ETV Bharat / state

ಮೈಸೂರು ದಸರಾ 2023 : ಪುರಾತನ ಕಟ್ಟಡಗಳ ಇತಿಹಾಸ ತಿಳಿಸುವ ಪಾರಂಪರಿಕ ನಡಿಗೆ

author img

By ETV Bharat Karnataka Team

Published : Oct 21, 2023, 2:25 PM IST

ಪಾರಂಪರಿಕ ಕಟ್ಟಡಗಳ ಬಗ್ಗೆ ಅರಿವು ಮೂಡಿಸಿ ಸಂರಕ್ಷಿಸಿ ಉಳಿಸಲು ಪಾರಂಪರಿಕ ನಡಿಗೆಗಳು ಮುಖ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಾ. ಜಿ. ರೂಪ ಹೇಳಿದರು.

heritage walk
ಪುರಾತನ ಕಟ್ಟಡಗಳ ಇತಿಹಾಸ ತಿಳಿಸುವ ಪಾರಂಪರಿಕ ನಡಿಗೆ
ಪುರಾತನ ಕಟ್ಟಡಗಳ ಇತಿಹಾಸ ತಿಳಿಸುವ ಪಾರಂಪರಿಕ ನಡಿಗೆ

ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ, ಜನಸಾಮನ್ಯರಿಗೆ ಹಾಗೂ ಪ್ರವಾಸಿಗರಿಗೆ ಮೈಸೂರಿನ ಇತಿಹಾಸ, ಪಾರಂಪರಿಕ ಕಟ್ಟಡಗಳ ಹಿನ್ನೆಲೆ, ಪ್ರಾಮುಖ್ಯತೆ ಬಗ್ಗೆ ತಿಳಿಸಿಲು ಶನಿವಾರ ರಂಗಚಾರ್ಲು ಭವನದಲ್ಲಿ (ಟೌನ್ ಹಾಲ್) ಆಯೋಜಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಾ. ಜಿ. ರೂಪ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೈಸೂರು ಎಂದಾಕ್ಷಣ ನೆನಪಿಗೆ ಬರುವುದೇ ಯೋಗ ನಗರಿ, ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ ಹಾಗೂ ಪರಂಪರೆ ನಗರಿ ಎಂದು. ಇಂತಹ ಪರಂಪರೆಯುಳ್ಳ ನಗರಿಯ ಇತಿಹಾಸವನ್ನು ಪಾರಂಪರಿಕ ನಡಿಗೆಯ ಮೂಲಕ ತಿಳಿದುಕೊಳ್ಳಬೇಕು. ಮೈಸೂರಿನಲ್ಲೇ ಅನೇಕ ಪಾರಂಪರಿಕ ಕಟ್ಟಡಗಳಿವೆ. ಅವುಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕ ಎಂದು ಹೇಳಿದರು.

ಡಾ. ಶಳ್ವ ಪಿಳ್ಳೆ ಅಯ್ಯಂಗಾರ್ ಮಾತನಾಡಿ, ಈ ರಂಗಚಾರ್ಲು ಪುರಭವನವನ್ನು (ಟೌನ್ ಹಾಲ್) ದಿವಾನ್ ರಂಗಚಾರ್ಲು ಅವರ ಸೇವೆಯ ಸವಿನೆನಪಿಗಾಗಿ 10ನೇ ಚಾಮರಾಜ ಒಡೆಯರ್ ಅವರು 1884ರ ಏ. 01 ರಂದು ಕಟ್ಟಿಸಿದ್ದರು. ಈ ಭವನದ ವಿಶೇಷತೆ ಎಂದರೆ ಸಿಮೆಂಟ್ ಬಳಸದೆ ನಿರ್ಮಿಸಿರುವ ಕಟ್ಟಡವಾಗಿದೆ ಎಂದು ಮಾಹಿತಿ ನೀಡಿದರು.

