ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.
ಇದೇ ವೇಳೆ, ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟಿದ್ದ ಕುಮಾರ್ ಕುಟುಂಬಕ್ಕೆ ಭೇಟಿ ನೀಡಿ,ಪರಿಹಾರ ವಿತರಣೆ ಮಾಡಿದರು. ಜೊತೆಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಷ್ಟದ ಸರ್ವೆ ಮಾಡುವಂತೆ ಸೂಚನೆ ನೀಡಿದರು. ಈ ವೇಳೆ ರೈತರು, ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದರು.
ರೈತರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ನಷ್ಟದ ಬಗ್ಗೆ ಅಂದಾಜು ಮಾಡಲು ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಪರಿಹಾರ ನೀಡುವುದಾಗಿ ತಿಳಿಸಿದರು.