ETV Bharat / state

ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್​​ ಡಿಕ್ಕಿ: ನಾಲ್ಕು ತಿಂಗಳ ಮಗು ಸೇರಿ ಮೂವರು ದುರ್ಮರಣ

ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿವೊಂದಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

author img

By

Published : Sep 4, 2021, 11:27 PM IST

Mandya
Mandya

ಮಂಡ್ಯ: ಹೆದ್ದಾರಿ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್​​ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Mandya Accident
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ

ನಾಗಮಂಗಲ ತಾಲುಕಿನ ಹೂಣಕೆರೆ ಗ್ರಾಮದ ಬಳಿಯ ಶ್ರೀರಂಗಪಟ್ಟಣ-ನಾಗಮಂಗಲ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ಆನಂದ್ ಕುಮಾರ್, ಅಮ್ಮು ಹಾಗೂ ನಾಲ್ಕು ತಿಂಗಳ ಗಂಡು ಮಗು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ತದನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: England Vs India 4th: 270ರನ್​ಗಳಿಗೆ 3 ವಿಕೆಟ್​; 171ರನ್​ ಮುನ್ನಡೆ ಪಡೆದ ಭಾರತ

ಮಂಡ್ಯ: ಹೆದ್ದಾರಿ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್​​ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Mandya Accident
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ

ನಾಗಮಂಗಲ ತಾಲುಕಿನ ಹೂಣಕೆರೆ ಗ್ರಾಮದ ಬಳಿಯ ಶ್ರೀರಂಗಪಟ್ಟಣ-ನಾಗಮಂಗಲ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ಆನಂದ್ ಕುಮಾರ್, ಅಮ್ಮು ಹಾಗೂ ನಾಲ್ಕು ತಿಂಗಳ ಗಂಡು ಮಗು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ತದನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: England Vs India 4th: 270ರನ್​ಗಳಿಗೆ 3 ವಿಕೆಟ್​; 171ರನ್​ ಮುನ್ನಡೆ ಪಡೆದ ಭಾರತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.