ETV Bharat / state

ಕಾಮಗಾರಿಗಾಗಿ ಅಭಿವೃದ್ಧಿ ವಿಚಾರ: ರೈತ ಸಂಘ, ಜೆಡಿಎಸ್​ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ - undefined

ಆಟೋ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸಿ, ನಂತರ ಸಂತೆ ಮೈದಾನ ಅಭಿವೃದ್ಧಿಪಡಿಸಿ‌ ಎಂದು ಕಾಮಗಾರಿ ಪೂಜೆ ತಡೆದು ಜೆಡಿಎಸ್ ಮುಖಂಡರನ್ನು ರೈತ ಸಂಘದ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡರು.

ರೈತಸಂಘದ ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರ ನಡುವೆ ಮಾತಿನ ಚಕಮಕಿ
author img

By

Published : Jun 30, 2019, 10:00 PM IST

ಮಂಡ್ಯ: ಹಿಂದೆ ಮಂಜೂರು ಮಾಡಲಾಗಿದ್ದ ₹ 5 ಲಕ್ಷ ರೂಪಅಯಿ ವೆಚ್ಚದ ಆಟೋ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸಿ, ನಂತರ ಸಂತೆ ಮೈದಾನ ಅಭಿವೃದ್ಧಿಪಡಿಸಿ‌ ಎಂದು ರೈತ ಸಂಘದ ಕಾರ್ಯಕರ್ತರು ಕಾಮಗಾರಿ ಪೂಜೆಗೆ ಬಂದಿದ್ದ ಜೆಡಿಎಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡು ವಾಪಸ್ ಕಳಿಸಿರುವ ಘಟನೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರೈತಸಂಘದ ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರ ನಡುವೆ ಮಾತಿನ ಚಕಮಕಿ

ಹೌದು, ಗ್ರಾಮದ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗೆ ರೈತಸಂಘದ ಕಾರ್ಯಕರ್ತರು ಅಡ್ಡಿಪಡಿಸಿ, ಪುಟ್ಟಣ್ಣಯ್ಯ ಅವರು ಶಾಸಕರಾಗಿದ್ದ ಅವಧಿಯಲ್ಲಿ ಆಟೋ ನಿಲ್ದಾಣದ ಅಭಿವೃದ್ಧಿಗೆ ₹ 5 ಲಕ್ಷ ಮಂಜೂರಾಗಿತ್ತು. ಆದರೆ ಪುಟ್ಟರಾಜು ಅವರು ಶಾಸಕರಾದ ಬಳಿಕ ಆ ಅನುದಾನವನ್ನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ, ಆಟೋ ನಿಲ್ದಾಣದ ಅಭಿವೃದ್ಧಿಗೆ ಮೊದಲು ಚಾಲನೆ ನೀಡಿ. ಬಳಿಕ ಸಂತೆ ಮೈದಾನದ ಅಭಿವೃದ್ಧಿ ಕೈಗೆತ್ತಿಕೊಳ್ಳುವಂತೆ ರೈತ ಸಂಘದ ಕಾರ್ಯಕರ್ತರು ಪಟ್ಟು ಹಿಡಿದರು.

ಎಪಿಎಂಸಿ ಅನುದಾನದಡಿ ₹ 33 ಲಕ್ಷ ವೆಚ್ಚದಲ್ಲಿ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ರೈತಸಂಘದ ಬಿಗಿಪಟ್ಟಿಗೆ ಗುದ್ದಲಿ ಪೂಜೆ ನೆರವೇರಿಸಲು ಸಾಧ್ಯವಾಗದೆ ಜೆಡಿಎಸ್‌ ಮುಖಂಡರು ವಾಪಸ್ ಆಗಿದ್ದಾರೆ. ಈ ವೇಳೆ ಜೆಡಿಎಸ್‌ ಮುಖಂಡರು ಹಾಗೂ ರೈತ ಸಂಘದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಸಹ ನಡೆದಿದೆ.

ಮಂಡ್ಯ: ಹಿಂದೆ ಮಂಜೂರು ಮಾಡಲಾಗಿದ್ದ ₹ 5 ಲಕ್ಷ ರೂಪಅಯಿ ವೆಚ್ಚದ ಆಟೋ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸಿ, ನಂತರ ಸಂತೆ ಮೈದಾನ ಅಭಿವೃದ್ಧಿಪಡಿಸಿ‌ ಎಂದು ರೈತ ಸಂಘದ ಕಾರ್ಯಕರ್ತರು ಕಾಮಗಾರಿ ಪೂಜೆಗೆ ಬಂದಿದ್ದ ಜೆಡಿಎಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡು ವಾಪಸ್ ಕಳಿಸಿರುವ ಘಟನೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರೈತಸಂಘದ ಕಾರ್ಯಕರ್ತರು ಹಾಗೂ ಜೆಡಿಎಸ್ ಮುಖಂಡರ ನಡುವೆ ಮಾತಿನ ಚಕಮಕಿ

