ETV Bharat / state

ಕೆ.ಆರ್.ಪೇಟೆ ತಾಲೂಕಲ್ಲಿ ಚಿರತೆ ನಿರ್ಭಯ ಸಂಚಾರ : ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

author img

By

Published : Jan 12, 2021, 12:41 PM IST

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leopard found in Mandya
ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಡ್ಯ: ಜನವಸತಿಯಿರುವ ಪ್ರದೇಶದಲ್ಲಿ ಚಿರತೆಯೊಂದು ಅಲೆದಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೆ.ಆರ್. ಪೇಟೆ ತಾಲೂಕು ಕುಪ್ಪಳ್ಳಿ ಗ್ರಾಮದ ಲವಕುಮಾರ್ ಅವರ ಮನೆಯ ಸುತ್ತಮುತ್ತ ಚಿರತೆ ಸಂಚರಿಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆ ಗ್ರಾಮದಲ್ಲಿ ಹಲವಾರು ಬಾರಿ ದನ-ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಜನರು ಆತಂಕದಲ್ಲಿದ್ದಾರೆ. ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರು. ಆದರೂ ಸಹ ಚಿರತೆ ಸೆರೆ ಹಿಡಿಯಲು ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

ಸದ್ಯ ಸಿಸಿಟಿವಿಯಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯ ಕಂಡು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಹಾಗೂ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸಲು ರೈತರು ಹಿಂದೇಟು ಹಾಕುತ್ತಿದ್ದಾರೆ‌. ಹೀಗಾಗಿ ಚಿರತೆ ಸೆರೆಹಿಡಿಯುವಂತೆ ಆರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಮಂಡ್ಯ: ಜನವಸತಿಯಿರುವ ಪ್ರದೇಶದಲ್ಲಿ ಚಿರತೆಯೊಂದು ಅಲೆದಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೆ.ಆರ್. ಪೇಟೆ ತಾಲೂಕು ಕುಪ್ಪಳ್ಳಿ ಗ್ರಾಮದ ಲವಕುಮಾರ್ ಅವರ ಮನೆಯ ಸುತ್ತಮುತ್ತ ಚಿರತೆ ಸಂಚರಿಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆ ಗ್ರಾಮದಲ್ಲಿ ಹಲವಾರು ಬಾರಿ ದನ-ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಜನರು ಆತಂಕದಲ್ಲಿದ್ದಾರೆ. ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರು. ಆದರೂ ಸಹ ಚಿರತೆ ಸೆರೆ ಹಿಡಿಯಲು ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

ಸದ್ಯ ಸಿಸಿಟಿವಿಯಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯ ಕಂಡು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಹಾಗೂ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸಲು ರೈತರು ಹಿಂದೇಟು ಹಾಕುತ್ತಿದ್ದಾರೆ‌. ಹೀಗಾಗಿ ಚಿರತೆ ಸೆರೆಹಿಡಿಯುವಂತೆ ಆರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.