ಮಂಡ್ಯ: ಉಪಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಾಮಪತ್ರ ಸಲ್ಲಿಕೆ ವೇಳೆ ಇಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಕಲ್ಲುತೂರಾಟ, ಚಪ್ಪಲಿ ಎಸೆದಿದ್ದರು. ಇದರಿಂದ ಎಚ್ಚೆತ್ತುಕೊಂಡಿರುವ ಚುನಾವಣಾ ಆಯೋಗ, ಕ್ಷೇತ್ರಕ್ಕೆ ಆರೆಸೇನಾ ತುಕಡಿಯನ್ನು ನಿಯೋಜನೆ ಮಾಡಿದೆ.
ಜನರಲ್ಲಿ ಭಯ ಹೋಗಲಾಡಿಸಿ ನ್ಯಾಯ ಸಮ್ಮತ ಚುನಾವಣೆ ನಡೆಸಲು ಅರೆಸೇನಾ ತುಕಡಿಗಳು, ಕೆಆರ್ಎಸ್ಆರ್ಪಿ ಪೊಲೀಸರನ್ನು ಕೆ.ಆರ್.ಪೇಟೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೆರೇಡ್ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದರು.