ಮಂಡ್ಯ: ನಾನು ವಿಧಾನಸಭೆಯಲ್ಲಿ ಸ್ವತಂತ್ರವಾಗಿದ್ದೇನೆ. ನಾನು ಯಾವ ಪಕ್ಷಕ್ಕೂ ಸೇರಿದವನಲ್ಲ ಎಂದು ಮಾಜಿ ಸಚಿವ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಎಸ್ಪಿಯಿಂದ ಉಚ್ಛಾಟನೆಯಾಗಿ ವರ್ಷಗಳೇ ಕಳೆದಿವೆ. ಆದರೆ ನಾನು ಎಲ್ಲಿಗೆ ಬೇಕಾದರೂ ಹೋಗಬಹುದು. ಸಮಯ ಸಂದರ್ಭ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
11ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಆಡಿದಂತೆ ನಡೆದುಕೊಳ್ಳುಬೇಕು. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದರಲ್ಲದೆ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಿ ಹಂತ ಹಂತವಾಗಿ ಬಗೆಹರಿಸಲು ಮುಂದಾಗಬೇಕು ಎಂದು ಆಡಳಿತ ಸರ್ಕಾರಕ್ಕೆ ಸಲಹೆ ನೀಡಿದರು.