ಮಂಡ್ಯ: ಕೇಂದ್ರ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲೆಯ ಯೋಧನೋರ್ವ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ತಾಲೂಕಿನ ಹನಿಯಂಬಾಡಿ ಗ್ರಾಮದ ದೇವರಾಜು (39) ಮೃತ ಯೋಧ. ದೇವರಾಜು ಜ್ವರದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಇಂದು ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರವನ್ನು ತರಲಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.