ETV Bharat / state

ಕೀಟನಾಶಕ ಮಿಶ್ರಿತ ನೀರು ಸೇವನೆ.. ಮಕ್ಕಳು ಸೇರಿ 15 ಮಂದಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು

author img

By

Published : Nov 28, 2022, 8:51 PM IST

ಮಂಡ್ಯದ ಹೊಸಕೊಪ್ಪಲು ಗ್ರಾಮದಲ್ಲಿ ಕೀಟನಾಶಕ ಮಿಶ್ರಿತ ನೀರು ಕುಡಿದ ಮಕ್ಕಳು ಸೇರಿ 15 ಮಂದಿಗೆ ವಾಂತಿ ಭೇದಿ ಶುರುವಾಗಿದ್ದು, ನಗರದ ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

water-mixed-with-pesticides-15-people-are-hospitalized
ಕೀಟನಾಶಕ ಮಿಶ್ರಿತ ನೀರು ಸೇವನೆ : ಮಕ್ಕಳು ಸೇರಿ 15 ಮಂದಿ ಆಸ್ಪತ್ರೆ ದಾಖಲು

ಮಂಡ್ಯ: ಕೀಟನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನೀರು ಸೇವಿಸಿ ವಾಂತಿ ಭೇದಿ ಶುರುವಾಗಿದ್ದು, 15 ಜನರನ್ನೂ ನಗರದ ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡವರೆಲ್ಲ ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದೆ.

ಸೋಮವಾರ ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30 ಜನರು ಬಂದಿದ್ದರು. ಮಧ್ಯಾಹ್ನ ಊಟದ ನಂತರ, ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕೀಟನಾಶಕ ಸಿಂಪಡಿಸಿದ ಡ್ರಮ್​​ನಲ್ಲಿದ್ದ ನೀರು ಕುಡಿದಿದ್ದಾರೆ. ಇದರಿಂದ ಮಕ್ಕಳು ಸೇರಿ 15 ಮಂದಿಗೆ ವಾಂತಿ ಭೇದಿ ಶುರುವಾಗಿದ್ದು, ತಕ್ಷಣ ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ: ಕೀಟನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನೀರು ಸೇವಿಸಿ ವಾಂತಿ ಭೇದಿ ಶುರುವಾಗಿದ್ದು, 15 ಜನರನ್ನೂ ನಗರದ ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡವರೆಲ್ಲ ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದೆ.

ಸೋಮವಾರ ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30 ಜನರು ಬಂದಿದ್ದರು. ಮಧ್ಯಾಹ್ನ ಊಟದ ನಂತರ, ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕೀಟನಾಶಕ ಸಿಂಪಡಿಸಿದ ಡ್ರಮ್​​ನಲ್ಲಿದ್ದ ನೀರು ಕುಡಿದಿದ್ದಾರೆ. ಇದರಿಂದ ಮಕ್ಕಳು ಸೇರಿ 15 ಮಂದಿಗೆ ವಾಂತಿ ಭೇದಿ ಶುರುವಾಗಿದ್ದು, ತಕ್ಷಣ ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಸಿಬ್ಬಂದಿ ವೇಷದಲ್ಲಿ ಕೊಡಗು ಜಿಲ್ಲಾಸ್ಪತ್ರೆಗೆ ನುಗ್ಗಿದ ಖದೀಮ.. ಬ್ಯಾಗ್,​ ಬೈಕ್​ ಎಗರಿಸಿ ಪರಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.