ಸಾಮಾನ್ಯವಾಗಿ ಎಲ್ಲರೂ ಸಿಮೆಂಟ್ ಕಟ್ಟಡಗಳು ಹೆಚ್ಚು ಸದೃಢವಾಗಿರುತ್ತದೆ ಎಂದು ನಂಬಿರುತ್ತಾರೆ. ಆದರೆ ಸಿಮೆಂಟ್ ಕಟ್ಟಡಗಳ ಆಯಸ್ಸು ಕೇವಲ 60 ರಿಂದ 70 ವರ್ಷಗಳು ಮಾತ್ರ. ಹೀಗಾಗಿ, ಇಂತಹ ಕಟ್ಟಡಗಳನ್ನು ಮಾರ್ಟರ್ ಬಳಸಿ ಕಟ್ಟಿದ್ದರಿಂದ ಇಂದಿಗೂ ಅನೇಕ ಕಟ್ಟಡಗಳು ಕಾಣಸಿಗುತ್ತಿವೆ. ಭಾರತದ ಸಂವಿಧಾನದಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಿಸಬೇಕು ಎಂದು ತಿಳಿಸಲಾಗಿದೆ. ಸರ್ಕಾರ ಒಂದೇ ಸಂರಕ್ಷಿಸಲು ಆಗುವುದಿಲ್ಲ. ಅದಕ್ಕೆ ಎಲ್ಲರ ಸಹಕಾರ ಅವಶ್ಯಕ. ಹೀಗಾಗಿ, ಇಂತಹ ಕಟ್ಟಡಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿದರು.

ಪಾರಂಪರಿಕ ನಡಿಗೆಯಲ್ಲಿ ಭಾಗವಹಿಸಿದ್ದ ಮಹಾಜನ ಪ್ರಥಮ ದರ್ಜೆ ಕಾಲೇಜು, ಟೆರಿಷಿಯನ್ ಕಾಲೇಜ್, ಆಡಳಿತ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಸೇರಿದಂತೆ 180ಕ್ಕೂ ಹೆಚ್ಚು ಮಂದಿಗೆ ನಿವೃತ್ತ ಪ್ರೋಫೆಸರ್ ಡಾ. ಎನ್.ಎಸ್.ರಂಗರಾಜು ಹಾಗೂ ಇತಿಹಾಸಕಾರರಾದ ಡಾ.ಶಳ್ವ ಪಿಳ್ಳೆ ಅಯ್ಯಂಗಾರ್ ಅವರು ಕಟ್ಟಡಗಳ ಇತಿಹಾಸಗಳ ಬಗ್ಗೆ ಸುಂದರವಾಗಿ ವಿವರಿಸಿದರು.

ನಡಿಗೆಯು ರಂಗಚಾರ್ಲು ಪುರಭವನದಿಂದ ಪ್ರಾರಂಭವಾಗಿ ಸಿಲ್ವರ್ ಜೂಬಿಲಿ ಕ್ಲಾಕ್ ಟವರ್ (ದೊಡ್ಡಗಡಿಯಾರ), ಫ್ರಿಮೇಸನ್ಸ್ ಕ್ಲಬ್, 10ನೇ ಚಾಮರಾಜ ಒಡೆಯರ್ ವೃತ್ತ, ಅರಮನೆ, 4ನೇ ಕೃಷ್ಣರಾಜ ಒಡೆಯರ್ ವೃತ್ತ, ಚಿಕ್ಕ ಗಡಿಯಾರ, ದೇವರಾಜ ಮಾರುಕಟ್ಟೆ, ಕೃಷ್ಣರಾಜ ಆಸ್ಪತ್ರೆ, ಮೈಸೂರು ಮೆಡಿಕಲ್ ಕಾಲೇಜು, ಸರ್ಕಾರಿ ಆರ್ಯುವೇದ ಕಾಲೇಜು ಹಾಗೂ ಚಾಮರಾಜೇಂದ್ರ ಟೆಕ್ನಿಕಲ್ ಇನ್ಸಿಟಿಟ್ಯೂಟ್, ಕಾವೇರಿ ಎಂಪೋರಿಯಂ ಹಾಗೂ ಗಾಂಧಿ ವೃತ್ತವನ್ನು ಹಾದು ರಂಗಚಾರ್ಲು ಪುರಭವನದ ಹತ್ತಿರ ಮುಕ್ತಾಯಗೊಂಡಿತು.

ಈ ವೇಳೆ ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಾ.ಜಿ.ರೂಪ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ಎ. ದೇವರಾಜ, ಉಪ ನಿರ್ದೇಶಕರಾದ ಮಂಜುಳ ಸೇರಿದಂತೆ ಇತರರು ಹಾಜರಿದ್ದರು.

