ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಸಚಿವ ನಾರಾಯಣ ಗೌಡ ಹಾಗೂ ಶಿವರಾಮ್ ಹೆಬ್ಬಾರ್ ಮಾನವೀಯತೆ ಮೆರೆದಿದ್ದಾರೆ.
ಮೈಶುಗರ್ ಕಾರ್ಖಾನೆ ಭೇಟಿ ಮುಗಿಸಿ, ಪಿಎಸ್ಎಸ್ಕೆ ಕಾರ್ಖಾನೆಗೆ ಇಬ್ಬರೂ ಸಚಿವರು ತೆರಳುತ್ತಿದ್ದರು. ಈ ಸಂದರ್ಭ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು ಗೇಟ್ ಬಳಿ ಮಹಿಳೆಯೊಬ್ಬರು ಅಪಘಾತಗೊಂಡು ಆ್ಯಂಬುಲೆನ್ಸ್ಗಾಗಿ ಕಾಯುತ್ತಿದ್ದರು. ಇದನ್ನು ಗಮನಿಸಿದ ಇಬ್ಬರು ಸಚಿವರು ಮಹಿಳೆಗೆ ಸಾಂತ್ವನ ಹೇಳಿ ಚಿಕಿತ್ಸೆಗೆಂದು ತಮ್ಮ ಎಸ್ಕಾರ್ಟ್ ವಾಹನದಲ್ಲೇ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ.
ಸಚಿವರ ಮಾನವೀಯ ಗುಣಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಪಘಾತ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.