ETV Bharat / state

ಮೈಸೂರು: ಸನ್ನಡತೆ ಆಧಾರದ ಮೇಲೆ 24 ಕೈದಿಗಳ ಬಿಡುಗಡೆ

author img

By

Published : May 22, 2023, 10:58 PM IST

ಕಾರಾಗೃಹದಿಂದ ಬಿಡುಗಡೆಯಾದ ಕೈದಿಗಳಿಗೆ ನ್ಯಾಯಾಧೀಶರಾದ ದಿನೇಶ್ ಬಿಡುಗಡೆ ಪತ್ರ ನೀಡಿದರು.

Etv Bharat
Etv Bharat

ಮೈಸೂರು : ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಮಂದಿ ಕೈದಿಗಳನ್ನು ಸನ್ನಢತೆ ಆಧಾರದ ಮೇಲೆ ಸೋಮವಾರ ಬಿಡುಗಡೆ ಮಾಡಲಾಯಿತು. ಕಾರಾಗೃಹ ಆವರಣದಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ದಿನೇಶ್ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕೈದಿಗಳಿಗೆ ದಿನೇಶ್ ಅವರು, ಬಿಡುಗಡೆ ಪತ್ರ ನೀಡಿ ಮುಂದಿನ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು.

ಬಿಡುಗಡೆಯಾದ ಕೈದಿಗಳು : ರಾಜಸ್ಥಾನದ ಸಾವಲ್ ಸಿಂಗ್, ಪುತ್ತೂರಿನ ರಮೇಶ, ಉಡುಪಿಯ ಸುರೇಶ ಹರಿಜನ, ಹಾಸನದ ಪ್ರಶಾಂತ, ಮೈಸೂರಿನ ನಾಗರಾಜು, ಎಚ್.ಕೆ. ಪುಟ್ಟ, ಚಾಮರಾಜನಗರದ ರಾಮದಾಸ ನಾಯ್ಕ, ಕುಳ್ಳೇಗೌಡ, ಸುಂದ್ರಪ್ಪ, ತಿಮ್ಮ, ನಂಜನಗೂಡಿನ ಎಸ್.ಎಂ.ಸತೀಶ್ ಗೌಡ, ಶ್ರೀನಿವಾಸ, ಎಸ್.ನಟರಾಜ, ಜನಾರ್ಧನ, ನಿಂಗಪ್ಪ, ಮದ್ದೂರಿನ ಮಂಜುನಾಥ, ಸೋಮವಾರ ಪೇಟೆಯ ತಮ್ಮಯ್ಯ, ಗುರುಮೂರ್ತಿ, ಬಾಗಲಕೋಟೆಯ ರಿಯಾಜ್, ಮಳವಳ್ಳಿಯ ಸಿದ್ದೇಗೌಡ, ಹಾಸನದ ಎಂ.ಆರ್. ಸೋಮಶೇಖರ, ರಾಮೇಗೌಡ, ಮಂಡ್ಯದ ಎ.ಬಿ.ವಾಸು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗಮ್ಮ ಬಿಡುಗಡೆಯಾದವರು.

ಈ ವೇಳೆ ಮಾತನಾಡಿದ ನ್ಯಾಯಾಧೀಶರಾದ ದಿನೇಶ್ ಅವರು, ಕೈದಿಗಳು ಜೈಲಿನಲ್ಲಿ ಪಡೆದ ವೃತ್ತಿ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಕುಟುಂಬದವರು, ಸ್ನೇಹಿತರು ಮತ್ತು ಬಂಧು-ಬಳಗದೊಂದಿಗೆ ಉತ್ತಮ ಜೀವನ ನಡೆಸಲಿ ಎಂದು ಶುಭ ಹಾರೈಸಿದರು.

