ETV Bharat / state

ಮನೆ ಬಾಗಿಲು ಮುರಿದು ದರೋಡೆಗೆ ಯತ್ನ: ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ

ಮಂಡ್ಯ ತಾಲೂಕಿನ ಬಿಳಿದೇಗುಲು ಗ್ರಾಮದಲ್ಲಿ ಮನೆ ಬಾಗಿಲು ಮುರಿದು ಕಳ್ಳರು ದರೋಡೆಗೆ ಯತ್ನಿಸಿದ್ದಾರೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

author img

By

Published : Feb 10, 2021, 11:19 AM IST

Updated : Feb 10, 2021, 2:13 PM IST

tried-to-rob-by-breaking-door-in-mandya
ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

ಮಂಡ್ಯ: ಮನೆ ಬಾಗಿಲು ಮುರಿದು ದರೋಡೆಗೆ ಯತ್ನಿಸಿ, ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದೇಗುಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ದರೋಡೆಗೆ ಅಡ್ಡಪಡಿಸಿದ ಮಾಲೀಕನ ಮೇಲೆ ಹಲ್ಲೆ ನಡೆಸಿ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ

ಇದನ್ನೂ ಓದಿ: 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಗಮನ ಸೆಳೆದ ವಿಂಟೇಜ್ ರ‍್ಯಾಲಿ

ಹಲ್ಲೆಯಿಂದ ಗಾಯಗೊಂಡ ಮನೆ ಮಾಲೀಕ ಪುಟ್ಟಸ್ವಾಮಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸ್ಥಳದಲ್ಲಿ ಬಿಟ್ಟುಹೋಗಿದ್ದ ದುಷ್ಕರ್ಮಿಗಳ ಬೈಕ್ ಜಪ್ತಿ ಮಾಡಿದ್ದಾರೆ.

ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮಂಡ್ಯ: ಮನೆ ಬಾಗಿಲು ಮುರಿದು ದರೋಡೆಗೆ ಯತ್ನಿಸಿ, ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದೇಗುಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ದರೋಡೆಗೆ ಅಡ್ಡಪಡಿಸಿದ ಮಾಲೀಕನ ಮೇಲೆ ಹಲ್ಲೆ ನಡೆಸಿ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ

ಇದನ್ನೂ ಓದಿ: 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಗಮನ ಸೆಳೆದ ವಿಂಟೇಜ್ ರ‍್ಯಾಲಿ

ಹಲ್ಲೆಯಿಂದ ಗಾಯಗೊಂಡ ಮನೆ ಮಾಲೀಕ ಪುಟ್ಟಸ್ವಾಮಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸ್ಥಳದಲ್ಲಿ ಬಿಟ್ಟುಹೋಗಿದ್ದ ದುಷ್ಕರ್ಮಿಗಳ ಬೈಕ್ ಜಪ್ತಿ ಮಾಡಿದ್ದಾರೆ.

ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Last Updated : Feb 10, 2021, 2:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.