ETV Bharat / state

ಕಾವೇರಿ ನೀರು ವಿವಾದ: ಕೆಆರ್​ಎಸ್​ ಮುತ್ತಿಗೆಗೆ ಯತ್ನಿಸಿದ ಕರವೇ ಪ್ರತಿಭಟನಾಕಾರರು

author img

By ETV Bharat Karnataka Team

Published : Aug 26, 2023, 11:03 PM IST

ಮಂಡ್ಯದಲ್ಲಿಂದು ಕರವೇ ಕಾರ್ಯಕರ್ತರು ಮತ್ತು ಮುಖಂಡು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಪ್ರತಿಭಟನೆ ನಡೆಸಿದರು.

ಕರವೇ ಕಾರ್ಯಕರ್ತರ ಪ್ರತಿಭಟನೆ
ಕರವೇ ಕಾರ್ಯಕರ್ತರ ಪ್ರತಿಭಟನೆ
ಕರವೇ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ: ಕೆಆರ್​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆಗಳ ಮೇಲೆ ಪ್ರತಿಭಟನೆ ನಡೆಯುತ್ತಿವೆ. ಅನ್ನದಾತರ ಆಕ್ರೋಶದ ಬೆನ್ನಲ್ಲೇ ಶನಿವಾರ ಕನ್ನಡಪರ ಹೋರಾಟಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೃಷ್ಣರಾಜಸಾಗರ ಜಲಾಶಯ ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿದ್ದು ಈ ಬಾರಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಕಳೆದ ಹಲವು ದಿನಗಳಿಂದ ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ಪ್ರತಿನಿತ್ಯ 10 ರಿಂದ 12 ಸಾವಿರ ಕ್ಯೂಸೆಕ್​ ನೀರನ್ನು ಹರಿಬಿಡಲಾಗುತ್ತಿದೆ ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿ ಕೆಆರ್​​ಎಸ್​ ಜಲಾಶಯಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಬಗ್ಗೆ ಕರವೇ ಸ್ವಾಭಿಮಾನ ಬಣದ ರಾಜ್ಯಾಧ್ಯಕ್ಷ ಕೃಷ್ಣಗೌಡ ಮಾತನಾಡಿ, ಕಾವೇರಿ ವಿಚಾರವಾಗಿ ಕೆಆರ್​ಎಸ್​ಗೆ ಮುತ್ತಿಗೆ ಹಾಕಲು ಬಂದಿದ್ದು, ಮೊದಲಿಗೆ ರಾಮನಗರದಲ್ಲಿ ಸಾಂಕೇತಿಕ ಪ್ರತಿಭಟನೆ ಮಾಡಲಾಯಿತು. ನಂತರ ಮಂಡ್ಯದಲ್ಲೂ ಪ್ರತಿಭಟನೆ ನಡೆಸಲಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿರುವುದಾಗಿ ಸರ್ಕಾರ ಹೇಳಿದೆ. ಆದರೇ ಈವರೆಗೂ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಿಲ್ಲ. ಬದಲಿಗೆ ನೀರು ಹರಿಸುವ ಪ್ರಮಾಣ ಕಡಿಮೆಗೊಳಿಸಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆ ತಮಿಳುನಾಡು ಸರ್ಕಾರದೊಂದಿಗೆ ಕಾಂಗ್ರೆಸ್​ ಕೈಜೋಡಿಸಿದೆ. ಆದರೇ ಇಲ್ಲಿರುವ ರೈತರ ಬದುಕಿನ ಜೊತೆ ಚೆಲ್ಲಾಟ ಆಡಲಾಗುತ್ತಿದೆ. ಕರ್ನಾಟಕ್ಕೆ ಬೇಕಾದ ಪ್ರಮಾಣದ ನೀರಿಲ್ಲದಿದ್ದರೂ ಅವರಿಗೆ ಹರಿ ಬಿಡಲಾಗುತ್ತಿದೆ. ಇದೀಗ ಎಲ್ಲಾ ನೀರನ್ನು ಹರಿಸಿದ ಮೇಲೆ ಕಾನೂನಾತ್ಮಕ ಹೋರಾಟ ಮಾಡುವುದಾಗಿ ಹೇಳುತ್ತಿದ್ದಾರೆ. ಇದೇ ಮುಂಚೆ ಮಾಡಿದ್ದರೆ ಇಷ್ಟೆಲ್ಲ ವಿವಾದ ಆಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೆಆರ್​ಎಸ್ ಜಲಾಶಯ 124.80 ಅಡಿ ನೀರಿನ ಸಾಮರ್ಥ್ಯವೊಂದಿದ್ದು, ಇದೀಗ ಜಲಾಶಯದಲ್ಲಿ 102 ಅಡಿ ನೀರು ಸಂಗ್ರಹವಾಗಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡುತ್ತಿರುವುದರಿಂದ ಜಲಾಶಯ 100 ಅಡಿ ಸನಿಹಕ್ಕೆ ಬಂದಿದೆ. ಇದೇ ರೀತಿ ನೀರು ಮುಂದುವರೆದರೇ ಜಲಾಶಯ ಸಂಪೂರ್ಣವಾಗಿ ಖಾಲಿಯಾಗಿರುವ ಆತಂಕದಲ್ಲಿ ಜಿಲ್ಲೆಯ ರೈತರು ಇದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜಲಾಶಯದಿಂದ ನೀರು ಹರಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: 'ತಮಿಳುನಾಡಿಗೆ ನೀರು, ಕರ್ನಾಟಕಕ್ಕೆ ನೇಣು': ಮಂಡ್ಯದಲ್ಲಿ ರೈತರ ಪ್ರತಿಭಟನೆ

