ETV Bharat / state

ಉಪಕದನಕ್ಕೆ ಕೈ ಭರ್ಜರಿ ಪ್ಲಾನ್​​​.. ವಜಾ ಮಾಡಿದ್ದ ಮುಖಂಡರಿಗೆ ಮಣೆ, ಮರು ನೇಮಕ - Political updates

ಲೋಕ ಸಮರದಲ್ಲಿ ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್​ ಈಗ ಪಕ್ಷ ಸಂಘಟನೆಗೆ ಮುಂದಾಗಿದೆ. ಚುನಾವಣೆ ವೇಳೆ ಪಕ್ಷ ವಿರೋಧಿ ಎಂದು ವಜಾ ಮಾಡಿದ್ದ ಮುಖಂಡರನ್ನು ಆಯಾ ಸ್ಥಾನಕ್ಕೆ ಮರುನೇಮಕ ಮಾಡಲು ಮುಂದಾಗಿದೆ.

ವಜಾ ಮಾಡಿದ್ದ ಮುಖಂಡರ ಮರುನೇಮಕ
author img

By

Published : Sep 25, 2019, 9:56 PM IST

ಮಂಡ್ಯ: ಲೋಕ ಸಮರದಲ್ಲಿ ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್​ ಈಗ ಪಕ್ಷ ಸಂಘಟನೆಗೆ ಮುಂದಾಗಿದೆ. ಚುನಾವಣೆ ವೇಳೆ ಪಕ್ಷ ವಿರೋಧಿ ಎಂದು ವಜಾ ಮಾಡಿದ್ದ ಮುಖಂಡರನ್ನು ಆಯಾ ಸ್ಥಾನಕ್ಕೆ ಮರುನೇಮಕ ಮಾಡಲು ಮುಂದಾಗಿದೆ.

ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷರ ಮರು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕೆ.ಆರ್.ಪೇಟೆ ಉಪಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಗೆ ಮುಂದಾಗಿದೆ. ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಆರ್.ರವೀಂದ್ರಬಾಬು ಅವರನ್ನು ಮರು ನೇಮಕ ಮಾಡಿದರೆ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗ ಅರವಿಂದ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಕೆಲಸ ಮಾಡಿದ್ದ ರವೀಂದ್ರಬಾಬು ಹಾಗೂ ಅರವಿಂದ್‌ರನ್ನು ಪಕ್ಷದಿಂದ ವಜಾ ಮಾಡಲಾಗಿತ್ತು. ಉಪಚುನಾವಣೆ ಘೋಷಣೆಯಾದ ಕಾರಣ ಮತ್ತೆ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಮಂಡ್ಯ: ಲೋಕ ಸಮರದಲ್ಲಿ ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್​ ಈಗ ಪಕ್ಷ ಸಂಘಟನೆಗೆ ಮುಂದಾಗಿದೆ. ಚುನಾವಣೆ ವೇಳೆ ಪಕ್ಷ ವಿರೋಧಿ ಎಂದು ವಜಾ ಮಾಡಿದ್ದ ಮುಖಂಡರನ್ನು ಆಯಾ ಸ್ಥಾನಕ್ಕೆ ಮರುನೇಮಕ ಮಾಡಲು ಮುಂದಾಗಿದೆ.

ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷರ ಮರು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕೆ.ಆರ್.ಪೇಟೆ ಉಪಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಗೆ ಮುಂದಾಗಿದೆ. ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಆರ್.ರವೀಂದ್ರಬಾಬು ಅವರನ್ನು ಮರು ನೇಮಕ ಮಾಡಿದರೆ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗ ಅರವಿಂದ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಕೆಲಸ ಮಾಡಿದ್ದ ರವೀಂದ್ರಬಾಬು ಹಾಗೂ ಅರವಿಂದ್‌ರನ್ನು ಪಕ್ಷದಿಂದ ವಜಾ ಮಾಡಲಾಗಿತ್ತು. ಉಪಚುನಾವಣೆ ಘೋಷಣೆಯಾದ ಕಾರಣ ಮತ್ತೆ ಅಧ್ಯಕ್ಷರಾಗಿ ನೇಮಿಸಲಾಗಿದೆ.

Intro:ಮಂಡ್ಯ: ಲೋಕ ಸಮರದಲ್ಲಿ ಕೈ ಕೈ ಸುಟ್ಟುಕೊಂಡಿದ್ದ ಈಗ ಪಕ್ಷ ಸಂಘಟನೆಗೆ ಮುಂದಾಗಿದೆ. ಚುನಾವಣೆ ವೇಳೆ ಪಕ್ಷ ವಿರೋಧಿ ಎಂದು ವಜಾ ಮಾಡಿದ್ದ ಮುಖಂಡರನ್ನು ಆಯಾಯ ಸ್ಥಾನಕ್ಕೆ ಮರು ನೇಮಕ ಮಾಡಲು ಮುಂದಾಗಿದೆ.
ಸದ್ಯ ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷರ ಮರು ನೇಮಕಾತಿ ಮಾಡಿ ಆದೇಶ ಹೊರಡಿಸಲಾಗಿದೆ. ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಹಾಗೂ ಸಂಘಟನೆಗೆ ಮುಂದಾಗಿದೆ ಎಂದು ಹೇಳಲಾಗಿದೆ.
ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಆರ್.ರವೀಂದ್ರಬಾಬು ಮರು ನೇಮಕ ಮಾಡಿದರೆ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗ ಅರವಿಂದ್ ನೇಮಕವಾಗಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಕೆಲಸ ಮಾಡಿದ್ದ ರವೀಂದ್ರಬಾಬು ಹಾಗೂ ಅರವಿಂದ್‌ರನ್ನು ಪಕ್ಷದಿಂದ ವಜಾ ಮಾಡಲಾಗಿತ್ತು. ಉಪ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ಮತ್ತೆ ಅಧ್ಯಕ್ಷರಾಗಿ ನೇಮಿಸಲಾಗಿದೆ.Body:ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.