ಮಂಡ್ಯ: ಭಿಕ್ಷುಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಕೀಲಾರ ಗ್ರಾಮದ ಕುಮಾರ್ ಕೊಲೆ ಆರೋಪಿ. ಈತನ ಬಂಧನದ ವೇಳೆ ಕೊರೊನಾ ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಈತನನ್ನು ಮಿಮ್ಸ್ಗೆ ದಾಖಲು ಮಾಡಲಾಗಿತ್ತು. ಡಿಸ್ಟಾರ್ಜ್ ಆಗುವ ಸಂದರ್ಭದಲ್ಲಿ ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿಯಾಗಿದ್ದಾನೆ.
ಮಂಡ್ಯ ಪೂರ್ವ ಠಾಣಾ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭ ಮಾಡಿದ್ದಾರೆ.