ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಬಗ್ಗೆ ನಿಖರ ಮಾಹಿತಿ ಗೊತ್ತಾಗುತ್ತಿಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ತುರ್ತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮರಾಜನಗರ ಘಟನೆ ಇಡೀ ದೇಶದಲ್ಲೇ ಸುದ್ದಿಯಾದರೂ ನಮ್ಮ ರಾಜ್ಯದಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ರೋಗಿಗಳಿಗೆ ಆಕ್ಸಿಜನ್, ಬೆಡ್ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಲೇ ಎಚ್ಚೆತ್ತುಕೊಳ್ಳದಿದದ್ದರೆ ಅಪಾಯ ಖಂಡಿತಾ ಎದುರಾಗಲಿದೆ ಎಂದರು.
ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಸರಿಪಡಿಸಬೇಕು. ಜೊತೆಗೆ ಆಕ್ಸಿಜನ್ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಬೇಕು. ಇದನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿಗಳನ್ನು ನೋಡಿ ಕಲಿಯಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಸರ್ಕಾರವೇ ಇಲ್ಲ. ನಮ್ಮ ರಾಜ್ಯಕ್ಕೆ ಬೇಕಾದ ಕೋವಿಡ್ ಸೌಲಭ್ಯಗಳನ್ನು ತರಲು ಎಲ್ಲಾ ಸಂಸದರು ಸಂಪೂರ್ಣ ವಿಫಲರಾಗಿದ್ದು, ಆಡಳಿತ ವರ್ಗ ಮತ್ತು ಅಧಿಕಾರಿಗಳ ವರ್ಗ ಸಂಪೂರ್ಣ ವಿಫಲವಾಗಿದೆ.
ಕೊರೊನಾದಿಂದ ವ್ಯವಸ್ಥೆಯೇ ಕೆಟ್ಟು ಹೋಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ವೈರಸ್ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಓದಿ: ಖಾಸಗಿ ಆಸ್ಪತ್ರೆಗಳು ಕಣ್ಣಾ ಮುಚ್ಚಾಲೇ ಆಟ ಬಿಟ್ಟು ಸರ್ಕಾರಕ್ಕೆ ನೀಡಬೇಕಾದ ಬೆಡ್ ಕೊಡಿ : ಸಚಿವ ಅಶೋಕ್ ಎಚ್ಚರಿಕೆ