ಕಾರಾಗೃಹದ ಮುಖ್ಯ ಅಧೀಕ್ಷಕಿ ಪ್ರತಿಕ್ರಿಯೆ : ಇದೇ ಸಂದರ್ಭದಲ್ಲಿ ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ಮಾತನಾಡಿ, ಕಳೆದ ಜೂನ್‌ನಲ್ಲಿ 31 ಮಂದಿಯ ಕಡತ ಸಲ್ಲಿಸಲಾಗಿದ್ದು, ಅದರಲ್ಲಿ ನಾಲ್ಕು ಮಂದಿಯ ಬಿಡುಗಡೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಬ್ಬರ ಅರ್ಜಿಯನ್ನು ರಾಜ್ಯಪಾಲರು ತಿರಸ್ಕರಿಸಲಾಗಿದ್ದು, ಒಬ್ಬರ ಅರ್ಜಿಯನ್ನು ಮರು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರಾಗೃಹದಲ್ಲಿ ಸರಕಾರಿ ಅನುಮೋದಿತ ಕೈಗಾರಿಕಾ ಸಂಸ್ಥೆಗಳ ಸಹಕಾರದೊಂದಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಷಿಯನ್, ಬ್ಯೂಟಿಷಿಯನ್ ಸೇರಿದಂತೆ ನಾನಾ ತರಬೇತಿ, ಜೊತೆಗೆ ಸಮಸ್ಯೆಗಳನ್ನು ಎದುರಿಸುವ ಕೌನ್ಸೆಲಿಂಗ್ ತರಬೇತಿ ಕಾರ್ಯಕ್ರಮಗಳ ಮೂಲಕ ಹಾಗೂ ಹಲವಾರು ಆಯಾಮಗಳಲ್ಲಿ ಒಬ್ಬ ಬಂಧಿಯನ್ನು ಬಿಡುಗಡೆಗೆ ಸಜ್ಜುಗೊಳಿಸಲಾಗುತ್ತದೆ.

ಕೌಶಲ ತರಬೇತಿ ಪಡೆದವರು ಸ್ವಂತ ಉದ್ದಿಮೆ ಪ್ರಾರಂಭಿಸಬಹುದು. ಉದ್ದಿಮೆಗಳಲ್ಲಿ ಸೇರಿ ತಮ್ಮ ಜೀವನ ರೂಪಿಸಿಕೊಳ್ಳಬಹುದು. ಹತ್ತಾರು ವರ್ಷ ಕಾರಾಗೃಹದಲ್ಲಿ ಇದ್ದವರು ಸಮಾಜದ ಮುಖ್ಯವಾಹಿಗೆ ಹೊಂದಿಕೊಳ್ಳುವುದು, ಆದಾಯ ಗಳಿಸುವುದು ತುಂಬಾ ಕಷ್ಟ. ಆದ್ದರಿಂದ ಕೌಶಲ್ಯ ತರಬೇತಿಗಳಿಂದ ಕಲಿತಿರುವುದನ್ನು ಸಹಾಯ ಮಾಡುತ್ತದೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕಿ ತಿಳಿಸಿದರು.

ಕಾರಾಗೃಹ ಜನರನ್ನು ಇಟ್ಟುಕೊಳ್ಳುವ ಸ್ಥಳವಲ್ಲ. ನ್ಯಾಯದಾನ ಪದ್ದತಿಯನ್ನು ಕಾನೂನು ಬಾಹಿರ ಚಟುವಟಿಕೆಯನ್ನು ಮಾಡಿದವರಿಗೆ ಈ ತರಹದ ಶಿಕ್ಷಾ ವಿಧಾನಗಳಿರುತ್ತವೆ. ಅದನ್ನು ಜಾರಿಗೊಳಿಸುವ ಜೊತೆಗೆ ಅವರ ಮನಪರಿವರ್ತನೆ ಮಾಡುವ ಜವಾಬ್ದಾರಿ ಕಾರಾಗೃಹದ ಮೇಲೆ ಇರುತ್ತದೆ. ಶಿಕ್ಷೆಯನ್ನು ಜಾರಿಗೊಳಿಸುವುದ ಜೊತೆಗೆ ಅವರನ್ನು ಶಿಕ್ಷಣವನ್ನು ನೀಡಲಾಗುತ್ತದೆ.

ಇಲ್ಲಿಗೆ ಬಂದಾಗ ಖೈದಿ ಎಂದು ನೋಡದೆ ವ್ಯಕ್ತಿಯಾಗಿ ನೋಡುತ್ತೇವೆ. ಆತನಲ್ಲಿರುವ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತೇವೆ. ಸನ್ನಢತೆ ಆಧಾರದ ಮೇಲೆ ಬಿಡುಗಡೆ ಮಾಡುವುದು ಜೀವನ ನಡೆಸಲು ನೀಡುವ ಎರಡನೇ ಅವಕಾಶದಂತೆ. ಅದಕ್ಕೆ ಸಮಾಜವೂ ಅನುವು ಮಾಡಿಕೊಡಬೇಕು. ಹೊಸ ಮನಷ್ಯರಾಗಿ ಸ್ವೀಕರಿಸಬೇಕು. ಬಿಡುಗಡೆಯಾಗಲಿರುವ ಕೈದಿಗಳು ಅಪರಾಧ ಮುಕ್ತ ಸಮಾಜದ ರಾಯಬಾರಿಗಳಾಗಲಿ ಎಂದು ಮುಖ್ಯ ಅಧೀಕ್ಷಕಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾರಾಗೃಹ ಇಲಾಖೆಯ ಜೈಲರ್‌ಗಳಾದ ಧರಣೇಶ್, ಗೀತಾ, ಅಮರ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಇದನ್ನೂ ಓದಿ : ರೌಡಿಶೀಟರ್ ಕೊಲೆ ಪ್ರಕರಣ: 11 ಜನರ ಬಂಧನ

