ETV Bharat / state

8 ನಮ್ಮ ಲಕ್ಕಿ ನಂಬರ್​, 18ಕ್ಕೆ ಚುನಾವಣೆ... ಸೋಲೋ ಮಾತೇ ಇಲ್ಲ ಅಂದ್ರು ರೇವಣ್ಣ

ದೇವೇಗೌಡರ ಹಿರಿಯ ಮಗ ಹೆಚ್​.ಡಿ. ರೇವಣ್ಣ ರಾಜಕೀಯ ನಿವೃತ್ತಿ ಪಡೆಯುವ ಬಗ್ಗೆ ಹೊಸ ವ್ಯಾಖ್ಯಾನವೊಂದನ್ನು ಹೇಳಿದ್ದಾರೆ. ಅಲ್ಲದೆ ಜ್ಯೋತಿಷ್ಯವನ್ನು ಹೆಚ್ಚು ನಂಬುವ ಅವರು ತಮಗೆ ಈ ನಂಬರ್​ಗಳು ಲಕ್ಕಿ ಎಂದು ತಿಳಿಸಿದ್ದಾರೆ.

author img

By

Published : Apr 11, 2019, 1:04 PM IST

ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ

ಮೈಸೂರು: ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.

ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಬಾರಿ ರಾಷ್ಟ್ರದಲ್ಲಿ ಮೋದಿ ಅಲೆ ಇದೆ ಎಂದು ಬಿಂಬಿಸಲಾಗುತ್ತಿದೆ. ಅದು ಸುಳ್ಳು. ಹಾಗೇನಾದರೂ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ಕೋಮುವಾದಿಗಳನ್ನು ದೂರವಿಡಲು ಈ ಮೈತ್ರಿ ಮಾಡಿಕೊಳ್ಳಲಾಗಿದೆ. ನಡೆಯುತ್ತಿರುವ ಲೋಕಸಭಾ ಚುನಾವಣಾ ಕದನದಲ್ಲಿ ಈ ಬಾರಿ ನಾವು 14 ಸ್ಥಾನ ಗೆಲ್ಲುವುದು ಖಚಿತ. ಬೇಕಿದ್ದರೆ ನಿಮ್ಮ ಡೈರಿಯಲ್ಲಿ ಬರೆದಿಟ್ಟುಕೊಳ್ಳಿ ಎಂದು ಸವಾಲು ಹಾಕಿದರು.

ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿದ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ

ಬಿಜೆಪಿ ನಾಯಕರು ರಾಮನ ಭಜನೆ ಬಿಟ್ಟು ಇದೀಗ ಮಾಜಿ ಪ್ರಧಾನಿ ದೇವೇಗೌಡರ ಭಜನೆ ಶುರುವಿಟ್ಟುಕೊಂಡಿದ್ದಾರೆ. ದೇವೇಗೌಡರೆಂದರೆ ಅವರಿಗೆ ಭಯ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಮಾಧ್ಯಮದವರ ಮೇಲೆ ಹಲ್ಲೆ ನಡೆದರೆ ನಾನು ಜವಾಬ್ದಾರನಲ್ಲ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಲು ಬಿಜೆಪಿ ಟೀಂ ತಯಾರಿದೆ ಎಂದು ಹೊಸ ಬಾಂಬ್​ ಸಿಡಿಸಿದರು.

ಇನ್ನು ಜ್ಯೋತಿಷ್ಯವನ್ನು ಹೆಚ್ಚಾಗಿ ನಂಬುವ ರೇವಣ್ಣ ಅವರು, 22,6,8 ನಮಗೆ ಲಕ್ಕಿ. ಇದೇ 18 ರಂದು ಚುನಾವಣೆ ನಡೆಯುತ್ತಿದೆ. ಈ ನಂಬರ್ ಕೂಡ ನಮಗೆ ಲಕ್ಕಿಯಾಗಿದೆ. ಹಾಗಾಗಿ ಈ ಸಾರಿ ನಾವು 14 ಸ್ಥಾನಗಳನ್ನು ಗೆಲ್ಲುವುದು ಶತಸಿದ್ಧ ಎಂದು ಜ್ಯೋತಿಷ್ಯದ ಲೆಕ್ಕ ಒಪ್ಪಿಸಿದರು.