ಇದನ್ನೂ ಓದಿ : ಶಿವಮೊಗ್ಗ : ಸಂಗಮ ಕ್ಷೇತ್ರ ನಿಲುವಾಂಬೆ ಶಾರದ ದೇವಿ ಸನ್ನಿದಿಯಲ್ಲಿ ಮಕ್ಕಳ ಅಕ್ಷರಭ್ಯಾಸ..

ಪುರಾತನ ಕಟ್ಟಡಗಳ ಇತಿಹಾಸ ತಿಳಿಸುವ ಪಾರಂಪರಿಕ ನಡಿಗೆ

ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ, ಜನಸಾಮನ್ಯರಿಗೆ ಹಾಗೂ ಪ್ರವಾಸಿಗರಿಗೆ ಮೈಸೂರಿನ ಇತಿಹಾಸ, ಪಾರಂಪರಿಕ ಕಟ್ಟಡಗಳ ಹಿನ್ನೆಲೆ, ಪ್ರಾಮುಖ್ಯತೆ ಬಗ್ಗೆ ತಿಳಿಸಿಲು ಶನಿವಾರ ರಂಗಚಾರ್ಲು ಭವನದಲ್ಲಿ (ಟೌನ್ ಹಾಲ್) ಆಯೋಜಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಾ. ಜಿ. ರೂಪ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೈಸೂರು ಎಂದಾಕ್ಷಣ ನೆನಪಿಗೆ ಬರುವುದೇ ಯೋಗ ನಗರಿ, ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ ಹಾಗೂ ಪರಂಪರೆ ನಗರಿ ಎಂದು. ಇಂತಹ ಪರಂಪರೆಯುಳ್ಳ ನಗರಿಯ ಇತಿಹಾಸವನ್ನು ಪಾರಂಪರಿಕ ನಡಿಗೆಯ ಮೂಲಕ ತಿಳಿದುಕೊಳ್ಳಬೇಕು. ಮೈಸೂರಿನಲ್ಲೇ ಅನೇಕ ಪಾರಂಪರಿಕ ಕಟ್ಟಡಗಳಿವೆ. ಅವುಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕ ಎಂದು ಹೇಳಿದರು.

ಡಾ. ಶಳ್ವ ಪಿಳ್ಳೆ ಅಯ್ಯಂಗಾರ್ ಮಾತನಾಡಿ, ಈ ರಂಗಚಾರ್ಲು ಪುರಭವನವನ್ನು (ಟೌನ್ ಹಾಲ್) ದಿವಾನ್ ರಂಗಚಾರ್ಲು ಅವರ ಸೇವೆಯ ಸವಿನೆನಪಿಗಾಗಿ 10ನೇ ಚಾಮರಾಜ ಒಡೆಯರ್ ಅವರು 1884ರ ಏ. 01 ರಂದು ಕಟ್ಟಿಸಿದ್ದರು. ಈ ಭವನದ ವಿಶೇಷತೆ ಎಂದರೆ ಸಿಮೆಂಟ್ ಬಳಸದೆ ನಿರ್ಮಿಸಿರುವ ಕಟ್ಟಡವಾಗಿದೆ ಎಂದು ಮಾಹಿತಿ ನೀಡಿದರು.

ಸಾಮಾನ್ಯವಾಗಿ ಎಲ್ಲರೂ ಸಿಮೆಂಟ್ ಕಟ್ಟಡಗಳು ಹೆಚ್ಚು ಸದೃಢವಾಗಿರುತ್ತದೆ ಎಂದು ನಂಬಿರುತ್ತಾರೆ. ಆದರೆ ಸಿಮೆಂಟ್ ಕಟ್ಟಡಗಳ ಆಯಸ್ಸು ಕೇವಲ 60 ರಿಂದ 70 ವರ್ಷಗಳು ಮಾತ್ರ. ಹೀಗಾಗಿ, ಇಂತಹ ಕಟ್ಟಡಗಳನ್ನು ಮಾರ್ಟರ್ ಬಳಸಿ ಕಟ್ಟಿದ್ದರಿಂದ ಇಂದಿಗೂ ಅನೇಕ ಕಟ್ಟಡಗಳು ಕಾಣಸಿಗುತ್ತಿವೆ. ಭಾರತದ ಸಂವಿಧಾನದಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಿಸಬೇಕು ಎಂದು ತಿಳಿಸಲಾಗಿದೆ. ಸರ್ಕಾರ ಒಂದೇ ಸಂರಕ್ಷಿಸಲು ಆಗುವುದಿಲ್ಲ. ಅದಕ್ಕೆ ಎಲ್ಲರ ಸಹಕಾರ ಅವಶ್ಯಕ. ಹೀಗಾಗಿ, ಇಂತಹ ಕಟ್ಟಡಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿದರು.

