ಮಂಡ್ಯ : ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲೆಯ ಪ್ರವಾಸಿ ತಾಣಗಳ ಮೇಲೆ ಅದರ ಪರಿಣಾಮ ಬೀರಿದೆ. ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಹಾಗೂ ಕೆಆರ್ಎಸ್ ಬೃಂದಾವನಕ್ಕೆ ಪ್ರವೇಶ ನಿಷೇಧಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ಎಂ ವಿ ವೆಂಕಟೇಶ್ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ನಿಷೇಧ ಇಂದಿನಿಂದ ಒಂದು ವಾರಗಳ ಕಾಲ ಇರಲಿದೆ. ಹೀಗಾಗಿ ಪ್ರವಾಸಿಗರ ನೆಚ್ಚಿನ ತಾಣ ಕೆಆರ್ಎಸ್ ಹಾಗೂ ರಂಗನತಿಟ್ಟು ಮುಚ್ಚಲಿದೆ. ವೀಕೆಂಡ್ ಮೂಡ್ನಲ್ಲಿದ್ದ ಪ್ರವಾಸಿಗರಿಗೆ ನಿರಾಸೆ ಇದರಿಂದಾಗಿ ಮೂಡಿದೆ. ಕಳೆದ ಒಂದು ವಾರದಿಂದ ಪ್ರವಾಸಿಗರ ಕೊರತೆ ಎರಡೂ ತಾಣಗಳಲ್ಲೂ ಕಂಡು ಬಂದಿತ್ತು.