ಮೈಸೂರು : ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಮಂದಿ ಕೈದಿಗಳನ್ನು ಸನ್ನಢತೆ ಆಧಾರದ ಮೇಲೆ ಸೋಮವಾರ ಬಿಡುಗಡೆ ಮಾಡಲಾಯಿತು. ಕಾರಾಗೃಹ ಆವರಣದಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ದಿನೇಶ್ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕೈದಿಗಳಿಗೆ ದಿನೇಶ್ ಅವರು, ಬಿಡುಗಡೆ ಪತ್ರ ನೀಡಿ ಮುಂದಿನ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು.

ಬಿಡುಗಡೆಯಾದ ಕೈದಿಗಳು : ರಾಜಸ್ಥಾನದ ಸಾವಲ್ ಸಿಂಗ್, ಪುತ್ತೂರಿನ ರಮೇಶ, ಉಡುಪಿಯ ಸುರೇಶ ಹರಿಜನ, ಹಾಸನದ ಪ್ರಶಾಂತ, ಮೈಸೂರಿನ ನಾಗರಾಜು, ಎಚ್.ಕೆ. ಪುಟ್ಟ, ಚಾಮರಾಜನಗರದ ರಾಮದಾಸ ನಾಯ್ಕ, ಕುಳ್ಳೇಗೌಡ, ಸುಂದ್ರಪ್ಪ, ತಿಮ್ಮ, ನಂಜನಗೂಡಿನ ಎಸ್.ಎಂ.ಸತೀಶ್ ಗೌಡ, ಶ್ರೀನಿವಾಸ, ಎಸ್.ನಟರಾಜ, ಜನಾರ್ಧನ, ನಿಂಗಪ್ಪ, ಮದ್ದೂರಿನ ಮಂಜುನಾಥ, ಸೋಮವಾರ ಪೇಟೆಯ ತಮ್ಮಯ್ಯ, ಗುರುಮೂರ್ತಿ, ಬಾಗಲಕೋಟೆಯ ರಿಯಾಜ್, ಮಳವಳ್ಳಿಯ ಸಿದ್ದೇಗೌಡ, ಹಾಸನದ ಎಂ.ಆರ್. ಸೋಮಶೇಖರ, ರಾಮೇಗೌಡ, ಮಂಡ್ಯದ ಎ.ಬಿ.ವಾಸು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗಮ್ಮ ಬಿಡುಗಡೆಯಾದವರು.

ಈ ವೇಳೆ ಮಾತನಾಡಿದ ನ್ಯಾಯಾಧೀಶರಾದ ದಿನೇಶ್ ಅವರು, ಕೈದಿಗಳು ಜೈಲಿನಲ್ಲಿ ಪಡೆದ ವೃತ್ತಿ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಕುಟುಂಬದವರು, ಸ್ನೇಹಿತರು ಮತ್ತು ಬಂಧು-ಬಳಗದೊಂದಿಗೆ ಉತ್ತಮ ಜೀವನ ನಡೆಸಲಿ ಎಂದು ಶುಭ ಹಾರೈಸಿದರು.

ಕಾರಾಗೃಹದ ಮುಖ್ಯ ಅಧೀಕ್ಷಕಿ ಪ್ರತಿಕ್ರಿಯೆ : ಇದೇ ಸಂದರ್ಭದಲ್ಲಿ ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ಮಾತನಾಡಿ, ಕಳೆದ ಜೂನ್‌ನಲ್ಲಿ 31 ಮಂದಿಯ ಕಡತ ಸಲ್ಲಿಸಲಾಗಿದ್ದು, ಅದರಲ್ಲಿ ನಾಲ್ಕು ಮಂದಿಯ ಬಿಡುಗಡೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಬ್ಬರ ಅರ್ಜಿಯನ್ನು ರಾಜ್ಯಪಾಲರು ತಿರಸ್ಕರಿಸಲಾಗಿದ್ದು, ಒಬ್ಬರ ಅರ್ಜಿಯನ್ನು ಮರು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರಾಗೃಹದಲ್ಲಿ ಸರಕಾರಿ ಅನುಮೋದಿತ ಕೈಗಾರಿಕಾ ಸಂಸ್ಥೆಗಳ ಸಹಕಾರದೊಂದಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಷಿಯನ್, ಬ್ಯೂಟಿಷಿಯನ್ ಸೇರಿದಂತೆ ನಾನಾ ತರಬೇತಿ, ಜೊತೆಗೆ ಸಮಸ್ಯೆಗಳನ್ನು ಎದುರಿಸುವ ಕೌನ್ಸೆಲಿಂಗ್ ತರಬೇತಿ ಕಾರ್ಯಕ್ರಮಗಳ ಮೂಲಕ ಹಾಗೂ ಹಲವಾರು ಆಯಾಮಗಳಲ್ಲಿ ಒಬ್ಬ ಬಂಧಿಯನ್ನು ಬಿಡುಗಡೆಗೆ ಸಜ್ಜುಗೊಳಿಸಲಾಗುತ್ತದೆ.

