ETV Bharat / state

ಕೌಟುಂಬಿಕ ಕಲಹ: ಪತಿಯಿಂದ ಪತ್ನಿ ಹತ್ಯೆ, ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ

author img

By

Published : Jul 7, 2023, 4:46 PM IST

Updated : Jul 7, 2023, 7:07 PM IST

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹೊಸಯರಗನಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತಿ ಪತ್ನಿಯ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೆಆರ್​ಎಸ್ ಪೊಲೀಸ್ ಠಾಣೆ
ಕೆಆರ್​ಎಸ್ ಪೊಲೀಸ್ ಠಾಣೆ

ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆ ಪತಿ ಪತ್ನಿಯ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹೊಸಯರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಗುವಿನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಪರಾರಿಯಾಗಿದ್ದಾನೆ. ವರ್ಷಿತಾ(24) ಪತಿಯಿಂದ ಕೊಲೆಯಾದ ಪತ್ನಿ ಎಂಬುದು ತಿಳಿದುಬಂದಿದೆ. ಆರೋಪಿ ಪತಿ ಗೌತಮ್(34) ಹತ್ಯೆಗೈದು ಪರಾರಿಯಾಗಿದ್ದಾನೆ. ಮಾರಣಾಂತಿಕ ಹಲ್ಲೆಯಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ 2 ವರ್ಷದ ಗಂಡು ಮಗುವಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಕೆಆರ್​ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪತ್ನಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ : ಇನ್ನೊಂದೆಡೆ ಪತಿಯೊಬ್ಬ ಕುಡಿದ ಅಮಲಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿಯ ಉಪ್ಪರವಾಡಿ ಎಂಬಲ್ಲಿ (ಜೂನ್ 8-2023) ನಡೆದಿತ್ತು. ಮೃತ ಮಹಿಳೆಯನ್ನು ಉಪ್ಪರವಾಡಿ ಗಲ್ಲಿಯ ಉಷಾ ಖೋತ (29) ಎಂದು ಗುರುತಿಸಲಾಗಿತ್ತು. ಪತಿ ಧರೆಪ್ಪ ಖೋತ ಕೊಲೆ ಮಾಡಿದ ಆರೋಪಿ ಎಂಬುದು ತಿಳಿದುಬಂದಿತ್ತು.

ಮೃತ ಉಷಾ ಮನೆಯ ಕೊಠಡಿಯಲ್ಲಿ ಮಲಗಿದ್ದಾಗ ಪತಿ ಧರೆಪ್ಪ ಖೋತಾ ಚಾಕುವಿನಿಂದ ಪತ್ನಿಯ ಕತ್ತಿಗೆ ಇರಿದು ಹತ್ಯೆ ಮಾಡಿದ್ದ. ಬಳಿಕ ತಾನು ಕೂಡ ಅದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿತ್ತು.

ಕುಡಿತದಿಂದಾಗಿ ನಿತ್ಯ ಜಗಳ : ಧರೆಪ್ಪ ಹಾಗೂ ಪತ್ನಿ ಉಷಾ ಮದುವೆಯಾಗಿ 11 ವರ್ಷವಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಮದುವೆ ಬಳಿಕ ಇಬ್ಬರೂ ಚೆನ್ನಾಗಿಯೇ ಇದ್ದರು. ಅಲ್ಲದೆ ಧರೆಪ್ಪ ಒಂದು ಎಕರೆ ಪ್ರದೇಶದಲ್ಲಿ ರೇಷ್ಮೆ ಬೇಸಾಯ ಮಾಡುತ್ತಿದ್ದ. ಬಳಿಕ ಪತಿ ಕುಡಿತದ ಚಟಕ್ಕೆ ದಾಸನಾಗಿದ್ದ. ಇದರಿಂದ ಬೇಸತ್ತ ಪತ್ನಿ ಉಷಾ ಸಾಕಷ್ಟು ಬಾರಿ ಕುಡಿತ ನಿಲ್ಲಿಸುವಂತೆ ಒತ್ತಾಯಿಸಿದ್ದಳು. ಅಲ್ಲದೇ ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆದರೆ, ಇದಕ್ಕೆ ಧರೆಪ್ಪ ಮಾತ್ರ ಇದ್ಯಾವುದಕ್ಕೂ ಕ್ಯಾರೇ ಅನ್ನುತ್ತಿರಲಿಲ್ಲವಂತೆ.

ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು : ಬುಧವಾರ ಮತ್ತೆ ಧರೆಪ್ಪ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. ಈ ಬಗ್ಗೆ ಪತ್ನಿ ಉಷಾ ಗಂಡನನ್ನು ಪ್ರಶ್ನಿಸಿದ್ದಾಳೆ. ಈ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ 8 ವರ್ಷದ ಪುಟ್ಟ ಮಗಳು ಅಲ್ಲೇ ಇದ್ದಳು. ಮಗಳ ಮುಂದೆಯೇ ಇಬ್ಬರೂ ವಾಗ್ವಾದ ನಡೆಸಿದ್ದಾರೆ. ಬಳಿಕ ಇಬ್ಬರ ಜಗಳ ತಣ್ಣಗಾಗಿ ಉಷಾ ತನ್ನ ಮಗಳನ್ನು ಕರೆದುಕೊಂಡು ಹೋಗಿ ಕೊಠಡಿಯಲ್ಲಿ ಮಲಗಿದ್ದಳು. ಆದರೆ ಇಷ್ಟಕ್ಕೆ ಸುಮ್ಮನಾಗದ ಕುಡಿತದ ಅಮಲಿನಲ್ಲಿದ್ದ ಧರೆಪ್ಪ ಮನೆಯ ಕೊಠಡಿಯಲ್ಲಿ ಮಲಗಿದ್ದ ಉಷಾಳ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಆತನಿಗೆ ಪಾಪಪ್ರಜ್ಞೆ ಕಾಡಿದ್ದರಿಂದ ಅದೇ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಈ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Belagavi Crime: ಕುಡಿತದಿಂದ ಕೌಟುಂಬಿಕ ಕಲಹ.. ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆ ಪತಿ ಪತ್ನಿಯ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹೊಸಯರಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಗುವಿನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಪರಾರಿಯಾಗಿದ್ದಾನೆ. ವರ್ಷಿತಾ(24) ಪತಿಯಿಂದ ಕೊಲೆಯಾದ ಪತ್ನಿ ಎಂಬುದು ತಿಳಿದುಬಂದಿದೆ. ಆರೋಪಿ ಪತಿ ಗೌತಮ್(34) ಹತ್ಯೆಗೈದು ಪರಾರಿಯಾಗಿದ್ದಾನೆ. ಮಾರಣಾಂತಿಕ ಹಲ್ಲೆಯಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ 2 ವರ್ಷದ ಗಂಡು ಮಗುವಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಕೆಆರ್​ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪತ್ನಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ : ಇನ್ನೊಂದೆಡೆ ಪತಿಯೊಬ್ಬ ಕುಡಿದ ಅಮಲಿನಲ್ಲಿ ಮನೆಯಲ್ಲಿ ಮಲಗಿದ್ದ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿಯ ಉಪ್ಪರವಾಡಿ ಎಂಬಲ್ಲಿ (ಜೂನ್ 8-2023) ನಡೆದಿತ್ತು. ಮೃತ ಮಹಿಳೆಯನ್ನು ಉಪ್ಪರವಾಡಿ ಗಲ್ಲಿಯ ಉಷಾ ಖೋತ (29) ಎಂದು ಗುರುತಿಸಲಾಗಿತ್ತು. ಪತಿ ಧರೆಪ್ಪ ಖೋತ ಕೊಲೆ ಮಾಡಿದ ಆರೋಪಿ ಎಂಬುದು ತಿಳಿದುಬಂದಿತ್ತು.