ಮೈಸೂರು: ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.

ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಬಾರಿ ರಾಷ್ಟ್ರದಲ್ಲಿ ಮೋದಿ ಅಲೆ ಇದೆ ಎಂದು ಬಿಂಬಿಸಲಾಗುತ್ತಿದೆ. ಅದು ಸುಳ್ಳು. ಹಾಗೇನಾದರೂ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ಕೋಮುವಾದಿಗಳನ್ನು ದೂರವಿಡಲು ಈ ಮೈತ್ರಿ ಮಾಡಿಕೊಳ್ಳಲಾಗಿದೆ. ನಡೆಯುತ್ತಿರುವ ಲೋಕಸಭಾ ಚುನಾವಣಾ ಕದನದಲ್ಲಿ ಈ ಬಾರಿ ನಾವು 14 ಸ್ಥಾನ ಗೆಲ್ಲುವುದು ಖಚಿತ. ಬೇಕಿದ್ದರೆ ನಿಮ್ಮ ಡೈರಿಯಲ್ಲಿ ಬರೆದಿಟ್ಟುಕೊಳ್ಳಿ ಎಂದು ಸವಾಲು ಹಾಕಿದರು.

ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿದ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ

ಬಿಜೆಪಿ ನಾಯಕರು ರಾಮನ ಭಜನೆ ಬಿಟ್ಟು ಇದೀಗ ಮಾಜಿ ಪ್ರಧಾನಿ ದೇವೇಗೌಡರ ಭಜನೆ ಶುರುವಿಟ್ಟುಕೊಂಡಿದ್ದಾರೆ. ದೇವೇಗೌಡರೆಂದರೆ ಅವರಿಗೆ ಭಯ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಮಾಧ್ಯಮದವರ ಮೇಲೆ ಹಲ್ಲೆ ನಡೆದರೆ ನಾನು ಜವಾಬ್ದಾರನಲ್ಲ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಲು ಬಿಜೆಪಿ ಟೀಂ ತಯಾರಿದೆ ಎಂದು ಹೊಸ ಬಾಂಬ್​ ಸಿಡಿಸಿದರು.

ಇನ್ನು ಜ್ಯೋತಿಷ್ಯವನ್ನು ಹೆಚ್ಚಾಗಿ ನಂಬುವ ರೇವಣ್ಣ ಅವರು, 22,6,8 ನಮಗೆ ಲಕ್ಕಿ. ಇದೇ 18 ರಂದು ಚುನಾವಣೆ ನಡೆಯುತ್ತಿದೆ. ಈ ನಂಬರ್ ಕೂಡ ನಮಗೆ ಲಕ್ಕಿಯಾಗಿದೆ. ಹಾಗಾಗಿ ಈ ಸಾರಿ ನಾವು 14 ಸ್ಥಾನಗಳನ್ನು ಗೆಲ್ಲುವುದು ಶತಸಿದ್ಧ ಎಂದು ಜ್ಯೋತಿಷ್ಯದ ಲೆಕ್ಕ ಒಪ್ಪಿಸಿದರು.

Intro:ಮೈಸೂರು: ಮತ್ತೆ ರಾಷ್ಟ್ರದಲ್ಲಿ ಮೋದಿ ಅಧಿಕಾರಕ್ಕೆ ಬಂದರೆ ನಾನು ರಾಜಕೀಯ ಬಿಟ್ಟು ಹೋಗುತ್ತೇನೆ ಎಂದು ಹೆಚ್‌.ಡಿ. ರೇವಣ್ಣ ಮೈಸೂರಿನಲ್ಲಿ ಸವಾಲು ಹಾಗಕಿದರು.


