ETV Bharat / state

ಮಂಡ್ಯದಲ್ಲಿ ನಾಳೆಯಿಂದ ಅನ್​ಲಾಕ್:​ ಜಿಲ್ಲಾಧಿಕಾರಿ ಎಸ್. ಅಶ್ವಥಿ ಆದೇಶ

author img

By

Published : Jun 20, 2021, 5:41 PM IST

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಇಳಿಕೆ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಲಾಕ್​​ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಎಸ್. ಅಶ್ವಥಿ ಆದೇಶ ಹೊರಡಿಸಿದ್ದಾರೆ.

Unlock in mandya
ಮಂಡ್ಯದಲ್ಲಿ ನಾಳೆಯಿಂದ ಅನ್​ಲಾಕ್

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ 3.88ಗೆ ಇಳಿಕೆ ಹಿನ್ನೆಲೆ ನಾಳೆಯಿಂದ ಸಕ್ಕರೆ ನಾಡು ಮಂಡ್ಯವನ್ನು ಅನ್​ಲಾಕ್ ಮಾಡಿ ಜಿಲ್ಲಾಧಿಕಾರಿ ಎಸ್. ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಮಂಡ್ಯದಲ್ಲಿ ನಾಳೆಯಿಂದ ಅನ್​ಲಾಕ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಅಂಗಡಿ-ಮುಂಗಟ್ಟು ಹಾಗೂ ಮಾರುಕಟ್ಟೆ ತೆರೆಯಲು ಬೆಳಗ್ಗೆ 6 ರಿಂದ ಸಂಜೆ 5ವರೆಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಕ್ಲಬ್​ಗಳಲ್ಲಿ ಕಾರ್ಯನಿರ್ವಹಿಸಲು ಶೇ 50 ರಷ್ಟು ಅವಕಾಶ ನೀಡಲಾಗಿದ್ದು, ಬಾರ್​ಗಳಲ್ಲಿ ಪಾರ್ಸಲ್​ಗೆ ಅನುಮತಿ ನೀಡಲಾಗಿದೆ ಎಂದರು.

ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಕೆಲಸ ನಿರ್ವಹಿಸಲು ಶೇ 50ರಷ್ಟು ಮಂದಿಗೆ ಅವಕಾಶ ನೀಡಲಾಗಿದೆ. ಎಸಿ ಇರುವ ಅಂಗಡಿ, ಶಾಪಿಂಗ್ ಮಾಲ್​ಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬಸ್​ಗಳಲ್ಲಿ ಶೇ 50ರಷ್ಟು ಪ್ರಯಾಣಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದರು.

ಓದಿ:ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ - ಚಿಕಿತ್ಸೆ ಫಲಿಸದೇ ಸಾವು

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ 3.88ಗೆ ಇಳಿಕೆ ಹಿನ್ನೆಲೆ ನಾಳೆಯಿಂದ ಸಕ್ಕರೆ ನಾಡು ಮಂಡ್ಯವನ್ನು ಅನ್​ಲಾಕ್ ಮಾಡಿ ಜಿಲ್ಲಾಧಿಕಾರಿ ಎಸ್. ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಮಂಡ್ಯದಲ್ಲಿ ನಾಳೆಯಿಂದ ಅನ್​ಲಾಕ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಅಂಗಡಿ-ಮುಂಗಟ್ಟು ಹಾಗೂ ಮಾರುಕಟ್ಟೆ ತೆರೆಯಲು ಬೆಳಗ್ಗೆ 6 ರಿಂದ ಸಂಜೆ 5ವರೆಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಕ್ಲಬ್​ಗಳಲ್ಲಿ ಕಾರ್ಯನಿರ್ವಹಿಸಲು ಶೇ 50 ರಷ್ಟು ಅವಕಾಶ ನೀಡಲಾಗಿದ್ದು, ಬಾರ್​ಗಳಲ್ಲಿ ಪಾರ್ಸಲ್​ಗೆ ಅನುಮತಿ ನೀಡಲಾಗಿದೆ ಎಂದರು.

ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಕೆಲಸ ನಿರ್ವಹಿಸಲು ಶೇ 50ರಷ್ಟು ಮಂದಿಗೆ ಅವಕಾಶ ನೀಡಲಾಗಿದೆ. ಎಸಿ ಇರುವ ಅಂಗಡಿ, ಶಾಪಿಂಗ್ ಮಾಲ್​ಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬಸ್​ಗಳಲ್ಲಿ ಶೇ 50ರಷ್ಟು ಪ್ರಯಾಣಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದರು.

ಓದಿ:ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ - ಚಿಕಿತ್ಸೆ ಫಲಿಸದೇ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.