ಪಾರಂಪರಿಕ ನಡಿಗೆಯಲ್ಲಿ ಭಾಗವಹಿಸಿದ್ದ ಮಹಾಜನ ಪ್ರಥಮ ದರ್ಜೆ ಕಾಲೇಜು, ಟೆರಿಷಿಯನ್ ಕಾಲೇಜ್, ಆಡಳಿತ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಸೇರಿದಂತೆ 180ಕ್ಕೂ ಹೆಚ್ಚು ಮಂದಿಗೆ ನಿವೃತ್ತ ಪ್ರೋಫೆಸರ್ ಡಾ. ಎನ್.ಎಸ್.ರಂಗರಾಜು ಹಾಗೂ ಇತಿಹಾಸಕಾರರಾದ ಡಾ.ಶಳ್ವ ಪಿಳ್ಳೆ ಅಯ್ಯಂಗಾರ್ ಅವರು ಕಟ್ಟಡಗಳ ಇತಿಹಾಸಗಳ ಬಗ್ಗೆ ಸುಂದರವಾಗಿ ವಿವರಿಸಿದರು.

ನಡಿಗೆಯು ರಂಗಚಾರ್ಲು ಪುರಭವನದಿಂದ ಪ್ರಾರಂಭವಾಗಿ ಸಿಲ್ವರ್ ಜೂಬಿಲಿ ಕ್ಲಾಕ್ ಟವರ್ (ದೊಡ್ಡಗಡಿಯಾರ), ಫ್ರಿಮೇಸನ್ಸ್ ಕ್ಲಬ್, 10ನೇ ಚಾಮರಾಜ ಒಡೆಯರ್ ವೃತ್ತ, ಅರಮನೆ, 4ನೇ ಕೃಷ್ಣರಾಜ ಒಡೆಯರ್ ವೃತ್ತ, ಚಿಕ್ಕ ಗಡಿಯಾರ, ದೇವರಾಜ ಮಾರುಕಟ್ಟೆ, ಕೃಷ್ಣರಾಜ ಆಸ್ಪತ್ರೆ, ಮೈಸೂರು ಮೆಡಿಕಲ್ ಕಾಲೇಜು, ಸರ್ಕಾರಿ ಆರ್ಯುವೇದ ಕಾಲೇಜು ಹಾಗೂ ಚಾಮರಾಜೇಂದ್ರ ಟೆಕ್ನಿಕಲ್ ಇನ್ಸಿಟಿಟ್ಯೂಟ್, ಕಾವೇರಿ ಎಂಪೋರಿಯಂ ಹಾಗೂ ಗಾಂಧಿ ವೃತ್ತವನ್ನು ಹಾದು ರಂಗಚಾರ್ಲು ಪುರಭವನದ ಹತ್ತಿರ ಮುಕ್ತಾಯಗೊಂಡಿತು.

ಈ ವೇಳೆ ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಾ.ಜಿ.ರೂಪ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ಎ. ದೇವರಾಜ, ಉಪ ನಿರ್ದೇಶಕರಾದ ಮಂಜುಳ ಸೇರಿದಂತೆ ಇತರರು ಹಾಜರಿದ್ದರು.

ಇದನ್ನೂ ಓದಿ : ಶಿವಮೊಗ್ಗ : ಸಂಗಮ ಕ್ಷೇತ್ರ ನಿಲುವಾಂಬೆ ಶಾರದ ದೇವಿ ಸನ್ನಿದಿಯಲ್ಲಿ ಮಕ್ಕಳ ಅಕ್ಷರಭ್ಯಾಸ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.