ಹೌದು, ಗ್ರಾಮದ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗೆ ರೈತಸಂಘದ ಕಾರ್ಯಕರ್ತರು ಅಡ್ಡಿಪಡಿಸಿ, ಪುಟ್ಟಣ್ಣಯ್ಯ ಅವರು ಶಾಸಕರಾಗಿದ್ದ ಅವಧಿಯಲ್ಲಿ ಆಟೋ ನಿಲ್ದಾಣದ ಅಭಿವೃದ್ಧಿಗೆ ₹ 5 ಲಕ್ಷ ಮಂಜೂರಾಗಿತ್ತು. ಆದರೆ ಪುಟ್ಟರಾಜು ಅವರು ಶಾಸಕರಾದ ಬಳಿಕ ಆ ಅನುದಾನವನ್ನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ, ಆಟೋ ನಿಲ್ದಾಣದ ಅಭಿವೃದ್ಧಿಗೆ ಮೊದಲು ಚಾಲನೆ ನೀಡಿ. ಬಳಿಕ ಸಂತೆ ಮೈದಾನದ ಅಭಿವೃದ್ಧಿ ಕೈಗೆತ್ತಿಕೊಳ್ಳುವಂತೆ ರೈತ ಸಂಘದ ಕಾರ್ಯಕರ್ತರು ಪಟ್ಟು ಹಿಡಿದರು.

ಎಪಿಎಂಸಿ ಅನುದಾನದಡಿ ₹ 33 ಲಕ್ಷ ವೆಚ್ಚದಲ್ಲಿ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ರೈತಸಂಘದ ಬಿಗಿಪಟ್ಟಿಗೆ ಗುದ್ದಲಿ ಪೂಜೆ ನೆರವೇರಿಸಲು ಸಾಧ್ಯವಾಗದೆ ಜೆಡಿಎಸ್‌ ಮುಖಂಡರು ವಾಪಸ್ ಆಗಿದ್ದಾರೆ. ಈ ವೇಳೆ ಜೆಡಿಎಸ್‌ ಮುಖಂಡರು ಹಾಗೂ ರೈತ ಸಂಘದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಸಹ ನಡೆದಿದೆ.

Intro:ಮಂಡ್ಯ: ಹಿಂದೆ ಮಂಜೂರು ಮಾಡಲಾಗಿದ್ದ 5 ಲಕ್ಷ ರೂಪಾಯಿಯ ಆಟೋ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭ ಮಾಡಿ, ನಂತರ ಸಂತೆ ಮೈದಾನ ಅಭಿವೃದ್ಧಿ ಪಡಿಸಿ‌ ಎಂದು ಕಾಮಗಾರಿ ಪೂಜೆಗೆ ಬಂದ ಜೆಡಿಎಸ್ ಮುಖಂಡರಿಗೆ ತರಾಟೆಗೆ ತೆಗೆದುಕೊಂಡು ವಾಪಸ್ ಕಳಿಸಿದ ಘಟನೆ ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗೆ ರೈತಸಂಘ ಕಾರ್ಯಕರ್ತರು ಅಡ್ಡಿ ಪಡಿಸಿ, ಪುಟ್ಟಣ್ಣಯ್ಯ ಶಾಸಕರಾಗಿದ್ದ ಅವಧಿಯಲ್ಲಿ ಆಟೋ ನಿಲ್ದಾಣದ ಅಭಿವೃದ್ಧಿಗೆ 5 ಲಕ್ಷ ಮಂಜೂರಾಗಿತ್ತು. ಪುಟ್ಟರಾಜು ಶಾಸಕರಾದ ಬಳಿಕ ಆ ಅನುದಾನವನ್ನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ, ಆಟೋನಿಲ್ದಾಣದ ಅಭಿವೃದ್ಧಿಗೂ ಚಾಲನೆ ನೀಡಿ ಬಳಿಕ ಸಂತೆ ಮೈದಾನದ ಅಭಿವೃದ್ಧಿ ಕೈಗೆತ್ತಿಕೊಳ್ಳುವಂತೆ ರೈತಸಂಘ ಪಟ್ಟು ಹಿಡಿದರು.
ರೈತಸಂಘದ ಬಿಗಿಪಟ್ಟಿಗೆ ಗುದ್ದಲಿ ಪೂಜೆ ನೆರವೇರಿಸಲು ಸಾಧ್ಯವಾಗದೆ ಜೆಡಿಎಸ್‌ ಮುಖಂಡರು ವಾಪಸ್ ಆಗಿದ್ದಾರೆ.
ಈ ವೇಳೆ ಜೆಡಿಎಸ್‌-ರೈತ ಸಂಘ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಎಪಿಎಂಸಿ ಅನುದಾನದಡಿ 33 ಲಕ್ಷ ರೂಪಾಯಿ ವೆಚ್ಚದಲ್ಲಿ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲು ಸಿದ್ದತೆ ನಡೆಸಲಾಗಿತ್ತು.Body:ಬೈಟ್: ರಮೇಶ್, ಜೆಡಿಎಸ್ ಮುಖಂಡ

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.