ಮಂಡ್ಯ: ಮಹಿಳೆ ಮನೆಯಲ್ಲಿ ಒಂಟಿ ಇರುವುದನ್ನು ಗಮನಸಿದ ದುಷ್ಕರ್ಮಿಗಳು ಒಳಗೆ ನುಗ್ಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಹೌದು, ಒಂಟಿಯಾಗಿದ್ದ ಮಹಿಳೆಯ ಮನೆಗೆ ನುಗ್ಗಿದ ಕೆಲ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಮಹಿಳೆಯನ್ನು ಬೆಡ್ರೂಂಗೆ ಕರೆದೊಯ್ದು ಮಂಚಕ್ಕೆ ಆಕೆಯ ಕೈ-ಕಾಲುಗಳನ್ನು ಕಟ್ಟಿ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಉಸಿರುಕಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ನಿನ್ನೆ ಸಂಜೆ 5ರ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಮೃತ ಮಹಿಳೆಯ ಪತಿ ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದರು. ಪತಿ ಜತೆ ಕಳೆದ ಆರು ತಿಂಗಳಿಂದ ಕಟ್ಟಡದ ಮೊದಲನೇ ಅಂತಸ್ತಿನಲ್ಲಿ ಬಾಡಿಗೆಗೆ ಬಂದಿದ್ದರು. ಟಿವಿಯ ಶಬ್ದ ಹೆಚ್ಚಿಗೆ ನೀಡಿ ಕೃತ್ಯವೆಸಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ಘಟನೆಯಿಂದ ಅಕ್ಕ-ಪಕ್ಕದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹಾಗೂ ಸಿಪಿಐ ಪ್ರಸಾದ್ ಶ್ವಾನದಳ, ಬೆರಳಚ್ಚು ತಜ್ಞರ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮದ್ದೂರು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಇದನ್ನು ಓದಿ:ವಿವಾಹೇತರ ಸಂಬಂಧ: ಪತ್ನಿ-ಪ್ರಿಯಕರನನ್ನು ಕೊಂದ ಪತಿ!