ETV Bharat / state

ಕೊರೊನಾ ಬಗ್ಗೆ ಜಿಲ್ಲೆಯ ಜನತೆ ಭಯ ಪಡುವ ಅಗತ್ಯವಿಲ್ಲ: ಮಂಡ್ಯ ಜಿಲ್ಲಾಧಿಕಾರಿ - ಮಂಡ್ಯ ಜಿಲ್ಲಾಧಿಕಾರಿ ಡಾ.ವೆಂಕಟೇಶ್

ಕೊರೊನಾ ಭೀತಿ ಹಿನ್ನೆಲೆ ಜನ ಆತಂಕಗೊಂಡಿದ್ದು, ಮಂಡ್ಯ ಜಿಲ್ಲಾಧಿಕಾರಿ ಈ ಬಗ್ಗೆ ಜನರಿಗೆ ಕೆಲ ಮಾಹಿತಿ ನೀಡಿದ್ದಾರೆ. ಅಲ್ಲದೆ ಇಲ್ಲಿ ಅಧಿಕ ಉಷ್ಣಾಂಶ ಇರುವುದರಿಂದ ವೈರಸ್​ ಹರಡುವ ಪ್ರಮಾಣ ಕಡಿಮೆ ಇರುತ್ತೆ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

Mandya DC Press Meet about COVID_19
ಮಂಡ್ಯ ಜಿಲ್ಲಾಧಿಕಾರಿ ಡಾ.ವೆಂಕಟೇಶ್
author img

By

Published : Mar 11, 2020, 2:16 PM IST

ಮಂಡ್ಯ: ಕೊರೊನಾ ಬಗ್ಗೆ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಶೀತ ವಲಯದಲ್ಲಿ ಕೊರೊನಾ ಹೆಚ್ಚಾಗಿ ಹರಡುತ್ತದೆ. ನಮ್ಮಲ್ಲಿ ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುವುದರಿಂದ ವೈರಸ್​ ಹರಡುವಿಕೆ ಪ್ರಮಾಣ ತುಂಬಾ ಕಡಿಮೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.

ದಕ್ಷಿಣ ಭಾರತ ಸಮಭಾಜಕ ವೃತ್ತಕ್ಕೆ ಹತ್ತಿರವಿರುವುದರಿಂದ ಕೋವಿಡ್ -19 ವೈರಸ್​ ಹರಡುವುದು ಸುಲಭವಲ್ಲ. ಅದು ಶೀತ ಪ್ರದೇಶದಲ್ಲಿ ಹೆಚ್ಚು ಹರಡುತ್ತದೆ. ಚೀನಾ ವಸ್ತುಗಳ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ. ಹುಳಿ ಹಣ್ಣುಗಳಾದ ನಿಂಬೆ, ಸೀಬೆ, ಕಿತ್ತಳೆಯನ್ನು ಹೆಚ್ಚಾಗಿ ಬಳಸುವುದು ಸೂಕ್ತ ಎಂದು ಸಲಹೆ ನೀಡಿದರು.

ಮಂಡ್ಯ ಜಿಲ್ಲಾಧಿಕಾರಿ ಡಾ.ವೆಂಕಟೇಶ್

ಕೋವಿಡ್-19ರ ಚಿಕಿತ್ಸೆಗಾಗಿ ಮಿಮ್ಸ್​ನಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ. ಮಾಸ್ಕ್ ಉಪಯೋಗಿಸುವ ಅವಶ್ಯಕತೆ ತುಂಬಾ ಕಡಿಮೆ ಇದೆ. ಮಕ್ಕಳಿಗೆ ಬೇಗ ಪರೀಕ್ಷೆ ಮುಗಿಸುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಮಂಡ್ಯ: ಕೊರೊನಾ ಬಗ್ಗೆ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಶೀತ ವಲಯದಲ್ಲಿ ಕೊರೊನಾ ಹೆಚ್ಚಾಗಿ ಹರಡುತ್ತದೆ. ನಮ್ಮಲ್ಲಿ ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುವುದರಿಂದ ವೈರಸ್​ ಹರಡುವಿಕೆ ಪ್ರಮಾಣ ತುಂಬಾ ಕಡಿಮೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.

ದಕ್ಷಿಣ ಭಾರತ ಸಮಭಾಜಕ ವೃತ್ತಕ್ಕೆ ಹತ್ತಿರವಿರುವುದರಿಂದ ಕೋವಿಡ್ -19 ವೈರಸ್​ ಹರಡುವುದು ಸುಲಭವಲ್ಲ. ಅದು ಶೀತ ಪ್ರದೇಶದಲ್ಲಿ ಹೆಚ್ಚು ಹರಡುತ್ತದೆ. ಚೀನಾ ವಸ್ತುಗಳ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ. ಹುಳಿ ಹಣ್ಣುಗಳಾದ ನಿಂಬೆ, ಸೀಬೆ, ಕಿತ್ತಳೆಯನ್ನು ಹೆಚ್ಚಾಗಿ ಬಳಸುವುದು ಸೂಕ್ತ ಎಂದು ಸಲಹೆ ನೀಡಿದರು.

ಮಂಡ್ಯ ಜಿಲ್ಲಾಧಿಕಾರಿ ಡಾ.ವೆಂಕಟೇಶ್

ಕೋವಿಡ್-19ರ ಚಿಕಿತ್ಸೆಗಾಗಿ ಮಿಮ್ಸ್​ನಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ. ಮಾಸ್ಕ್ ಉಪಯೋಗಿಸುವ ಅವಶ್ಯಕತೆ ತುಂಬಾ ಕಡಿಮೆ ಇದೆ. ಮಕ್ಕಳಿಗೆ ಬೇಗ ಪರೀಕ್ಷೆ ಮುಗಿಸುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.