ಮಂಡ್ಯ: ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡಿರುವ ಹಿನ್ನೆಲೆ 4 ದಿನಗಳ ಕಾಲ ಮಂಡ್ಯ ಜಿಲ್ಲೆ ಕಂಪ್ಲೀಟ್ ಲಾಕ್ಡೌನ್ ಮಾಡಲು ಜಿಲ್ಲಾಧಿಕಾರಿ ಅಶ್ವಥಿ ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಸೇವೆ, ಕೃಷಿ ಚಟುವಟಿಕೆ, ಹಾಲಿನ ಬೂತ್, ನ್ಯಾಯಬೆಲೆ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಸೇವೆ ಸಂಪೂರ್ಣ ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.
ರಾಜ್ಯದ 18 ಜಿಲ್ಲೆಯ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣ ಮಾಡಲು ಸ್ವಯಂಪ್ರೇರಿತವಾಗಿ ಲಾಕ್ಡೌನ್ ಮಾಡಿಕೊಳ್ಳುವ ಮೂಲಕ ಕೋವಿಡ್ ಸೋಂಕು ತಗ್ಗಿಸಲು ಯೋಜನೆ ರೂಪಿಸಿದ್ದಾರೆ. ಹಾಗೆಯೇ ಮಂಡ್ಯದಲ್ಲಿ ದಿನೆ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುತ್ತಿತ್ತು. ಈ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ಕೋವಿಡ್ ನಿಯಂತ್ರಣಗೊಳಿಸುವ ನಿಟ್ಟಿನಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ಗೆ ಆದೇಶ ಹೊರಡಿಸಿದೆ.
ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಸಂಪೂರ್ಣ ಲಾಕ್ಡೌನ್ ಮಾಡಿ ಮಂಡ್ಯ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಆದೇಶ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.