೇಕು ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪನವರಿಗೆ ನನಗೆ ಇಂತಹದ್ದೇ ಖಾತೆ ಕೊಡಿ ಎಂದು ಬೇಡಿಕೆ ಇಟ್ಟಿಲ್ಲ. ಉತ್ತಮ ಖಾತೆ ಕೊಡುತ್ತಾರೆ ಎಂಬ ನಿರೀಕ್ಷೆ ಇದೆ. ಸೋತ ಅನರ್ಹರಿಗೂ ಅವಕಾಶ ಸಿಗುವ ಸಾಧ್ಯತೆ ಇದೆ ಎಂದರು.

ಇಡೀ ಜಿಲ್ಲೆಗೆ ತಾಲೂಕನ್ನು ಮಾದರಿಯನ್ನಾಗಿ ಮಾಡುವೆ. ಅಭಿವೃದ್ಧಿಗೆ ಮತ್ತೊಂದು ಹೆಸರೇ ನಾರಾಯಣಗೌಡ. ಅಭಿವೃದ್ಧಿ ಮೂಲಕ ನನ್ನ ಮಾತು ಉಳಿಸಿಕೊಳ್ಳುವೆ. ತಾಲೂಕಿನ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದರು.

Intro:ಮಂಡ್ಯ: ಜಿಲ್ಲೆಯಲ್ಲಿ ಗೂಂಡಾ ರಾಜಕಾರಣ ನಡೆಯಲ್ಲ. ಹೊರ ಜಿಲ್ಲೆಯವರು ಮಂಡ್ಯ ಜಿಲ್ಲೆಗೆ ಬಂದು ಗುಂಪುಗಾರಿಕೆ ಮಾಡಿ, ಗೂಂಡಾ ರಾಜಕಾರಣ ಮಾಡಿದರೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಬಿಜೆಪಿಯ ನೂತನ ಶಾಸಕ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಅಭಿಮಾನಿಗಳಿಂದ ತಮ್ಮ ನಿವಾಸದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಕ್ಷೇತ್ರದಲ್ಲಿ ಗೂಂಡಾ ರಾಜಕಾರಣ ನಡೆಯೋದಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾಜಿ ಸಚಿವ ಎಚ್.ಡಿ. ರೇವಣ್ಣರ ಬಗ್ಗೆ ನನಗೆ ಅಪಾರ ಗೌರವವಿದೆ, ಅದನ್ನು ಅವರು ಉಳಿಸಿಕೊಳ್ಳಬೇಕು ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಸಿಎಂ ಯಡಿಯೂರಪ್ಪನವರಿಗೆ ನನಗೆ ಇಂತಹದ್ದೇ ಖಾತೆ ಕೊಡಿ ಎಂದು ಬೇಡಿಕೆ ಇಟ್ಟಿಲ್ಲ. ಉತ್ತನ ಖಾತೆ ಕೊಡುತ್ತಾರೆ ಎಂಬ ನಿರೀಕ್ಷೆ ಇದೆ. ಸೋತ ಅನರ್ಹರಿಗೂ ಅವಕಾಶ ಸಿಗುವ ಸಾಧ್ಯತೆ ಇದೆ ಎಂದರು.
ಜಿಲ್ಲೆಗೆ ತಾಲ್ಲೂಕನ್ನು ಮಾದರಿಯನ್ನಾಗಿ ಮಾಡುವೆ. ಅಭಿವೃದ್ಧಿಗೆ ಮತ್ತೊಂದು ಹೆಸರೇ ನಾರಾಯಣಗೌಡ. ಅಭಿವೃದ್ಧಿ ಮೂಲಕ ನನ್ನ ಮಾತು ಉಳಿಸಿಕೊಳ್ಳುವೆ. ತಾಲ್ಲೂಕಿನ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದರು.

ಬೈಟ್; ಕೆ.ಸಿ. ನಾರಾಯಣಗೌಡ, ಬಿಜೆಪಿ ನೂತನ ಶಾಸಕ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.