ಕೌಶಲ ತರಬೇತಿ ಪಡೆದವರು ಸ್ವಂತ ಉದ್ದಿಮೆ ಪ್ರಾರಂಭಿಸಬಹುದು. ಉದ್ದಿಮೆಗಳಲ್ಲಿ ಸೇರಿ ತಮ್ಮ ಜೀವನ ರೂಪಿಸಿಕೊಳ್ಳಬಹುದು. ಹತ್ತಾರು ವರ್ಷ ಕಾರಾಗೃಹದಲ್ಲಿ ಇದ್ದವರು ಸಮಾಜದ ಮುಖ್ಯವಾಹಿಗೆ ಹೊಂದಿಕೊಳ್ಳುವುದು, ಆದಾಯ ಗಳಿಸುವುದು ತುಂಬಾ ಕಷ್ಟ. ಆದ್ದರಿಂದ ಕೌಶಲ್ಯ ತರಬೇತಿಗಳಿಂದ ಕಲಿತಿರುವುದನ್ನು ಸಹಾಯ ಮಾಡುತ್ತದೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕಿ ತಿಳಿಸಿದರು.

ಕಾರಾಗೃಹ ಜನರನ್ನು ಇಟ್ಟುಕೊಳ್ಳುವ ಸ್ಥಳವಲ್ಲ. ನ್ಯಾಯದಾನ ಪದ್ದತಿಯನ್ನು ಕಾನೂನು ಬಾಹಿರ ಚಟುವಟಿಕೆಯನ್ನು ಮಾಡಿದವರಿಗೆ ಈ ತರಹದ ಶಿಕ್ಷಾ ವಿಧಾನಗಳಿರುತ್ತವೆ. ಅದನ್ನು ಜಾರಿಗೊಳಿಸುವ ಜೊತೆಗೆ ಅವರ ಮನಪರಿವರ್ತನೆ ಮಾಡುವ ಜವಾಬ್ದಾರಿ ಕಾರಾಗೃಹದ ಮೇಲೆ ಇರುತ್ತದೆ. ಶಿಕ್ಷೆಯನ್ನು ಜಾರಿಗೊಳಿಸುವುದ ಜೊತೆಗೆ ಅವರನ್ನು ಶಿಕ್ಷಣವನ್ನು ನೀಡಲಾಗುತ್ತದೆ.

ಇಲ್ಲಿಗೆ ಬಂದಾಗ ಖೈದಿ ಎಂದು ನೋಡದೆ ವ್ಯಕ್ತಿಯಾಗಿ ನೋಡುತ್ತೇವೆ. ಆತನಲ್ಲಿರುವ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತೇವೆ. ಸನ್ನಢತೆ ಆಧಾರದ ಮೇಲೆ ಬಿಡುಗಡೆ ಮಾಡುವುದು ಜೀವನ ನಡೆಸಲು ನೀಡುವ ಎರಡನೇ ಅವಕಾಶದಂತೆ. ಅದಕ್ಕೆ ಸಮಾಜವೂ ಅನುವು ಮಾಡಿಕೊಡಬೇಕು. ಹೊಸ ಮನಷ್ಯರಾಗಿ ಸ್ವೀಕರಿಸಬೇಕು. ಬಿಡುಗಡೆಯಾಗಲಿರುವ ಕೈದಿಗಳು ಅಪರಾಧ ಮುಕ್ತ ಸಮಾಜದ ರಾಯಬಾರಿಗಳಾಗಲಿ ಎಂದು ಮುಖ್ಯ ಅಧೀಕ್ಷಕಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾರಾಗೃಹ ಇಲಾಖೆಯ ಜೈಲರ್‌ಗಳಾದ ಧರಣೇಶ್, ಗೀತಾ, ಅಮರ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಇದನ್ನೂ ಓದಿ : ರೌಡಿಶೀಟರ್ ಕೊಲೆ ಪ್ರಕರಣ: 11 ಜನರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.