ಮಂಡ್ಯ: ಕೊರೊನಾ ಆತಂಕದ ನಡುವೆಯೂ ಮದ್ದೂರಿನ ಲೀಲಾವತಿ ಬಡಾವಣೆಯಲ್ಲಿ ಸರಣಿ ಕಳ್ಳತನ ಪ್ರಕರಣ ನಡೆದಿದೆ.
ಮಾಲೀಕರು ಮನೆಯಲ್ಲೇ ಇದ್ದರೂ ಮೂರು ಮನೆಗಳ ಬೀಗ ಮುರಿದು ಚಿನ್ನಾಭರಣ ಸೇರಿದಂತೆ ನಗದನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳತನದಿಂದ ಸ್ಥಳೀಯ ಜನರು ಆತಂಕಗೊಂಡಿದ್ದಾರೆ.
ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.