ಕರವೇ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ: ಕೆಆರ್​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆಗಳ ಮೇಲೆ ಪ್ರತಿಭಟನೆ ನಡೆಯುತ್ತಿವೆ. ಅನ್ನದಾತರ ಆಕ್ರೋಶದ ಬೆನ್ನಲ್ಲೇ ಶನಿವಾರ ಕನ್ನಡಪರ ಹೋರಾಟಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೃಷ್ಣರಾಜಸಾಗರ ಜಲಾಶಯ ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿದ್ದು ಈ ಬಾರಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಕಳೆದ ಹಲವು ದಿನಗಳಿಂದ ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ಪ್ರತಿನಿತ್ಯ 10 ರಿಂದ 12 ಸಾವಿರ ಕ್ಯೂಸೆಕ್​ ನೀರನ್ನು ಹರಿಬಿಡಲಾಗುತ್ತಿದೆ ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿ ಕೆಆರ್​​ಎಸ್​ ಜಲಾಶಯಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಬಗ್ಗೆ ಕರವೇ ಸ್ವಾಭಿಮಾನ ಬಣದ ರಾಜ್ಯಾಧ್ಯಕ್ಷ ಕೃಷ್ಣಗೌಡ ಮಾತನಾಡಿ, ಕಾವೇರಿ ವಿಚಾರವಾಗಿ ಕೆಆರ್​ಎಸ್​ಗೆ ಮುತ್ತಿಗೆ ಹಾಕಲು ಬಂದಿದ್ದು, ಮೊದಲಿಗೆ ರಾಮನಗರದಲ್ಲಿ ಸಾಂಕೇತಿಕ ಪ್ರತಿಭಟನೆ ಮಾಡಲಾಯಿತು. ನಂತರ ಮಂಡ್ಯದಲ್ಲೂ ಪ್ರತಿಭಟನೆ ನಡೆಸಲಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿರುವುದಾಗಿ ಸರ್ಕಾರ ಹೇಳಿದೆ. ಆದರೇ ಈವರೆಗೂ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಿಲ್ಲ. ಬದಲಿಗೆ ನೀರು ಹರಿಸುವ ಪ್ರಮಾಣ ಕಡಿಮೆಗೊಳಿಸಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆ ತಮಿಳುನಾಡು ಸರ್ಕಾರದೊಂದಿಗೆ ಕಾಂಗ್ರೆಸ್​ ಕೈಜೋಡಿಸಿದೆ. ಆದರೇ ಇಲ್ಲಿರುವ ರೈತರ ಬದುಕಿನ ಜೊತೆ ಚೆಲ್ಲಾಟ ಆಡಲಾಗುತ್ತಿದೆ. ಕರ್ನಾಟಕ್ಕೆ ಬೇಕಾದ ಪ್ರಮಾಣದ ನೀರಿಲ್ಲದಿದ್ದರೂ ಅವರಿಗೆ ಹರಿ ಬಿಡಲಾಗುತ್ತಿದೆ. ಇದೀಗ ಎಲ್ಲಾ ನೀರನ್ನು ಹರಿಸಿದ ಮೇಲೆ ಕಾನೂನಾತ್ಮಕ ಹೋರಾಟ ಮಾಡುವುದಾಗಿ ಹೇಳುತ್ತಿದ್ದಾರೆ. ಇದೇ ಮುಂಚೆ ಮಾಡಿದ್ದರೆ ಇಷ್ಟೆಲ್ಲ ವಿವಾದ ಆಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೆಆರ್​ಎಸ್ ಜಲಾಶಯ 124.80 ಅಡಿ ನೀರಿನ ಸಾಮರ್ಥ್ಯವೊಂದಿದ್ದು, ಇದೀಗ ಜಲಾಶಯದಲ್ಲಿ 102 ಅಡಿ ನೀರು ಸಂಗ್ರಹವಾಗಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡುತ್ತಿರುವುದರಿಂದ ಜಲಾಶಯ 100 ಅಡಿ ಸನಿಹಕ್ಕೆ ಬಂದಿದೆ. ಇದೇ ರೀತಿ ನೀರು ಮುಂದುವರೆದರೇ ಜಲಾಶಯ ಸಂಪೂರ್ಣವಾಗಿ ಖಾಲಿಯಾಗಿರುವ ಆತಂಕದಲ್ಲಿ ಜಿಲ್ಲೆಯ ರೈತರು ಇದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜಲಾಶಯದಿಂದ ನೀರು ಹರಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: 'ತಮಿಳುನಾಡಿಗೆ ನೀರು, ಕರ್ನಾಟಕಕ್ಕೆ ನೇಣು': ಮಂಡ್ಯದಲ್ಲಿ ರೈತರ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.