ಮೃತ ಉಷಾ ಮನೆಯ ಕೊಠಡಿಯಲ್ಲಿ ಮಲಗಿದ್ದಾಗ ಪತಿ ಧರೆಪ್ಪ ಖೋತಾ ಚಾಕುವಿನಿಂದ ಪತ್ನಿಯ ಕತ್ತಿಗೆ ಇರಿದು ಹತ್ಯೆ ಮಾಡಿದ್ದ. ಬಳಿಕ ತಾನು ಕೂಡ ಅದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿತ್ತು.

ಕುಡಿತದಿಂದಾಗಿ ನಿತ್ಯ ಜಗಳ : ಧರೆಪ್ಪ ಹಾಗೂ ಪತ್ನಿ ಉಷಾ ಮದುವೆಯಾಗಿ 11 ವರ್ಷವಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಮದುವೆ ಬಳಿಕ ಇಬ್ಬರೂ ಚೆನ್ನಾಗಿಯೇ ಇದ್ದರು. ಅಲ್ಲದೆ ಧರೆಪ್ಪ ಒಂದು ಎಕರೆ ಪ್ರದೇಶದಲ್ಲಿ ರೇಷ್ಮೆ ಬೇಸಾಯ ಮಾಡುತ್ತಿದ್ದ. ಬಳಿಕ ಪತಿ ಕುಡಿತದ ಚಟಕ್ಕೆ ದಾಸನಾಗಿದ್ದ. ಇದರಿಂದ ಬೇಸತ್ತ ಪತ್ನಿ ಉಷಾ ಸಾಕಷ್ಟು ಬಾರಿ ಕುಡಿತ ನಿಲ್ಲಿಸುವಂತೆ ಒತ್ತಾಯಿಸಿದ್ದಳು. ಅಲ್ಲದೇ ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆದರೆ, ಇದಕ್ಕೆ ಧರೆಪ್ಪ ಮಾತ್ರ ಇದ್ಯಾವುದಕ್ಕೂ ಕ್ಯಾರೇ ಅನ್ನುತ್ತಿರಲಿಲ್ಲವಂತೆ.

ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು : ಬುಧವಾರ ಮತ್ತೆ ಧರೆಪ್ಪ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. ಈ ಬಗ್ಗೆ ಪತ್ನಿ ಉಷಾ ಗಂಡನನ್ನು ಪ್ರಶ್ನಿಸಿದ್ದಾಳೆ. ಈ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ 8 ವರ್ಷದ ಪುಟ್ಟ ಮಗಳು ಅಲ್ಲೇ ಇದ್ದಳು. ಮಗಳ ಮುಂದೆಯೇ ಇಬ್ಬರೂ ವಾಗ್ವಾದ ನಡೆಸಿದ್ದಾರೆ. ಬಳಿಕ ಇಬ್ಬರ ಜಗಳ ತಣ್ಣಗಾಗಿ ಉಷಾ ತನ್ನ ಮಗಳನ್ನು ಕರೆದುಕೊಂಡು ಹೋಗಿ ಕೊಠಡಿಯಲ್ಲಿ ಮಲಗಿದ್ದಳು. ಆದರೆ ಇಷ್ಟಕ್ಕೆ ಸುಮ್ಮನಾಗದ ಕುಡಿತದ ಅಮಲಿನಲ್ಲಿದ್ದ ಧರೆಪ್ಪ ಮನೆಯ ಕೊಠಡಿಯಲ್ಲಿ ಮಲಗಿದ್ದ ಉಷಾಳ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಆತನಿಗೆ ಪಾಪಪ್ರಜ್ಞೆ ಕಾಡಿದ್ದರಿಂದ ಅದೇ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಈ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Belagavi Crime: ಕುಡಿತದಿಂದ ಕೌಟುಂಬಿಕ ಕಲಹ.. ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

Last Updated : Jul 7, 2023, 7:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.