Body:ಇಂದು ಖಾಸಗಿ ಹೋಟೆಲ್ ನಲ್ಲಿ ನಡೆಸಿ ಮಾತನಾಡಿದ ಸಚಿವ ಹೆಚ್.ಡಿ. ರೇವಣ್ಣ ಈ ಬಾರಿ ರಾಷ್ಟ್ರದಲ್ಲಿ ಮೋದಿ ಅಲೆ ಇದೇ ಎಂದು ಬಿಂಬಿಸಲಾಗುತ್ತಿದೆ ಆದರೆ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ನಾನು ರಾಜಕೀಯ ನೀವೃತ್ತಿ ಪಡೆಯುತ್ತೇನೆ ಎಂದ ರೇವಣ್ಣ ರಾಜ್ಯದಲ್ಲಿ ಕೋಮುವಾದಿಗಳನ್ನು ದೂರವಿಡಲು ಮೈತ್ರಿ ಮಾಡಿಕೊಂಡಿದ್ದೇವೆ.
ಈ ಬಾರಿ ರಾಜ್ಯದಲ್ಲಿ ೨೨ ಸ್ಥಾನ ಗೆಲ್ಲುತ್ತೇವೆ ಬೇಕಿದ್ದರೆ ಡೈರಿಯಲ್ಲಿ ಬರೆದು ಇಟ್ಟುಕೊಳ್ಳಿ ಎಂದು ಸವಾಲು ಹಾಕಿದ ಸಚಿವರು ಬಿಜೆಪಿಯವರು ರಾಮನ ಭಜನೆ ಬಿಟ್ಟು ದೇವೇಗೌಡರ ಭಜನೆ ಶುರು ಮಾಡಿದ್ದಾರೆ.
ದೇವೇಗೌಡ ಎಂದರೆ ಅವರಿಗೆ ಭಯ ಎಂದ ಸಚಿವ,
ಕೇಂದ್ರ ಸಚಿವ ಅರುಣ್ ಜೇಟ್ಲಿಯವರ ಹೇಳಿಕೆಗೆ ಉತ್ತರಿಸಬೇಕಿಲ್ಲ ಎಂದು ರೇವಣ್ಣ ಹೇಳಿದರು.
ಮಾಧ್ಯಮದವರ ಮೇಲೆ ಹಲ್ಲೆ ನಡೆದರೆ ನಾನು ಜವಾಬ್ದಾರನಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಮಾಧ್ಯಮದವರ ಮೇಲೆ ಹಲ್ಲೆ ನಡೆಸಲು ಬಿಜೆಪಿಯ ಟೀಂ ರೆಡಿ ಇದೆ ಎಂದು ಹೇಳಿ ಹೊಸ ಬಾಂಬ್ ಸಿಡಿಸಿದರು.
ಇನ್ನೂ ನನಗೆ ೨೨,೬ ಮತ್ತು ೮ ಲಕ್ಕಿ ನಂಬರ್ ಎಂದ ರೇವಣ್ಣ ೧೮ ನೇ ತಾರಿಖು ಚುನಾವಣೆ ನಡೆಯುತ್ತಿದ್ದು ೧೮ ನಮಗೆ ಲಕ್ಕಿ ನಂಬರ್ ಅಂದೂ ನಡೆಯುವ ಚುನಾವಣೆಯಲ್ಲಿ ೧೪ ಸ್ಥಾನಗಳನ್ನ ಗೆಲ್ಲುತ್ತೇವೇ ಎಂದರು.
ಇನ್ನೂ ಈಶ್ವರಪ್ಪನ ಬಗ್ಗೆ ನಾನು ಮಾತಾಡುವುದಿಲ್ಲ ಇಂದೇ ನಮ್ಮ ಕಡೆ (ಪಕ್ಷಕ್ಕೆ ) ಬರಲು ರೆಡಿ ಇದ್ದರು ಎಂದು ಹೊಸ ಬಾಂಬ್ ಹಾಕಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.