ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಮೂರು ವರ್ಷದ ಮಗಳೊಂದಿಗೆ ತಾಯಿಯೋರ್ವಳು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೋಸಾಯ್ ಘಾಟ್ ಬಳಿ ನಡೆದಿದೆ.
![mother-committed-suicide-with-daughter-in-mandya](https://etvbharatimages.akamaized.net/etvbharat/prod-images/13941741_kdkdk.jpg)
ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದ ನಿವಾಸಿಗಳಾದ ತಾಯಿ ಭಾರ್ಗವಿ (32), ಮಗಳು ದೀಕ್ಷಾ (03) ಮೃತರು. 5 ವರ್ಷಗಳ ಹಿಂದೆ ಶ್ರೀರಂಗಪಟ್ಟಣದ ದೇವೇಗೌಡನಕೊಪ್ಪಲು ಗ್ರಾಮದ ಪ್ರದೀಪ್ ಕುಮಾರ್ ಜೊತೆ ಭಾರ್ಗವಿ ಮದುವೆಯಾಗಿದ್ದರು. ಮೈಸೂರಿನ ಹೂಟಗಳ್ಳಿಯಲ್ಲಿ ವಾಸವಿದ್ದರು. ಗಂಡ-ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತು ಮಗಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
![mother-committed-suicide-with-daughter-in-mandya](https://etvbharatimages.akamaized.net/etvbharat/prod-images/13941741_kdkek.jpg)
ಕಾವೇರಿ ನದಿಯಲ್ಲಿ ತಾಯಿ ಮಗುವಿನ ಶವ ತೇಲುತ್ತಿದ್ದದ್ದನ್ನು ಕಂಡ ಸ್ಥಳೀಯರು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.