ETV Bharat / state

ವಿಸಿ ನಾಲೆಗೆ ನೇರವಾಗಿ ಹರಿಯುತ್ತಿದೆ ಕೈಗಾರಿಕಾ ವಲಯದ ತ್ಯಾಜ್ಯ ನೀರು - undefined

ಕೈಗಾರಿಕಾ ವಲಯದಲ್ಲಿ ಸಂಸ್ಕರಣೆ ಮಾಡದ ತ್ಯಾಜ್ಯ ನೀರು ನೇರವಾಗಿ ವಿಶ್ವೇಶ್ವರಯ್ಯ ನಾಲೆಗೆ. ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ.

ಕೈಗಾರಿಕಾ ವಲಯದ ತ್ಯಾಜ್ಯ ನೀರು
author img

By

Published : May 1, 2019, 11:20 AM IST

ಮಂಡ್ಯ: ಕೈಗಾರಿಕಾ ವಲಯದ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಬಿಡಬೇಕು ಎಂಬ ನಿಯಮವಿದೆ. ಆದರೆ ಇಲ್ಲಿ ಯಾವುದೇ ಕಾನೂನು ಪಾಲನೆಯಾಗುತ್ತಿಲ್ಲ. ಕಾರ್ಖಾನೆಯ ತ್ಯಾಜ್ಯ ನೀರು ನಾಲೆಗೆ ಸೇರುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ವಲಯದಲ್ಲಿ ಸಂಸ್ಕರಣೆ ಮಾಡದ ತ್ಯಾಜ್ಯ ನೀರನ್ನು ವಿಶ್ವೇಶ್ವರಯ್ಯ ನಾಲೆಗೆ ಹರಿದು ಬಿಡಲಾಗುತ್ತಿದೆ. ಆದರೂ ಕೂಡ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಆಕ್ರೋಶಗೊಂಡಿರುವ ರೈತರು, ಅಧಿಕಾರಿಗಳು ಹಾಗೂ ಕಾರ್ಖಾನೆಯ ವಿರುದ್ಧ ದೂರು ದಾಖಲಿಸಲು ನಿರ್ಧಾರ ಮಾಡಿದ್ದಾರೆ.

ನಾಲೆಗೆ ಹರಿಯುತ್ತಿರುವ ಕೈಗಾರಿಕಾ ವಲಯದ ತ್ಯಾಜ್ಯ ನೀರು

ನಾಲೆಯ ನೀರು ಜಮೀನು ಹಾಗೂ ಜಾನುವಾರುಗಳಿಗೆ ಕುಡಿಯಲು ಬಳಕೆಯಾಗುತ್ತಿದ್ದು, ಈಗ ಕಲುಷಿತ ನೀರು ರೋಗಕ್ಕೆ ಕಾರಣವಾಗಿದೆ. ಎಷ್ಟೇ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ತಿಲ್ಲ ಅಂತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಕೈಗಾರಿಕಾ ವಲಯದ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಬಿಡಬೇಕು ಎಂಬ ನಿಯಮವಿದೆ. ಆದರೆ ಇಲ್ಲಿ ಯಾವುದೇ ಕಾನೂನು ಪಾಲನೆಯಾಗುತ್ತಿಲ್ಲ. ಕಾರ್ಖಾನೆಯ ತ್ಯಾಜ್ಯ ನೀರು ನಾಲೆಗೆ ಸೇರುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ವಲಯದಲ್ಲಿ ಸಂಸ್ಕರಣೆ ಮಾಡದ ತ್ಯಾಜ್ಯ ನೀರನ್ನು ವಿಶ್ವೇಶ್ವರಯ್ಯ ನಾಲೆಗೆ ಹರಿದು ಬಿಡಲಾಗುತ್ತಿದೆ. ಆದರೂ ಕೂಡ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಆಕ್ರೋಶಗೊಂಡಿರುವ ರೈತರು, ಅಧಿಕಾರಿಗಳು ಹಾಗೂ ಕಾರ್ಖಾನೆಯ ವಿರುದ್ಧ ದೂರು ದಾಖಲಿಸಲು ನಿರ್ಧಾರ ಮಾಡಿದ್ದಾರೆ.

ನಾಲೆಗೆ ಹರಿಯುತ್ತಿರುವ ಕೈಗಾರಿಕಾ ವಲಯದ ತ್ಯಾಜ್ಯ ನೀರು

ನಾಲೆಯ ನೀರು ಜಮೀನು ಹಾಗೂ ಜಾನುವಾರುಗಳಿಗೆ ಕುಡಿಯಲು ಬಳಕೆಯಾಗುತ್ತಿದ್ದು, ಈಗ ಕಲುಷಿತ ನೀರು ರೋಗಕ್ಕೆ ಕಾರಣವಾಗಿದೆ. ಎಷ್ಟೇ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ತಿಲ್ಲ ಅಂತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಮಂಡ್ಯ: ಕೈಗಾರಿಕಾ ವಲಯದ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಬಿಡಬೇಕು ಎಂಬ ನಿಯಮವಿದೆ. ಆದರೆ ಇಲ್ಲಿ ಯಾವುದೇ ಕಾನೂನು ಪಾಲನೆಯಾಗುತ್ತಿಲ್ಲ. ಕೈಗಾರಿಕೆಯ ನೀರು ನಾಲೆಗೆ ಸೇರುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ವಲಯದಲ್ಲಿ ಸಂಸ್ಕರಣ ಮಾಡದ ತ್ಯಾಜ್ಯ ನೀರನ್ನು ವಿಶ್ವೇಶ್ವರಯ್ಯ ನಾಲೆಗೆ ಹರಿದು ಬಿಡಲಾಗುತ್ತಿದ್ದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಖಾನೆಯಿಂದ ಗಲೀಜು ನೀರು ಕಾಲುವೆಗೆ ಹರಿದು ಬಿಟ್ಟಿದ್ರು ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಆಕ್ರೋಶಗೊಂಡಿರುವ ರೈತರು ಅಧಿಕಾರಿಗಳು ಹಾಗೂ ಕಾರ್ಖಾನೆಯ ವಿರುದ್ಧ ದೂರು ದಾಖಲು ಮಾಡಲು ನಿರ್ಧಾರ ಮಾಡಿದ್ದಾರೆ.
ಜಮೀನು ಹಾಗೂ ಜಾನುವಾರುಗಳಿಗೆ ಕುಡಿಯಲು ಬಳಕೆಯಾಗುತ್ತಿದೆ. ಜಮೀನಿಗೆ ಇದೇ ನೀರನ್ನು ಬಳಸ್ತಿರೋದ್ರಿಂದ ರೋಗಕ್ಕೆ ಕಾರಣವಾಗಿದೆ. ಎಷ್ಟೇ ಬಾರಿ ಮನವಿ ಮಾಡಿದ್ರು ಅಧಿಕಾರಿಗಳು ತಲೆ ಕೆಡಿಸಿಕೊಳ್ತಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.