ಮಂಡ್ಯ: ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಸಮೀಪದ ವಿಶ್ವೇಶ್ವರಯ್ಯ ನಾಲೆಯಲ್ಲಿ ನಡೆದಿದೆ.
![Vishweshwarayya Nale](https://etvbharatimages.akamaized.net/etvbharat/prod-images/11495552_thumb.jpg)
ಜವರೇಗೌಡ (34), ಬಸವೇಗೌಡ (26) ಮೃತ ದುರ್ದೈವಿಗಳು. ಸದ್ಯ ಓರ್ವನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಮೃತರು ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದವರಾಗಿದ್ದು, ಸಂಬಂಧಿಕರ ಮನೆಗೆ ಬಂದು ವಿಶ್ವೇಶ್ವರಯ್ಯ ನಾಲೆಗೆ ಈಜಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಕೆಆರ್ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಓದಿ: ಸಂಕಷ್ಟದಲ್ಲಿ ಹೋಟೆಲ್ ಉದ್ಯಮ: ಶೇ. 50ರಷ್ಟು ಗ್ರಾಹಕರಿಗಾದರೂ ಸರ್ಕಾರ ಅವಕಾಶ ಕೊಡಲಿ!