ETV Bharat / state

ನಾರಾಯಣಗೌಡ ಬಿಜೆಪಿ ಸೇರ್ಪಡೆ​ ವದಂತಿ... ಸ್ಪಷ್ಟನೆ ನೀಡಿದ ಜೆಡಿಎಸ್​ ಮುಖಂಡರು - undefined

ಆಪರೇಷನ್ ಕಮಲದ ಭೀತಿ ಜೆಡಿಎಸ್ ಕಾರ್ಯಕರ್ತರನ್ನು ಸಹ ಆತಂಕಕ್ಕೆ ದೂಡಿದೆ. ಕೆ.ಆರ್. ಪೇಟೆ ಜೆಡಿಎಸ್ ಶಾಸಕ ಆಪರೇಷನ್‌ ಕಮಲಕ್ಕೆ ಒಳಗಾಗಿದ್ದಾರೆ ಎಂಬ ವದಂತಿ ಹಿನ್ನಲೆ ಅಭಿಮಾನಿಗಳು ಶಾಸಕರ ಮನೆ ಮುಂದೆ ಜಮಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜೆಡಿಎಸ್​ ಮುಖಂಡರು, ನಾರಾಯಣಗೌಡ ಬಿಜೆಪಿ ಸೇರಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.

ನಾರಾಯಣಗೌಡ ಆಪರೇಷನ್​ ವದಂತಿ..
author img

By

Published : Jul 2, 2019, 4:44 PM IST

Updated : Jul 2, 2019, 6:06 PM IST

ಮಂಡ್ಯ: ಕೆ ಆರ್​ ಪೇಟೆ ಶಾಸಕ ನಾರಾಯಣಗೌಡರು ಬಿಜೆಪಿ ಸೇರುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿರುವ ಹಿನ್ನೆಲೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಮಧ್ಯೆ ಕಾರ್ಯಕರ್ತರನ್ನು ನಡು ನೀರಲ್ಲಿ ಬಿಟ್ಟು ಶಾಸಕರು ಬಿಜೆಪಿ ಸೇರಲ್ಲವೆಂದು ಈ ಕ್ಷೇತ್ರದ ಜೆಡಿಎಸ್​ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಆಪರೇಷನ್ ಕಮಲದ ಭೀತಿ ಜೆಡಿಎಸ್ ಕಾರ್ಯಕರ್ತರನ್ನು ಆತಂಕಕ್ಕೆ ದೂಡಿದೆ. ಕೆ.ಆರ್. ಪೇಟೆ ಜೆಡಿಎಸ್ ಶಾಸಕ ಆಪರೇಷನ್‌ ಕಮಲಕ್ಕೆ ಒಳಗಾಗಿದ್ದಾರೆ ಎಂಬ ವದಂತಿ ಹಿನ್ನಲೆ ಅಭಿಮಾನಿಗಳು ಇಂದು ಶಾಸಕರ ಮನೆ ಮುಂದೆ ಜಮಾಯಿಸಿದ್ದರು.

ಶಾಸಕರ ಮನೆ ಮುಂದೆ ಜಮಾಯಿಸಿದ್ದ ಅಭಿಮಾನಿಗಳು

ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ವದಂತಿಗಳನ್ನು ಹರಡುತ್ತಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿರುವ ನಾರಾಯಣಗೌಡರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ವಶದಲ್ಲಿದ್ದ ಪುರಸಭೆ ಆಡಳಿತವನ್ನು ಜೆಡಿಎಸ್ ತೆಕ್ಕೆಗೆ ತರುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಆದ್ದರಿಂದ ತಾಲೂಕಿನಲ್ಲಿ ಎಲ್ಲಾ ಅಧಿಕಾರವನ್ನು ಕಳೆದುಕೊಂಡು ಹತಾಶರಾಗಿರುವ ಮಾಜಿ ಶಾಸಕರು ವದಂತಿಗಳನ್ನು ಹರಡುತ್ತಿರಬಹುದು ಎಂದು ಜೆಡಿಎಸ್ ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಕೆ ಆರ್​ ಪೇಟೆ ಶಾಸಕ ನಾರಾಯಣಗೌಡರು ಬಿಜೆಪಿ ಸೇರುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿರುವ ಹಿನ್ನೆಲೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಮಧ್ಯೆ ಕಾರ್ಯಕರ್ತರನ್ನು ನಡು ನೀರಲ್ಲಿ ಬಿಟ್ಟು ಶಾಸಕರು ಬಿಜೆಪಿ ಸೇರಲ್ಲವೆಂದು ಈ ಕ್ಷೇತ್ರದ ಜೆಡಿಎಸ್​ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಆಪರೇಷನ್ ಕಮಲದ ಭೀತಿ ಜೆಡಿಎಸ್ ಕಾರ್ಯಕರ್ತರನ್ನು ಆತಂಕಕ್ಕೆ ದೂಡಿದೆ. ಕೆ.ಆರ್. ಪೇಟೆ ಜೆಡಿಎಸ್ ಶಾಸಕ ಆಪರೇಷನ್‌ ಕಮಲಕ್ಕೆ ಒಳಗಾಗಿದ್ದಾರೆ ಎಂಬ ವದಂತಿ ಹಿನ್ನಲೆ ಅಭಿಮಾನಿಗಳು ಇಂದು ಶಾಸಕರ ಮನೆ ಮುಂದೆ ಜಮಾಯಿಸಿದ್ದರು.

