ETV Bharat / state

ಕಲ್ಲು ಗಣಿಗಾರಿಕೆ ಸ್ಫೋಟದಿಂದ ಮನೆಗಳು ಬಿರುಕು: ಆತಂಕದಲ್ಲಿ ಗ್ರಾಮಸ್ಥರು - mandya latest news

ಮಂಡ್ಯ ತಾಲೂಕಿನ ಆನುಕುಪ್ಪೆ ಗ್ರಾಮದ ಕಲ್ಲು ಗಣಿಗಾರಿಕೆಯಲ್ಲಿ ಸ್ಫೋಟಕಗಳನ್ನು ಬಳಸುತ್ತಿದ್ದು, ಸಮೀಪದ ಗ್ರಾಮಗಳ ಮನೆಗಳಲ್ಲಿ ಬಿರುಕು ಕಾಣಿಸುತ್ತಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮನವಿ ಮಾಡಿದರು.

ston mining in mandya
ಕಲ್ಲು ಗಣಿಗಾರಿಕೆ ಸ್ಪೋಟದಿಂದ ಮನೆಗಳು ಬಿರುಕು
author img

By

Published : Sep 3, 2020, 11:01 PM IST

ಮಂಡ್ಯ: ತಾಲೂಕಿನ ಆನುಕುಪ್ಪೆ ಗ್ರಾಮದ ಸಮೀಪವೇ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಗ್ರಾಮದಲ್ಲಿನ ಮನೆಗಳು ಬಿರುಕು ಬಿಡುತ್ತಿವೆ. ಸುಮಾರು 10ಕ್ಕೂ ಹೆಚ್ಚು ಮನೆಗಳ ಮಾಲೀಕರು ಆತಂಕಗೊಂಡಿದ್ದು, ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಮನವಿ ಮಾಡಲಾಗಿದೆ.

ಕಲ್ಲು ಗಣಿಗಾರಿಕೆ ಸ್ಪೋಟದಿಂದ ಮನೆಗಳು ಬಿರುಕು

ರಾತ್ರಿ ವೇಳೆ ಸ್ಫೋಟಕ ವಸ್ತುಗಳನ್ನು ಬಳಸಿ ಕಲ್ಲುಗಳನ್ನು ಸಿಡಿಸಲಾಗುತ್ತದೆ. ಇದರಿಂದ ಮನೆಗಳಲ್ಲಿ ಬಿರುಕು ಮೂಡಿದೆ. ಪ್ರಭಾವಿ ವ್ಯಕ್ತಿಗಳು ಗಣಿಗಾರಿಕೆ ನಡೆಸುತ್ತಿದ್ದು, ಸಮಸ್ಯೆ ಉಲ್ಬಣವಾಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರಾದ ಮಮತಾ ಆರೋಪಿಸಿದರು.

ಈಗಲಾದರೂ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆ ಬಗೆಹರಿಸಬೇಕು. ತೊಂದರೆಗೀಡಾದ ಮನೆಗಳಿಗೆ ಪರಿಹಾರ ಕೊಡಬೇಕಾಗಿದೆ.

ಮಂಡ್ಯ: ತಾಲೂಕಿನ ಆನುಕುಪ್ಪೆ ಗ್ರಾಮದ ಸಮೀಪವೇ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಗ್ರಾಮದಲ್ಲಿನ ಮನೆಗಳು ಬಿರುಕು ಬಿಡುತ್ತಿವೆ. ಸುಮಾರು 10ಕ್ಕೂ ಹೆಚ್ಚು ಮನೆಗಳ ಮಾಲೀಕರು ಆತಂಕಗೊಂಡಿದ್ದು, ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಮನವಿ ಮಾಡಲಾಗಿದೆ.

ಕಲ್ಲು ಗಣಿಗಾರಿಕೆ ಸ್ಪೋಟದಿಂದ ಮನೆಗಳು ಬಿರುಕು

ರಾತ್ರಿ ವೇಳೆ ಸ್ಫೋಟಕ ವಸ್ತುಗಳನ್ನು ಬಳಸಿ ಕಲ್ಲುಗಳನ್ನು ಸಿಡಿಸಲಾಗುತ್ತದೆ. ಇದರಿಂದ ಮನೆಗಳಲ್ಲಿ ಬಿರುಕು ಮೂಡಿದೆ. ಪ್ರಭಾವಿ ವ್ಯಕ್ತಿಗಳು ಗಣಿಗಾರಿಕೆ ನಡೆಸುತ್ತಿದ್ದು, ಸಮಸ್ಯೆ ಉಲ್ಬಣವಾಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರಾದ ಮಮತಾ ಆರೋಪಿಸಿದರು.

ಈಗಲಾದರೂ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆ ಬಗೆಹರಿಸಬೇಕು. ತೊಂದರೆಗೀಡಾದ ಮನೆಗಳಿಗೆ ಪರಿಹಾರ ಕೊಡಬೇಕಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.