ETV Bharat / state

ಸಾರಿಗೆ ಸಚಿವರೇ ಇತ್ತ ನೋಡಿ! ಲಾರಿಯಲ್ಲಿ ಮದುವೆ ದಿಬ್ಬಣ! ನಿಯಮಕ್ಕಿಲ್ವಾ ಕಿಮ್ಮತ್ತು?

author img

By

Published : May 14, 2019, 8:44 PM IST

ಸರಕು ಸಾಗಾಣೆ ವಾಹನದಲ್ಲಿ ಜನರ ಪ್ರಯಾಣದ ನಿಷೇಧದ ನಡುವೆಯೂ ಖಾಸಗಿ ವಾಹನ ಚಾಲಕರು ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ. ಇತ್ತ ಅಧಿಕಾರಿಗಳು ಶಿಸ್ತಿನ ಕ್ರಮ ಕೈಗೊಳ್ಳದೆ ಕೇವಲ ದಂಡ ಕಟ್ಟಿಸಿ ಬಿಡುತ್ತಿದ್ದಾರೆ.

ಸರಕು ವಾಹನದಲ್ಲಿ ಜನರ ಪ್ರಯಾಣದ ನಿಷೇದ

ಮಂಡ್ಯ: ಸರಕು ಸಾಗಾಣೆ ವಾಹನದಲ್ಲಿ ಜನರ ಪ್ರಯಾಣವನ್ನು ನಿಷೇಧಿಸಿರುವ ಸರ್ಕಾರ, ವಾಹನ ಮಾಲೀಕರಿಗೆ ಎಚ್ಚರಿಕೆ ನೀಡಿತ್ತು. ಆದರೆ, ಸಕ್ಕರೆ ಜಿಲ್ಲೆಯ ವಾಹನ ಸವಾರರು ಈ ಎಚ್ಚರಿಕೆಯ ಕರೆಗಂಟೆಗೆ ಕ್ಯಾರೇ ಎನ್ನುತ್ತಿಲ್ಲ.

ಸರಕು ವಾಹನದಲ್ಲಿ ಜನರ ಪ್ರಯಾಣ,ಪೊಲೀಸರ ನಿರ್ಲಕ್ಷ್ಯ!

ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ತವರೂರಾದ ಮದ್ದೂರು ಪಟ್ಟಣದಲ್ಲಿಂದು ಸಂಚಾರಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದರು. ಚಾಲಕರ ಚಾಲನಾ ಪರವಾನಗಿ, ವಿಮೆ ಸೇರಿದಂತೆ ಹಲವು ದಾಖಲೆಗಳನ್ನ ಪರಿಶೀಲಿಸುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯೊಂದು ಮದುವೆ ದಿಬ್ಬಣಕ್ಕೆ ಹೊರಟಿತ್ತು. ಈ ವೇಳೆ ಲಾರಿ ತಡೆದ ಪೊಲೀಸರು ದಂಡವನ್ನಷ್ಟೇ ಕಟ್ಟಿಸಿಕೊಂಡು ಹಾಗೇನೇ ಬಿಟ್ಟು ಕಳುಹಿಸಿದ್ದಾರೆ.

ರಾಜ್ಯ ಸರ್ಕಾರ ಸರಕು ಸಾಗಾಣಿಕೆ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಬಾರದು ಎಂದು ಸೂಚನೆ ನೀಡಿದೆ. ಆದರೂ ಅಧಿಕಾರಿಗಳು ಈ ನಿಯಮವನ್ನು ಕಾರ್ಯರೂಪಕ್ಕೆ ತರುತ್ತಿಲ್ಲ. ಎಷ್ಟೋ ವಾಹನಗಳಲ್ಲಿ ಜನರನ್ನು ಸಾಗಾಣಿಕೆ ಮಾಡುತ್ತಿದ್ದರೂ ಶಿಸ್ತು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಸರಕು ಸಾಗಾಣೆ ವಾಹನದಲ್ಲಿ ಜನರ ಪ್ರಯಾಣವನ್ನು ನಿಷೇಧಿಸಿರುವ ಸರ್ಕಾರ, ವಾಹನ ಮಾಲೀಕರಿಗೆ ಎಚ್ಚರಿಕೆ ನೀಡಿತ್ತು. ಆದರೆ, ಸಕ್ಕರೆ ಜಿಲ್ಲೆಯ ವಾಹನ ಸವಾರರು ಈ ಎಚ್ಚರಿಕೆಯ ಕರೆಗಂಟೆಗೆ ಕ್ಯಾರೇ ಎನ್ನುತ್ತಿಲ್ಲ.

ಸರಕು ವಾಹನದಲ್ಲಿ ಜನರ ಪ್ರಯಾಣ,ಪೊಲೀಸರ ನಿರ್ಲಕ್ಷ್ಯ!

ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ತವರೂರಾದ ಮದ್ದೂರು ಪಟ್ಟಣದಲ್ಲಿಂದು ಸಂಚಾರಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದರು. ಚಾಲಕರ ಚಾಲನಾ ಪರವಾನಗಿ, ವಿಮೆ ಸೇರಿದಂತೆ ಹಲವು ದಾಖಲೆಗಳನ್ನ ಪರಿಶೀಲಿಸುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯೊಂದು ಮದುವೆ ದಿಬ್ಬಣಕ್ಕೆ ಹೊರಟಿತ್ತು. ಈ ವೇಳೆ ಲಾರಿ ತಡೆದ ಪೊಲೀಸರು ದಂಡವನ್ನಷ್ಟೇ ಕಟ್ಟಿಸಿಕೊಂಡು ಹಾಗೇನೇ ಬಿಟ್ಟು ಕಳುಹಿಸಿದ್ದಾರೆ.

ರಾಜ್ಯ ಸರ್ಕಾರ ಸರಕು ಸಾಗಾಣಿಕೆ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಬಾರದು ಎಂದು ಸೂಚನೆ ನೀಡಿದೆ. ಆದರೂ ಅಧಿಕಾರಿಗಳು ಈ ನಿಯಮವನ್ನು ಕಾರ್ಯರೂಪಕ್ಕೆ ತರುತ್ತಿಲ್ಲ. ಎಷ್ಟೋ ವಾಹನಗಳಲ್ಲಿ ಜನರನ್ನು ಸಾಗಾಣಿಕೆ ಮಾಡುತ್ತಿದ್ದರೂ ಶಿಸ್ತು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Intro:ಮಂಡ್ಯ: ಸರಕು ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಬಾರದು ಅನ್ನುತ್ತೆ ಸರ್ಕಾರ. ವಾಹನ ಮಾಲೀಕರಿಗೆ ಎಚ್ಚರಿಕೆಯನ್ನೂ ನೀಡಿದೆ. ಆದರೆ ಸಕ್ಕರೆ ಜಿಲ್ಲೆಯಲ್ಲಿ ಲಾರಿಗಳಲ್ಲಿ ಪ್ರಯಾಣಿಕರನ್ನು ಸಾಗಿಸಲಾಗುತ್ತಿದೆ. ಲಾರಿಯನ್ನು ಹಿಡಿದ ಸಂಚಾರಿ ಪೊಲೀಸರು ಕೇವಲ ದಂಡ ಹಾಕಿ ಬಿಟ್ಟಿ ಕಳುಹಿಸಿದ್ದಾರೆ. ಆ ಮೂಲಕ ಜನರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿರುವ ವಾಹನ ಮಾಲೀಕರ ಜೊತೆ ಅಧಿಕಾರಿಗಳು ಸೇರಿಕೊಂಡಿರುವುದಕ್ಕೆ ಇಲ್ಲಿದೆ ನೋಡಿ ಸಾಕ್ಷಿ.
ಮದ್ದೂರು ಪಟ್ಟಣದಲ್ಲಿ ಇಂದು ಸಂಚಾರಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದರು. ಚಾಲಕರ ಚಾಲನ ಪರವಾನಗಿ, ವಾಹನಗಳ ದಾಖಲೆಗಳು, ವಿಮೆ ಸೇರಿದಂತೆ ಹಲವು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯೊಂದು ಮದುವೆ ದಿಬ್ಬಣಕ್ಕೆ ಹೊರಟಿತ್ತು. ಅದನ್ನು ಹಿಡಿದ ಪೊಲೀಸರು ದಂಡವನ್ನಷ್ಟೇ ಹಾಕಿ ಕಳುಹಿಸಿದ್ದಾರೆ.
ರಾಜ್ಯ ಸರ್ಕಾರ ಸರಕು ಸಾಗಾಣಿಕೆ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಬಾರದು ಎಂದು ಎಚ್ಚರಿಕೆ ನೀಡಿದೆ. ಆದರೆ ಅದನ್ನು ಇನ್ನೂ ಕಾರ್ಯರೂಪಕ್ಕೆ ತಂದಿಲ್ಲ ಕೆಳ ಮಟ್ಟದ ಅಧಿಕಾರಿಗಳ ವರ್ಗ. ಇಂತಹ ಎಷ್ಟೋ ವಾಹನಗಳಲ್ಲಿ ಜರನ್ನು ಸಾಗಾಣಿಕೆ ಮಾಡುತ್ತಿದ್ದರೂ ಶಿಸ್ತು ಕ್ರಮಕ್ಕೆ ಮುಂದಾಗಿಲ್ಲ.
ಅಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಇಂತಹ ಪ್ರಯಾಣಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿದ್ದಾರೆ.Body:ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.