ಶಾಸಕರ ಮನೆ ಮುಂದೆ ಜಮಾಯಿಸಿದ್ದ ಅಭಿಮಾನಿಗಳು

ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ವದಂತಿಗಳನ್ನು ಹರಡುತ್ತಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿರುವ ನಾರಾಯಣಗೌಡರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ವಶದಲ್ಲಿದ್ದ ಪುರಸಭೆ ಆಡಳಿತವನ್ನು ಜೆಡಿಎಸ್ ತೆಕ್ಕೆಗೆ ತರುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಆದ್ದರಿಂದ ತಾಲೂಕಿನಲ್ಲಿ ಎಲ್ಲಾ ಅಧಿಕಾರವನ್ನು ಕಳೆದುಕೊಂಡು ಹತಾಶರಾಗಿರುವ ಮಾಜಿ ಶಾಸಕರು ವದಂತಿಗಳನ್ನು ಹರಡುತ್ತಿರಬಹುದು ಎಂದು ಜೆಡಿಎಸ್ ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿದ್ದಾರೆ.

Intro:ಮಂಡ್ಯ: ಆಪರೇಷನ್ ಕಮಲದ ಬೀತಿ ಜೆಡಿಎಸ್ ಕಾರ್ಯಕರ್ತರನ್ನು ಆತಂಕಕ್ಕೆ ದೂಡಿದೆ. ಕೆ.ಆರ್. ಪೇಟೆ ಜೆಡಿಎಸ್ ಶಾಸಕ ಆಪರೇಷನ್‌ಗೆ ಒಳಗಾಗಿದ್ದಾರೆ ಎಂಬ ವದಂತಿ ಹಿನ್ನಲೆ ಅಭಿಮಾನಿಗಳು ಶಾಸಕರ ಮನೆ ಮುಂದೆ ಜಮಾಯಿಸಿದ್ದರು. ಶಾಸಕರ ನಾರಾಯಣ ಗೌಡರ ಬೆಂಬಲಿಗರು ಸಭೆ ಮಾಡಿ ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ.
ಆಪರೇಷನ್ ವದಂತಿಯ ಹಿನ್ನೆಲೆಯಲ್ಲಿ ನೂರಾರು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಶಾಸಕರ ಮನೆಯಲ್ಲಿ ಜಮಾಯಿಸಿದ್ದರು. ದೃಶ್ಯ ಮಾಧ್ಯಮಗಳು ಶಾಸಕ ನಾರಾಯಣಗೌಡರ ಹೆಸರನ್ನು ತೇಜೋವಧೆ ಮಾಡುತ್ತಾ ಬಿಜೆಪಿ ಸೇರುತ್ತಿದ್ದಾರೆ ಎಂಬ ಸುಳ್ಳು ಸುದ್ಧಿಯನ್ನು ಪ್ರಸಾರ ಮಾಡುತ್ತಾ ಕಾರ್ಯಕರ್ತರಲ್ಲಿ ಗೊಂದಲ ಹುಟ್ಟು ಹಾಕುತ್ತಿದ್ದಾರೆ. ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಟ್ಟು ಶಾಸಕರು ಬಿಜೆಪಿ ಸೇರಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಸುಳ್ಳು ಸುದ್ಧಿಗಳು ಹಾಗೂ ವದಂತಿಗಳನ್ನು ಹರಡುತ್ತಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿರುವ ಶಾಸಕರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ವಶದಲ್ಲಿದ್ದ ಪುರಸಭೆ ಆಡಳಿತವನ್ನು ಜೆಡಿಎಸ್ ಪಕ್ಷಕ್ಕೆ ತಂದುಕೊಡಲು ಭಾರೀ ಹೋರಾಟ ನಡೆಸಿ ಯಶಸ್ವಿಯಾಗಿದ್ದಾರೆ. ಆದ್ದರಿಂದ ತಾಲ್ಲೂಕಿನಲ್ಲಿ ಎಲ್ಲಾ ಅಧಿಕಾರವನ್ನು ಕಳೆದುಕೊಂಡು ಹತಾಶರಾಗಿರುವ ಮಾಜಿಶಾಸಕರು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ಸಭೆಯಲ್ಲಿ ತಿಳಿಸಿದ್ದಾರೆ.Body:ಕೊತ್ತತ್ತಿ ಯತೀಶ್ ಬಾಬುConclusion:
Last Updated : Jul 2, 2019, 6:06 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.